ಗ್ರಾಪಂಗಳಲ್ಲಿ ಅಕ್ರಮ ಇ ಖಾತೆ: ತನಿಖೆಗೆ ಆಗ್ರಹ


Team Udayavani, Jul 4, 2022, 3:08 PM IST

ಗ್ರಾಪಂಗಳಲ್ಲಿ ಅಕ್ರಮ ಇ ಖಾತೆ: ತನಿಖೆಗೆ ಆಗ್ರಹ

ಬಂಗಾರಪೇಟೆ: ತಾಲೂಕಿನ ಗ್ರಾಪಂಗಳಲ್ಲಿ ಇ ಹಾಗೂ ಬಿ ಖಾತೆಗಳ ಅಕ್ರಮ, ನರೇಗಾ ಕಾಮಗಾರಿಗಳಲ್ಲಿ ನಡೆ ದಿರುವ ಭ್ರಷ್ಟಾಚಾರ ತನಿಖೆಗೆ ವಿಶೇಷ ತಂಡ ರಚನೆ, ಗ್ರಾಮೀಣ ಪ್ರದೇಶ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕೆಂದು ರೈತ ಸಂಘವು ಪಟ್ಟಣದಲ್ಲಿನ ತಾಪಂ ಕಚೇರಿ ಮುಂದೆ ಪ್ರತಿಭಟಿಸಿತು.

ತಾಪಂ ಕಚೇರಿ ಮುಂದೆ ಪ್ರತಿಭಟಿಸಿ ತಹಶೀಲ್ದಾರ್‌ ಎಂ.ದಯಾನಂದ್‌ಗೆ ಮನವಿ ನೀಡಿ ಮಾತನಾಡಿದ ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌, ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋಟ್ಯಂತರ ರೂ. ಅನುದಾನ ಗ್ರಾಪಂಗಳಿಗೆ ಬಿಡುಗಡೆ ಮಾಡುತ್ತಿದ್ದರೂ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಚುನಾವಣೆ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳಿಗೆ ಹಳ್ಳಿಗಳು ಜ್ಞಾಪಕಕ್ಕೆ ಬರುತ್ತವೆ ಎಂದು ವ್ಯಂಗ್ಯವಾಡಿದರು.

ನಿವೇಶನ ರಹಿತ ಬಡವರಿಗೆ ನೀಡಬೇಕಾದ ನಿವೇಶನಗಳು ಬಲಾಡ್ಯರ ಪಾಲಾಗುತ್ತಿವೆ. ಒಂದು ಸೈಟ್‌ಗಾಗಿ ಜನ ಕಚೇರಿಗಳಿಗೆ ಅಲೆದು ಸುಸ್ತಾದರೂ ಸಿಗುತ್ತಿಲ್ಲ ಎಂದು ಹೇಳಿದರು.

ಇ, ಬಿ-ಖಾತೆಯಲ್ಲಿ ಅಕ್ರಮ: ಕಡಿಮೆ ಬೆಲೆಯಲ್ಲಿ ನಿವೇಶನ ನೀಡುತ್ತೇವೆ ಎಂದು ಬಡವರನ್ನು ವಂಚಿಸಿ ಗ್ರಾಪಂ ವ್ಯಾಪ್ತಿಗಳಲ್ಲಿ ಗಲ್ಲಿಗೊಂದು ಅಕ್ರಮ ಲೇಔಟ್‌ ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇಂತಹ ದೊಡ್ಡ ದಂಧೆಯೇ ನಡೆಯುತ್ತಿದೆ. ಅದಕ್ಕೆ ಬೆಂಗಾವಲಾಗಿ ಅಧಿಕಾರಿಗಳು ನಿಂತಿದ್ದಾರೆ. ಯಾವುದೇ ಖಾತೆ ಮಾಡಬೇಕಾದರೆ ಸಂಬಂಧಪಟ್ಟ ಪಿಡಿಒಗಳು ಸ್ಥಳ ಪರಿಶೀಲನೆ ಮಾಡಿ ದಾಖಲೆಗಳನ್ನು ನೀಡಬೇಕು. ಕಾನೂನು ಬದ್ಧವಾಗಿ ಮಾಡಬೇಕು. ಅದನ್ನು ಬಿಟ್ಟು ಕೆರೆ, ರಾಜಕಾಲುವೆ, ಗೋಮಾಳ, ಗುಂಡು ತೋಪು ಗಳಿಗೂ ಖಾತೆ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಅಧಿಕಾರಿಗಳ ವರ್ಗಾವಣೆ ಆಗಲಿ: ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಗ್ರಾಪಂಗಳಲ್ಲಿ ಹೆಜ್ಜೆ ಹೆಜ್ಜೆಗೂ ನಡೆಯುವ ಭ್ರಷ್ಟಾಚಾರ ಅಲ್ಲಿನ ಕೆಳಹಂತದ ಬಿಲ್‌ಕಲೆಕ್ಟರ್‌, ವಾಟರ್‌ವೆುನ್‌, ಕಂಪ್ಯೂಟರ್‌ ಆಪರೇಟರ್‌ಗಳ ಪಾತ್ರ ಬಹುದೊಡ್ಡದಾ ಗಿದೆ. ಭ್ರಷ್ಟಾಚಾರ ನಿಲ್ಲಬೇಕು, ಹಳ್ಳಿಗಳ ಅಭಿವೃದ್ಧಿ ಆಗಬೇಕಾದರೆ ವರ್ಷಕ್ಕೊಮ್ಮೆ ಕಡ್ಡಾಯವಾಗಿ ಅಧಿ ಕಾರಿಗಳ ವರ್ಗಾವಣೆ ಆಗಲೇಬೇಕು ಎಂದು ಒತ್ತಾಯಿಸಿದರು.

ಯೋಜನೆ ದುರ್ಬಳಕೆ: ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಕರ್ಯ, ಜನಸಾಮಾನ್ಯರ ಸಮಸ್ಯೆ ಆಲಿಸಿ, ಪರಿಹಾರ ನೀಡುವ ಗ್ರಾಮಸಭೆಗಳು ಛಾಯಾಚಿತ್ರಕ್ಕೆ ಸೀಮಿತವಾಗಿವೆ. ಹಳ್ಳಿಗಳಿಗೆ ಚರಂಡಿ, ವಿದ್ಯುತ್‌ ದೀಪ, ರಸ್ತೆಗಳ ಅಭಿವೃದ್ಧಿಗೆ ಬಿಡುಗಡೆಯಾಗುವ 15ನೇ ಹಣಕಾಸಿನ ಯೋಜನೆ ದುರ್ಬಳಕೆ ಆಗಿದ್ದು, ತನಿಖೆ ಮಾಡಬೇಕು ಎಂದು ಹೇಳಿದರು.

ಗ್ರಾಪಂಗಳಲ್ಲಿ ನಡೆದಿರುವ ಇ, ಬಿ ಖಾತೆಗಳ ಅಕ್ರಮ ಹಾಗೂ ನರೇಗಾದ ಕಾಮಗಾರಿಗಳಲ್ಲಿ ನಡೆದಿ ರುವ ಭ್ರಷ್ಟಾಚಾರವನ್ನು ತನಿಖೆ ಮಾಡಲು ವಾರದೊ ಳಗೆ ವಿಶೇಷ ತಂಡ ರಚನೆ ಮಾಡಬೇಕು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ನೀಡಿ ಆಗ್ರಹಿಸಿದರು.

ಹೋರಾಟದಲ್ಲಿ ತಾಲೂಕು ಅಧ್ಯಕ್ಷ ಮರಗಲ್‌ ಮುನಿಯಪ್ಪ, ಬೂದಿಕೋಟೆ ಅನಿಲ್‌, ತಾಲೂಕು ಅಧ್ಯಕ್ಷ ಚಲಪತಿ, ಐತಾಂಡಹಳ್ಳಿ ಮುನ್ನಾ, ರಾಮಸಾಗರ ಸಂದೀಪ್‌ಗೌಡ, ಸಂದೀಪ್‌ರೆಡ್ಡಿ, ಬೂದಿಕೋಟೆ ನಾಗಯ್ಯ, ಮುನಿರಾಜು, ಕಾಮಸಮುದ್ರ ಮುನಿಕೃಷ್ಣ, ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್‌, ಸುರೇಶ್‌ಬಾಬು, ವೇಣು, ಗಿರೀಶ್‌, ನಾಗೇಶ್‌, ತೇಜಸ್‌, ತೆರ್ನಹಳ್ಳಿ ಆಂಜಿನಪ್ಪ, ಮಾಲೂರು ತಾಲೂಕು ಅಧ್ಯಕ್ಷ ಯಲ್ಲಣ್ಣ, ಹರೀಶ್‌, ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮುಂತಾದವರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDP ಮುಖಂಡನ ಹತ್ಯೆಗೆ ನೆರವು: ಇಬ್ಬರು ಪೊಲೀಸರ ಅಮಾನತು

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

14-bng

Kolar: 1.25 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಪತ್ತೆ

CM-Dineh

Eagles Eye: ಭ್ರೂಣಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ನಿಗಾ: ದಿನೇಶ್‌

Benga-Club

Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.