ಕಲಿಯುಗದ ಕಟ್ಟಕಡೆಯ ಕಾಲಜ್ಞಾನಿ ಕೈವಾರ ತಾತಯ್ಯ

ಸಾಯಿತೇಜಸ್ವಿನಿ ತಂಡದವರಿಂದ ಭರತನಾಟ್ಯ, ತತ್ತನೂರು ಸಹೋದರರಿಂದ ನಾದಸ್ವರ ಕಾರ್ಯಕ್ರಮಗಳು ನಡೆಯಿತು.

Team Udayavani, Jul 14, 2022, 5:56 PM IST

ಕಲಿಯುಗದ ಕಟ್ಟಕಡೆಯ ಕಾಲಜ್ಞಾನಿ ಕೈವಾರ ತಾತಯ್ಯ

ಚಿಂತಾಮಣಿ: ಕೈವಾರ ತಾತಯ್ಯನವರು ಯೋಗದೃಷ್ಟಿಯಿಂದ ಕಲಿಯುಗದಲ್ಲಿ ಕಟ್ಟಕಡೆಯ ಕಾಲಜ್ಞಾನವನ್ನು ನೀಡಿದ್ದಾರೆ. ಈ ಕಾಲಜ್ಞಾನದ ಅರಿವನ್ನು ಪಡೆದುಕೊಂಡು ಜಾಗೃತರಾಗಬೇಕು ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಡಾ. ಎಂ.ಆರ್‌.ಜಯರಾಮ್‌ ಹೇಳಿದರು.

ಕೈವಾರದ ಶ್ರೀಯೋಗಿ ನಾರೇಯಣ ಮಠದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ನಡೆದ ಗುರುಪೂಜಾ ಸಮಾರಂಭದಲ್ಲಿ ಮಾತನಾಡಿ, ಕೈವಾರ ತಾತಯ್ಯನವರು ಪರತತ್ವ ಸಾಧನೆಯನ್ನು ಮಾಡಿರುವ ಸದ್ಗುರು. ಭಕ್ತಿ, ಕರ್ಮ, ಯೋಗವನ್ನು ಸೇರಿಸಿ ಕೈವಾರ ತಾತಯ್ಯನವರು ಬೋಧನೆ ಮಾಡಿದ್ದಾರೆ. ಬಾಹ್ಯ ಸಾಧನೆಗಳಿಗಿಂತಲೂ ಅಂತರಂಗದ ಸಾಧನೆ ಶ್ರೇಷ್ಠವಾದದ್ದು. ಮಾನವರಲ್ಲಿ ಭೇದವನ್ನು ಮಾಡದೆ, ಮುಕ್ತಿಯ ಪಥದೆಡೆಗೆ ಸಾಗುವ ಸಾಧನೆಯನ್ನು ತಾತಯ್ಯನವರು ಬೋಧಿಸಿದ್ದಾರೆ.

ಅಹಂಕಾರವನ್ನು ಬಿಟ್ಟ ಭಕ್ತನಿಗೆ ಮಾತ್ರ ಪರಮ ಪದವಿ ದೊರೆಯುತ್ತದೆ. ಗುರುಗಳಲ್ಲಿ ಅನನ್ಯ ಭಕ್ತಿಯಿಂದ ಶರಣಾಗತಿಯಾದರೆ, ನಮ್ಮ ಮುಂದಿನ ಬದುಕನ್ನು ಅವರೇ ರೂಪಿಸುತ್ತಾರೆ. ಮಾನವ ಜನ್ಮವನ್ನು ವ್ಯರ್ಥಮಾಡಿಕೊಳ್ಳದೆ, ಸದುಪಯೋಗ ಮಾಡಿಕೊಳ್ಳಬೇಕಾದರೆ ಗುರುವಿನ ಅನುಗ್ರಹ ಬೇಕು. ನಮ್ಮಲ್ಲಿರುವ ಅವಿದ್ಯೆಗಳನ್ನು ತೆಗೆದುಹಾಕುವ ಶಕ್ತಿ ಗುರುವಿಗೆ ಮಾತ್ರವಿದೆ ಎಂದು ತಿಳಿಸಿದರು.

ತಾತಯ್ಯನವರಿಗೆ ಅಭಿಷೇಕ: ಗುರುಪೂಜೆ ಪ್ರಯುಕ್ತ ಗಾಯನವನ್ನು ವಿದ್ವಾಂಸರು ನಡೆಸಿದರು. ಯೋಗಿ ನಾರೇಯಣ ಯತೀಂದ್ರ ತಾತಯ್ಯನವರಿಗೆ ಅಭಿಷೇಕ, ರಾಜೋಪಚಾರ, ಅಷ್ಟಾವಧಾನ ಸೇವೆ ನಡೆಯಿತು. ಬೆಳಗಿನಿಂದಲೇ ಸದ್ಗುರು ಯೋಗಿ ನಾರೇಯಣ ತಾತಯ್ಯನವರ ದೇವಾಲಯದಲ್ಲಿ ಪೂಜಾ ಕೈಕಂರ್ಯಗಳನ್ನು ನಡೆಸಲಾಯಿತು. ಸದ್ಗುರು ತಾತಯ್ಯನವರಿಗೆ ವಿಶೇಷ ಅಭಿಷೇಕ ಮಾಡಲಾಯಿತು. ಹಾಲು, ಮೊಸರು, ತುಪ್ಪ, ಜೇನುತುಪ್ಪ, ಏಳನೀರು ಮತ್ತು ಹರಿಶಿನ ಮತ್ತು ಕುಂಕುಮ, ವಿಭೂತಿ, ಶ್ರೀಗಂಧ ಮುಂತಾದ ಮಂಗಳ ದ್ರವ್ಯಗಳಿಂದ ಅಭಿಷೇಕ ಸಮರ್ಪಿಸಲಾಯಿತು. ಆಂಧ್ರ, ತಮಿಳುನಾಡು ಸೇರಿದಂತೆ ವಿವಿಧೆಡೆಯಿಂದ ಬಂದಿದ್ದ ಸಹಸ್ರಾರು ಭಕ್ತರು ಗುರುಪೂಜೆಯಲ್ಲಿ ಭಾಗವಹಿಸಿದ್ದರು.

ಕೈವಾರ ತಾತಯ್ಯನವರು ರಚಿಸಿರುವ “ಶ್ರೀರಾಮ ಭವತಾರಕ ಮಂತ್ರ ತಾರಾವಳಿ” ಎಂಬ ಗ್ರಂಥದ ಕನ್ನಡ ಮತ್ತು ಆಂಗ್ಲ ಭಾಷೆಯ ಗ್ರಂಥಗಳನ್ನು ಲೋಕಾರ್ಪಣೆಗೊಳಿಸಲಾಯಿತು.

ಸಂಗೀತ ಸಮರ್ಪಣೆ: ಸಂಗೀತ ಕಛೇರಿಗಳಲ್ಲಿ ಆನೂರು ಅನಂತಕೃಷ್ಣಶರ್ಮ ನೇತೃತ್ವದಲ್ಲಿ ತಾಳವಾದ್ಯ ಕಛೇರಿ, ಮಂಜುಳ ಜಗದೀಶ್‌, ಇ.ರಾಮಕೃಷ್ಣಾಚಾರ್‌, ಕೆ.ಎಸ್‌.ನಾಗಭೂಷಣಯ್ಯ, ಪದ್ಮ ಚಿಂತಾಮಣಿ, ಚಿಂತಲಪಲ್ಲಿ ಕಿಶೋರ್‌ ಕುಮಾರ್‌ ಹಾಗೂ ಸೋಮಶೇಖರ್‌, ವಿಜಯವಾಡದ ಹರಿತಾ ಸಹೋದರಿಯರು, ಮಾಯಾಬಾಲಚಂದ್ರ, ಅಶ್ವಿ‌ನಿ ಮೋಹನ್‌, ಹೊಸೂರು ವೇಣು ತಂಡದವರು ಸಂಗೀತ ಸಮರ್ಪಣೆ ಮಾಡಿದರು.

ವಿಶೇಷ ಕಾರ್ಯಕ್ರಮವಾಗಿ ವಾಸವಿ ಸಹೋದರಿಯರು, ಮರಕತವಲ್ಲಿ, ಅಂಜಲಿ ಶ್ರೀರಾಮ್‌, ಚೈತನ್ಯ ಸಹೋದರರಿಂದ ಗಾಯನ, ದೀಲಿಪ್‌ ಮತ್ತು ಇಳಾ ಸಂಗೀತಾರವರಿಂದ ಪಿಟೀಲು ವಾದನ, ಚೇತನಾ ಸುಂದರೇಶ್‌ ಹಾಗೂ ಸಾಯಿತೇಜಸ್ವಿನಿ ತಂಡದವರಿಂದ ಭರತನಾಟ್ಯ, ತತ್ತನೂರು ಸಹೋದರರಿಂದ ನಾದಸ್ವರ ಕಾರ್ಯಕ್ರಮಗಳು ನಡೆಯಿತು.

ಹಿರಿಯ ಚಿಂತಕ, ಮಲ್ಲಾರ ಪತ್ರಿಕೆ ಸಂಪಾದಕ ಡಾ.ಬಾಬು ಕೃಷ್ಣಮೂರ್ತಿ, ಡಾ.ಜೋಸುಲ ಸದಾನಂದಶಾಸ್ತ್ರೀ, ಲೇಖಕಿ ಅಂಬಿಕಾ ಅನಂತ್‌ ಅವರನ್ನು ಸನ್ಮಾನಿಸಲಾಯಿತು. ಶ್ರೀಯೋಗಿನಾರೇಯಣ ಸಂಕೀರ್ತನಾ ಯೋಜನೆ ಸಂಚಾಲಕ ವಾನರಾಶಿ ಬಾಲಕೃಷ್ಣ ಭಾಗವತರ್‌, ಕೈವಾರ ಟ್ರಸ್ಟ್‌ ಉಪಾಧ್ಯಕ್ಷ ಜೆ.ವಿಭಾ ಕರರೆಡ್ಡಿ, ಖಜಾಂಚಿ ಆರ್‌.ಪಿ.ಎಂ.ಸತ್ಯನಾರಾಯಣ, ಸದಸ್ಯರಾದ ಬಾಗೇಪಲ್ಲಿ ನರಸಿಂಹಪ್ಪ, ಬಿ.ಎಸ್‌. ಶ್ರೀನಿವಾಸ್‌, ಡಾ.ಎಂ.ವಿ.ಶ್ರೀನಿವಾಸ್‌, ಗಣೇಶ್‌ ಚಂದ್ರಪ್ಪ, ಕೆ.ಎಂ.ತ್ಯಾಗರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.