ನೂರಾರು ಎಕರೆ ಗೋಮಾಳ ಭೂಮಾಫಿಯಾಗೆ?


Team Udayavani, Oct 16, 2019, 3:44 PM IST

kolar-tdy-1

ಕೋಲಾರ: ತಾಲೂಕಿನ ಹೊಳಲಿ ಗ್ರಾಮದ ಬಳಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಜಾಗ ಹಸ್ತಾಂತರವಾಗುತ್ತಿದ್ದಂತೆಯೇ ಸುತ್ತಮುತ್ತಲ ನೂರಾರು ಎಕರೆ ಗೋಮಾಳ ಭೂಮಿಗೆ ನಕಲಿ ದಾಖಲೆ ಸೃಷ್ಟಿಸಿ, ಕಬಳಿಸಿರುವ ಅಂಶ ಬೆಳಕಿಗೆ ಬಂದಿದೆ.

ಅಧಿಕಾರಿಗಳು ಮತ್ತು ಬೆಂಗಳೂರಿನ ಭೂಮಾಫಿಯಾ ವ್ಯಕ್ತಿಗಳು ಹೊಳಲಿ ಗೋಮಾಳ ಜಮೀನಿನ ಕಬಳಿಕೆಯಲ್ಲಿ ಭಾಗಿಯಾಗಿದ್ದು, ಸಾರ್ವಜನಿಕರಿಂದ ಬಂದ ದೂರುಗಳ ಮೇರೆಗೆ ಉಪವಿಭಾಗಾಧಿಕಾರಿ ಯವರು ಹೊಳಲಿ ಗ್ರಾಮದ ಸರ್ವೆ ಸಂಖ್ಯೆ 103ರ ಗೋಮಾಳ ಜಮೀನಿಗೆ ಸಂಬಂಧ ಪಟ್ಟಂತೆ ಸಮಗ್ರ ವರದಿ ನೀಡುವಂತೆ ತಹಶೀ ಲ್ದಾರ್‌ಗೆ ಪತ್ರ ಬರೆದು ಸೂಚಿಸಿದ್ದಾರೆ.

422 ಎಕರೆ ಗೋಮಾಳ: ಕೋಲಾರ ತಾಲೂಕಿನ ಹೊಳಲಿ ಗ್ರಾಮದ ಸರ್ವೇ ಸಂಖ್ಯೆ 103ರ ವ್ಯಾಪ್ತಿಗೆ 422 ಎಕರೆ ಭೂಮಿಒಳಪಡುತ್ತದೆ. ಈ ಜಮೀನಿನಲ್ಲಿ ಸ್ವಲ್ಪ ಭಾಗವನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣ ಮಾಡಲು ಮಂಜೂರು ಮಾಡುವಂತೆ ಕರ್ನಾಟಕ ಕ್ರಿಕೆಟ್‌ ಅಸೋಸಿಯೇಷನ್‌ ಐದಾರು ವರ್ಷಗಳಿಂದಲೂ ಪ್ರಯತ್ನ ಪಡುತ್ತಿದೆ. ಹೊಳಲಿ ಗೋಮಾಳ ಜಮೀನಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣವಾಗುವುದರಿಂದ ಸುತ್ತಮುತ್ತಲ ಜಮೀನಿಗೆ ಬಂಗಾರದ ಬೆಲೆ ಬರುತ್ತದೆ ಎಂದು ನಿರೀಕ್ಷಿಸಿದ್ದ ಬೆಂಗಳೂರಿನ ಭೂಮಾಫಿಯಾದಾರರು, ಭೂಕಬಳಿಕೆಗಾಗಿ ತಮ್ಮೆಲ್ಲಾ ಅಸ್ತ್ರಗಳನ್ನು ಪ್ರಯೋಗಿಸಿ ಭೂ ಮಂಜೂರಾತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಭೂ ಮಾಫಿಯಾದ ಆಮಿಷಕ್ಕೆ ತುತ್ತಾಗಿದ್ದ ಕೋಲಾರ ತಾಲೂಕಿನ ಕೆಲವು ತಹಶೀಲ್ದಾರ್‌ಗಳು ಭೂಕಬಳಿಕೆಗೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಾಥ್‌ ನೀಡಿರುವ ಆರೋಪಗಳಿವೆ.

ತನಿಖೆಗೆ ಡಿ.ಕೆ.ರವಿ ಆದೇಶ: ಕೋಲಾರ ಹೊಳಲಿ ಗೋಮಾಳ ಜಮೀನಿನಲ್ಲಿ 16 ಎಕರೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಎರಡು ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣ ಮಾಡಲು ಆಸಕ್ತಿ ತೋರಿಸಿದ್ದ ಜಿಲ್ಲಾಧಿಕಾರಿ ಡಿ.ಕೆ.ರವಿ ಗಮನಕ್ಕೆ ಭೂಕಬಳಿಕೆದಾರರ ಕೃತ್ಯಗಳು ಬಂದಿದ್ದವು. ಅವರು ಆಗಲೇ ಸೂಕ್ತ ತನಿಖೆ ಕೈಗೊಳ್ಳುವಂತೆ ಕೋಲಾರ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದ್ದರು.  ಆದರೆ, ಕೋಲಾರ ತಹಶೀ ಲ್ದಾರ್‌ಗಳ ಪೈಕಿ ಕೆಲವರು ಈ ಭೂಮಾಫಿಯಾ ಕೃತ್ಯದಲ್ಲಿ ಭಾಗಿದಾರ ರಾಗಿದ್ದರಿಂದ ತಹಶೀಲ್ದಾರ್‌ ಹಂತದಲ್ಲಿ ಹೊಳಲಿ ಗೋಮಾಳ ಭೂಕಬಳಿಕೆ ಕುರಿತು ತನಿಖೆ ನಡೆಯಲೇ ಇಲ್ಲ ಎನ್ನಲಾಗುತ್ತಿದೆ.

ಕ್ರೀಡಾಂಗಣಕ್ಕೆ ಭೂ ಮಂಜೂರು: ಕೆಲವು ತಿಂಗಳುಗಳ ಹಿಂದಷ್ಟೇ ಜಿಲ್ಲಾಧಿಕಾರಿ ಜೆ. ಮಂಜುನಾಥ್‌, ಹೊಳಲಿ ಗೋಮಾಳ ಜಮೀನಿನ 16 ಎಕರೆ ಪ್ರದೇಶವನ್ನು ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಸರ್ಕಾರ ಮಂಜೂರು ಮಾಡಿದೆ ಎಂದು ಘೋಷಿಸಿ, ಪತ್ರಗಳನ್ನು ಕರ್ನಾಟಕ ಕ್ರಿಕೆಟ್‌ ಅಸೋಸಿಯೇಷನ್‌ಗೆ ಹಸ್ತಾಂತರಿಸಿದ್ದರು. ಇವೆಲ್ಲಾ ಘಟನಾವಳಿಗಳು ನಡೆಯುತ್ತಿರುವಾಗಲೇ, 150 ಎಕರೆ ಗೋಮಾಳ ಜಮೀನು ಅಕ್ರಮವಾಗಿ ಪರಭಾರೆಯಾಗಿದೆ ಎಂದು ತಿಳಿದು ಬಂದಿದೆ. ನಕಲಿ ದಾಖಲೆಗಳ ಮೂಲಕ ಗೋಮಾಳ ಜಮೀನು ಖರೀದಿಸಿದ್ದವರು ತಮ್ಮ ಶಕಾನುಸಾರ ಪಡೆದುಕೊಂಡಿರುವ ಜಮೀನಿಗೆ ಈಗ ಕಾಂಪೌಂಡ್‌, ಬೇಲಿ ಹಾಕಿಕೊಂಡು ಭದ್ರಪಡಿಸಿಕೊಳ್ಳುತ್ತಿದ್ದಾರೆ. ಕೆಲವರು ತಾತ್ಕಾಲಿಕವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ. ಕೆಲವರು ತಾವು ಅಕ್ರಮವಾಗಿ ನಕಲಿ ದಾಖಲೆಗಳ ಮೂಲಕ ಸಂಪಾದಿಸಿಕೊಂಡಿರುವ ಜಮೀನು ಮಾರಾಟಕ್ಕೂ ಇಟ್ಟಿದ್ದಾರೆ.

ಭೂ ಮಂಜೂರಿಗೆ ಸತತ ಪ್ರಯತ್ನ: ಕ್ರಿಕೆಟ್‌ ಕ್ರೀಡಾಂಗಣಕ್ಕೆ ಜಮೀನು ಮಂಜೂರು ಮಾಡಿಸಿಕೊಳ್ಳಲು ಐದಾರು ವರ್ಷ ಪ್ರಯತ್ನ ಆಗಬೇಕಾದರೆ, ನಕಲಿ ದಾಖಲೆಗಳ ಮೂಲಕ ಜಮೀನು ಮಂಜೂರಾತಿ ಹೇಗೆ ಆಗಿದೆ ಎನ್ನುವುದು ಅನುಮಾನಕ್ಕೆ ಎಡೆ ಮಾಡಿದೆ.

 

-ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.