8 ವಿಧಾನಸಭಾ ಕ್ಷೇತ್ರ ‘ಕೈ’ ಮುಕ್ತ ಮಾಡ್ತೇನೆ

ಗೆಲುವಿಗೆ ಸಹಕರಿಸಿದ ಕೆಎಚ್ಎಂ ವಿರೋಧಿಗಳಿಗೆ ಶಾಕ್‌ ಕೊಟ್ಟ ಬಿಜೆಪಿ ಸಂಸದ • ಚಕಾರವೆತ್ತದ ಕಾಂಗ್ರೆಸ್‌

Team Udayavani, May 27, 2019, 9:04 AM IST

kolar-tdy-1..

ಸಂಸದ ಎಸ್‌.ಮುನಿಸ್ವಾಮಿ. Copyright 2019 © Udayavani | Contact Us

ಕೋಲಾರ: ಲೋಕಸಭಾ ಕ್ಷೇತ್ರದ ನೂತನ ಬಿಜೆಪಿ ಸಂಸದ ಎಸ್‌.ಮುನಿಸ್ವಾಮಿ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುಕ್ತ ಮಾಡಿಸಿ ಬಿಜೆಪಿ ಗೆಲ್ಲುವಂತೆ ಮಾಡುವುದೇ ತಮ್ಮ ಗುರಿ ಎಂಬ ಹೇಳಿಕೆ ಜಿಲ್ಲೆಯ ರಾಜಕೀಯದಲ್ಲಿ ಹಲವು ಅನುಮಾನ ಮೂಡಿಸಿದೆ.

ಚುನಾವಣೆಗೂ ಮುನ್ನ ಸರ್ವ ಪಕ್ಷಗಳ ಮುಖಂಡರ ಸಹಕಾರದಿಂದ ತಾವು ಗೆದ್ದಿದ್ದು, ಎಲ್ಲರ ಮಾರ್ಗದರ್ಶನದಲ್ಲಿ ಮುನ್ನಡೆಯುವುದಾಗಿ ಹೇಳುತ್ತಿದ್ದ ಎಸ್‌.ಮುನಿಸ್ವಾಮಿ, ಗೆದ್ದ ಮಾರನೇ ದಿನವೇ ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಎಂಟು ಕ್ಷೇತ್ರಗಳನ್ನು ಕಾಂಗ್ರೆಸ್‌ ಮುಕ್ತ ಮಾಡಿ ಬಿಜೆಪಿ ಗೆಲ್ಲಿಸಿಕೊಳ್ಳುತ್ತೇನೆ ಎನ್ನುವ ಮೂಲಕ ಹತ್ತಿದ್ದ ಏಣಿಯನ್ನು ಒದೆಯುತ್ತಿದ್ದಾರೆಯೇ ಎಂಬ ಅನುಮಾನ ಮೂಡಿಸುತ್ತಿದೆ.

ಚಕಾರವೆತ್ತದ ಶಾಸಕರು: ಸಾಮಾನ್ಯವಾಗಿ ಯಾವುದೇ ಪಕ್ಷವನ್ನು ಹೀಗೆ ಮುಕ್ತ ಮಾಡಿಬಿಡುತ್ತೇನೆ ಎಂದಾಗ ಮುಕ್ತವಾಗಿಸಿಕೊಂಡ ಆರೋಪ ಹೊತ್ತ ಪಕ್ಷದ ಮುಖಂಡರು ಇದನ್ನು ಖಂಡಿಸುವುದು ವಾಡಿಕೆ. ಆದರೆ, ಆಶ್ಚರ್ಯವೆಂದರೆ ಲೋಕಸಭಾ ಚುನಾವಣೆಯಲ್ಲಿ ಎಸ್‌.ಮುನಿಸ್ವಾಮಿಗೆ ಹಿಂಬಾಲಕರಂತೆ ಜೈಕಾರ ಕೂಗಿದ್ದ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಘಟಾನುಘಟಿ ನಾಯಕರು ತುಟಿ ಬಿಚ್ಚದಿರುವುದನ್ನು ಗಮನಿಸಿದರೆ ಈ ಹೇಳಿಕೆಯ ಹಿಂದೆ ಸತ್ಯ ಅಡಗಿದೆಯೇ ಎಂಬ ಅನುಮಾನವೂ ಮೂಡುವಂತಾಗಿದೆ. ಈ ಕುರಿತು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಳೆಯದಲ್ಲಿ ಮೂಡಿರುವ ಮೌನವನ್ನು ಗಮನಿಸಿದರೆ ಕೋಲಾರ ಜಿಲ್ಲೆಯ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಾಯಕರು ಸರಾಸಗಟಾಗಿ ಬಿಜೆಪಿಗೆ ಹೋಗುವ ತಯಾರಿಯಲ್ಲಿದ್ದಾರೆಯೇ ಎಂಬ ಪ್ರಶ್ನೆಯೂ ಕಾಡುವಂತಾಗಿದೆ.

ಬಿಜೆಪಿಗೆ ಹೋಗ್ತಾರ ಆರು ಶಾಸಕರು?: ಅದೆೇ ಸಮಾರಂಭದಲ್ಲಿ ಎಸ್‌.ಮುನಿಸ್ವಾಮಿ, ಕೋಲಾರ ಕ್ಷೇತ್ರದ ಆರು ಮಂದಿ ಬಿಜೆಪಿಗೆ ಬರಲು ಸಿದ್ಧರಾಗಿದ್ದಾರೆ. ಸದ್ಯಕ್ಕೆ ಅವರ ಹೆಸರುಗಳನ್ನು ಹೇಳುವುದಿಲ್ಲವೆಂದು ಹೇಳಿದ್ದರು. ಕೋಲಾರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಐದು ಕಾಂಗ್ರೆಸ್‌ ಶಾಸಕರು, ಇಬ್ಬರು ಜೆಡಿಎಸ್‌ ಶಾಸಕರು ಹಾಗೂ ಒಬ್ಬರು ಪಕ್ಷೇತರ ಶಾಸಕರಿದ್ದಾರೆ. ಜೆಡಿಎಸ್‌ ಶಾಸಕರ ಪೈಕಿ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಈಗಾಗಲೇ ನೇರವಾಗಿಯೇ ಬಿಜೆಪಿಗೆ ಬೆಂಬಲ ಘೋಷಿಸಿ, ತಾವು ಬಿಜೆಪಿಗೆ ಸೇರುವ ಅನುಮಾನ ಮೂಡಿಸಿದ್ದಾರೆ.

ಉಳಿದಂತೆ ಚಿಂತಾಮಣಿಯ ಜೆಡಿಎಸ್‌ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಜೆಡಿಎಸ್‌ ಬಿಟ್ಟು ಬರುವ ಲಕ್ಷಣಗಳು ಕಾಣಿಸುತ್ತಿಲ್ಲ. ಇವರೊಂದಿಗೆ ಕೋಚಿಮುಲ್ ಅಧ್ಯಕ್ಷರಾಗಿರುವ ಕೆ.ವೈ.ನಂಜೇಗೌಡ ತಾವು ಬಿಜೆಪಿ ಬಾಗಿಲು ಕಾಯುತ್ತಿಲ್ಲ ಎಂಬುದನ್ನು ನೇರ ಮಾತುಗಳಿಂದ ಸ್ಪಷ್ಟಪಡಿಸಿದ್ದಾರೆ.

ಶ್ರೀನಿವಾಸಪುರ ಶಾಸಕ ರಮೇಶ್‌ಕುಮಾರ್‌, ಬಂಗಾರಪೇಟೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್‌, ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಮತ್ತು ಮುಳಬಾಗಿಲು ಶಾಸಕ ಎಚ್.ನಾಗೇಶ್‌ ನೂತನ ಬಿಜೆಪಿ ಸಂಸದ ಎಸ್‌.ಮುನಿಸ್ವಾಮಿ ಅವರ ಹೇಳಿಕೆಗೆ ಯಾವುದೇ ರೀತಿಯಿಂದಲೂ ಪ್ರತಿಕ್ರಿಯೆ ನೀಡಿಲ್ಲ. ಆದ್ದರಿಂದ ಕೋಲಾರ ಜಿಲ್ಲೆಯ ನಾಗರಿಕರು ಇವರ ಮೌನವನ್ನು ಬಿಜೆಪಿಗೆ ಹೋಗಲು ಸಮ್ಮತಿ ಎಂದೇ ಭಾವಿಸಿಕೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ ಜೆಡಿಎಸ್‌ ಮುಕ್ತವಾಗುವ ಹಾದಿ ಸನಿಹದಲ್ಲಿದೆಯೇ ಎಂಬ ಅನುಮಾನ ವ್ಯಕ್ತವಾಗುವಂತಾಗಿದೆ.

ಮೌನ ಸಮ್ಮತಿ: ಕೋಲಾರ ಲೋಕಸಭಾ ಕ್ಷೇತ್ರದ ಎಂಟೂ ಕ್ಷೇತ್ರಗಳಲ್ಲಿ ಯಾವುದೇ ಕ್ಷೇತ್ರದಲ್ಲೂ ಬಿಜೆಪಿ ಶಾಸಕರಿಲ್ಲ. ಹೀಗಿದ್ದಾಗಲೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಮುತುವರ್ಜಿಯಿಂದ ಬಿಜೆಪಿಯಿಂದ ಎಸ್‌.ಮುನಿಸ್ವಾಮಿಯನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿಕೊಂಡಾಗಿನಿಂದಲೂ ಗೆಲ್ಲಿಸುವವರೆಗೂ ಪ್ಯಾಕೇಜ್‌ ಒಪ್ಪಿಸಿಕೊಂಡು ಅದನ್ನು ಚಾಚೂ ತಪ್ಪದೆ ನೆರವೇರಿಸಿದ್ದಾರೆ. ಹೀಗಿರುವಾಗ ಎಸ್‌.ಮುನಿಸ್ವಾಮಿಯ ಹೇಳಿಕೆಗೆ ಕೆ.ವೈ.ನಂಜೇಗೌಡರನ್ನು ಹೊರತುಪಡಿಸಿದರೆ ಎಲ್ಲಾ ಏಳು ಮಂದಿ ಶಾಸಕರೂ ಪ್ರತಿಕ್ರಿಯಿಸಿಲ್ಲ. ಕನಿಷ್ಠ ತಮ್ಮ ಬೆಂಬಲಿಗರಿಂದರೂ ಹೇಳಿಕೆ ಕೊಡಿಸಿಲ್ಲ. ಖಂಡಿಸುವ ಮಾತಂತು ಇಲ್ಲವೇ ಇಲ್ಲ. ಈ ಶಾಸಕರ ಮೌನವು ಸಮ್ಮತಿಯೆಂಬಂತೆ ಖಚಿತಪಡುತ್ತಿದೆ.

ಈ ಎಲ್ಲಾ ಶಾಸಕರು ಬಿಜೆಪಿಯ ಹೊಸ್ತಿಲಲ್ಲಿ ಪರೋಕ್ಷವಾಗಿ ನಿಂತಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಎನ್ನುವಂತ ವಾತಾವರಣ ಸದ್ಯಕ್ಕೆ ಕೋಲಾರ ಜಿಲ್ಲೆಯಲ್ಲಿ ಕಂಡು ಬರುತ್ತಿದೆ.

ಕಾಂಗ್ರೆಸ್‌, ಜೆಡಿಎಸ್‌ ಜಿಲ್ಲಾಧ್ಯಕ್ಷರ ಮೌನ: ಜಿಲ್ಲೆಯನ್ನು ಕಾಂಗ್ರೆಸ್‌ ಮುಕ್ತ ಮಾಡಿಸುತ್ತೇನೆ ಎಂಬ ಹೇಳಿಕೆ ಕೇವಲ ಕಾಂಗ್ರೆಸ್‌ ಪಕ್ಷಕ್ಕೆ ಸಂಬಂಧಪಟ್ಟದಾದರೂ, ಎಂಟೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸಿಕೊಳ್ಳುತ್ತೇನೆ ಎಂಬ ಮಾತು ಜೆಡಿಎಸ್‌ಗೆ ಅನ್ವಯಿಸುತ್ತದೆ. ಏಕೆಂದರೆ, ಜಿಲ್ಲೆಯ ಚಿಂತಾಮಣಿ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ಆದರೂ, ನೂತನ ಬಿಜೆಪಿ ಸಂಸದ ಎಸ್‌.ಮುನಿಸ್ವಾಮಿ ಹೇಳಿಕೆಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ.ಚಂದ್ರಾರೆಡ್ಡಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ, ಗೌರವಾಧ್ಯಕ್ಷ ಬಣಕನಹಳ್ಳಿ ನಟರಾಜ್‌, ಅನ್ವರ್‌ ಪಾಷಾ ಆಗಲಿ ಚಕಾರವೆತ್ತಿಲ್ಲ.

ಕಣ್ಣಿಟ್ಟಿದ್ದವರು ಕಾಣಿಸುತ್ತಿಲ್ಲ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 30 ವರ್ಷಗಳಿಂದಲೂ ಕಾಂಗ್ರೆಸ್‌ ಹೈಕಮಾಂಡ್‌ನ‌ಂತೆ ವರ್ತಿಸುತ್ತಿದ್ದವರು ಕೆ.ಎಚ್.ಮುನಿಯಪ್ಪ. ಇಂತ ಪ್ರಬಲ ಕೆ.ಎಚ್.ಮುನಿಯಪ್ಪರನ್ನು ಚುನಾವಣೆಯಲ್ಲಿ ಸೋಲಿಸಿದರೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ನಾಯಕತ್ವ ಅನಾಯಾಸವಾಗಿ ತಮ್ಮ ಪಾಲಾಗುತ್ತದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕರೊಬ್ಬರು ಲೆಕ್ಕಾಚಾರ ಹಾಕಿದ್ದರು.

ಆದರೆ, ಕೆ.ಎಚ್.ಮುನಿಯಪ್ಪ ಸೋತರೂ ತೆರೆಮರೆಯ ಪ್ರಯತ್ನದಲ್ಲಿಯೇ ತಮ್ಮನ್ನು ಬೆಂಬಲಿಸಿದ ಮಾಲೂರು ಶಾಸಕ ಕೆ.ವೈ.ನಂಜೇಗೌಡರನ್ನು ಎಲ್ಲರ ವಿರೋಧದ ನಡುವೆಯೂ ಕೋಚಿಮುಲ್ ಅಧ್ಯಕ್ಷರನ್ನಾಗಿಸುವಲ್ಲಿ ಯಶಸ್ವಿಯಾಗಿದ್ದರು. ಇದರಿಂದ ಕೆ.ಎಚ್.ಮುನಿಯಪ್ಪ ಸೋತರೂ ಪಕ್ಷದಲ್ಲಿ ತಮ್ಮ ಬಿಗಿಪಟ್ಟು ಸಡಿಲಿಸುತ್ತಿಲ್ಲವೆಂಬುದನ್ನು ಕೋಲಾರ ಕಾಂಗ್ರೆಸ್‌ ನಾಯಕತ್ವದ ಮೇಲೆ ಕಣ್ಣಿಟ್ಟಿದ್ದ ನಾಯಕರಿಗೆ ಅರ್ಥವಾಗಿದೆ. ಇದನ್ನು ಅರಗಿಸಿಕೊಳ್ಳದಂತೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿಯೇ ಉಳಿದರೆ ಕೆ.ಎಚ್.ಮುನಿಯಪ್ಪರನ್ನು ಎದುರು ಹಾಕಿಕೊಂಡು ರಾಜಕೀಯ ಮಾಡುವುದು ಕಷ್ಟವೆಂಬ ಸತ್ಯವೂ ಕಣ್ಣಿಗೆ ಕಾಣಿಸುವಂತಾಗಿದೆ. ಇವೆಲ್ಲಾ ಕಾರಣಗಳಿಂದ ಕಾಂಗ್ರೆಸ್‌ ಪಕ್ಷದ ಪರವಾಗಿ ಧ್ವನಿ ಎತ್ತಲು ಯಾವುದೇ ಕಾಂಗ್ರೆಸ್‌ ಶಾಸಕರು ಮುಂದಾಗುತ್ತಿಲ್ಲವೆಂದು ಹೇಳಲಾಗುತ್ತಿದೆ.

● ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.