‘ಕರ್ನಾಟಕ ಒನ್‌’ ಕೇಂದ್ರ ಶೀಘ್ರ ಆರಂಭ

ನಾಮಫ‌ಲಕವಿದ್ರೂ ಒಂದೂವರೆ ವರ್ಷದಿಂದ ಸೇವೆಗಳು ಜನರಿಗೆ ಮರೀಚಿಕೆ

Team Udayavani, Jul 1, 2019, 11:19 AM IST

kolar-tdy-1..

ಕೋಲಾರ ನಗರದಲ್ಲಿ ಕರ್ನಾಟಕ ಒನ್‌ಸೇವೆಗೆ ಸಜ್ಜುಗೊಳಿಸುತ್ತಿರುವ ತೊಟ್ಟಿಬಾವಿ ನೀರು ಸರಬರಾಜು ಕೇಂದ್ರದ ಕಟ್ಟಡ.

ಕೋಲಾರ: ಅಂತೂ ಇಂತೂ ಕರ್ನಾಟಕ ಒನ್‌ ಸೇವೆಯನ್ನು ನಗರದ ಜನತೆಗೆ ಕಲ್ಪಿಸಲು ಜಿಲ್ಲಾಡಳಿತ ಮತ್ತು ನಗರಸಭೆ ಮುಂದಾಗಿದೆ.

ಒಂದೂವರೆ ವರ್ಷದ ಹಿಂದೆಯೇ ಜಿಲ್ಲಾಧಿಕಾರಿಗಳ ನಿವಾಸದ ಮುಂಭಾಗದ ತೊಟ್ಟಿ ಬಾವಿ ನೀರು ಪೂರೈಕೆ ಕೇಂದ್ರದ ಕಟ್ಟಡವೊಂದನ್ನು ‘ಕರ್ನಾಟಕ ಒನ್‌’ ಸೇವೆಗಳಿಗಾಗಿ ಪುನಶ್ಚೇಚನಗೊಳಿಸಿ ಸಿದ್ಧಪಡಿಸಲಾಗಿತ್ತು. ಆದರೆ, ಒಂದೂವರೆ ವರ್ಷಗಳಿಂದಲೂ ಕಟ್ಟಡ ಮುಂಭಾಗ ನಾಮಫ‌ಲಕ ಅಳವಡಿಸಲಾಯಿತಾದರೂ, ಯಾವುದೇ ಸೇವೆ ಜನತೆಗೆ ಲಭ್ಯವಾಗಲಿಲ್ಲ. ಈ ಕುರಿತು ಪತ್ರಿಕೆಗಳಲ್ಲಿ ವಿಶೇಷ ವರದಿಗಳು ಪ್ರಕಟವಾದರೂ ಜಿಲ್ಲಾಡಳಿತ ಮತ್ತು ನಗರಸಭೆ ಎಚ್ಚೆತ್ತುಕೊಂಡಿರಲಿಲ್ಲ.

ಮಧ್ಯದಲ್ಲಿ ಎದುರಾಗಿದ್ದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಿಂದ ಕರ್ನಾಟಕ ಒನ್‌ ಸೇವೆ ಕೋಲಾರ ಜನತೆಗೆ ಸಿಗುವಲ್ಲಿ ವಿಳಂಬವಾಗುತ್ತಿದೆ ಎಂಬ ನೆಪವನ್ನು ಹೇಳಲಾಗುತ್ತಿತ್ತು. ಆದರೆ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಸಾರ್ವಜನಿಕರಿಗೆ ಸಿಗುವಂತೆ ಮಾಡಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಕೊನೆಗೆ ಕೇಂದ್ರದ ಸೇವೆ ಜನತೆಗೆ ನೀಡಲು ಸ್ಥಳೀಯ ಆಡಳಿತ ಮುಂದಾಗಿದೆ.

ಸಲಕರಣೆಗಳ ಅಳವಡಿಕೆ: ಕರ್ನಾಟಕ ಒನ್‌ ಸೇವೆಯನ್ನು ಜುಲೈ 1 ರಿಂದ ಕೋಲಾರ ನಗರದ ಜನತೆಗೆ ಸಿಗುವಂತೆ ಮಾಡಲು ಅಧಿಕಾರಿಗಳ ತಂಡವೊಂದು ಒಂದು ವಾರದಿಂದಲೂ ಕಾರ್ಯೋನ್ಮುಖವಾಗಿದೆ.

ಕರ್ನಾಟಕ ಒನ್‌ ಕೇಂದ್ರಕ್ಕೆ ನಿಗದಿಪಡಿಸಿರುವ ಕೇಂದ್ರಕ್ಕೆ ಅಗತ್ಯವಿರುವ ಪೀಠೊಪಕರಣ, ಕಂಪ್ಯೂಟರ್‌ ಇತ್ಯಾದಿ ಸೇವೆ ಅಳವಡಿಸಲಾಗುತ್ತಿದೆ.

ಸಂಪರ್ಕ ಸೇವೆ ಅಳವಡಿಕೆ: ಕಟ್ಟಡ ಇರುವ ತೊಟ್ಟಿಬಾವಿ ಕೇಂದ್ರದ ಆವರಣವನ್ನು ಜೆಸಿಬಿ ಯಂತ್ರಗಳ ಮೂಲಕ ಸ್ವಚ್ಛಗೊಳಿಸಲಾಗುತ್ತಿದೆ. ಆದರೆ, ಕೇಂದ್ರ ಆರಂಭದ ಕುರಿತು ಯಾವುದೇ ಅಧಿಕೃತ ಪ್ರಕಟಣೆ ಜಿಲ್ಲಾಡಳಿತ ಹಾಗೂ ನಗರಸಭೆಯಿಂದ ಹೊರ ಬಿದ್ದಿಲ್ಲದಿರುವುದು ಅನುಮಾನಕ್ಕೆ ಎಡೆ ಮಾಡಿದೆ. ಆದರೂ, ಕೇಂದ್ರದ ಬೀಗ ತೆರೆದು ಕಂಪ್ಯೂಟರ್‌, ಇಂಟರ್‌ನೆಟ್ ಸೇವೆ, ಪೀಠೊಪಕರಣಗಳ ವ್ಯವಸ್ಥೆ ಇತ್ಯಾದಿ ಸೇವೆಗಳನ್ನು ಮಾಡಲಾಗುತ್ತಿರುವುದರಿಂದ ಕರ್ನಾಟಕ ಒನ್‌ಸೇವೆ ಶೀಘ್ರವೇ ಕೋಲಾರ ಜನತೆಗೆ ಸಿಗುತ್ತದೆಯೆಂದು ನಿರೀಕ್ಷಿಸಲಾಗುತ್ತಿದೆ.

ಇತ್ಯಾದಿ ಸೇವೆಗಳು: ಈಗಾಗಲೇ ಬೆಂಗಳೂರು ಸೇರಿ ವಿವಿಧ ಮಹಾನಗರ ಪಾಲಿಕೆ ಹಾಗೂ ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಕರ್ನಾಟಕ ಒನ್‌ ಸೇವೆಯು ಆರಂಭವಾಗಿದ್ದು, ಈ ಕೇಂದ್ರದಲ್ಲಿ ಆಧಾರ್‌, ಪಡಿತರ ಚೀಟಿ, ಪಾಸ್‌ಪೋರ್ಟ್‌, ನಗರಸಭೆ ತೆರಿಗೆ ಪಾವತಿ, ಮೊಬೈಲ್ ರೀಚಾರ್ಜ್‌, ಕಂದಾಯ ಇಲಾಖೆಯ ಸೇವೆಗಳು, ಜಾತಿ, ಆದಾಯ ಪ್ರಮಾಣ ಪತ್ರಗಳ ಪಡೆಯುವಿಕೆ, ಇತ್ಯಾದಿ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ.

ಸೇವಾ ನಾಮಫ‌ಲಕ ಸಿದ್ಧ: ಈಗಾಗಲೇ ಕೋಲಾರ ಕೇಂದ್ರದಲ್ಲಿ ಯಾವ್ಯಾವ ಸೇವೆ ನೀಡಲಾಗುತ್ತದೆಯೆಂಬ ಕುರಿತು ಮಾಹಿತಿ ಫ‌ಲಕವನ್ನು ಸಿದ್ಧಪಡಿಸಲಾಗುತ್ತಿದ್ದು, ಕೇಂದ್ರದಲ್ಲಿ ಅಳವಡಿಸಲಾಗಿದೆ. ಆದರೆ, ಕರ್ನಾಟಕ ಒನ್‌ ಸೇವೆ ಆರಂಭ ಕುರಿತಂತೆ ಅಧಿಕಾರಿಗಳು ಗುಟ್ಟಾಗಿಟ್ಟಿರುವ ರಹಸ್ಯವೇನು ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಕರ್ನಾಟಕ ಒನ್‌ ಕೇಂದ್ರದಲ್ಲಿ ಹಾಲಿ ವ್ಯವಸ್ಥೆ ಮಾಡುತ್ತಿರುವ ವ್ಯಕ್ತಿಗಳು ತಮ್ಮದೇನಿದ್ದರೂ ತಾಂತ್ರಿಕ ಸೌಲಭ್ಯಗಳನ್ನು ಕಲ್ಪಿಸುವುದು ಮಾತ್ರವೇ ಆಗಿದ್ದು, ಹೆಚ್ಚಿನ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದಲೇ ಪಡೆದುಕೊಳ್ಳಬೇಕೆಂದು ಸೂಚಿಸುತ್ತಿದ್ದಾರೆ.

ಆದರೂ, ಕರ್ನಾಟಕ ಒನ್‌ ಸೇವೆ ಜಿಲ್ಲಾ ಕೇಂದ್ರದಲ್ಲಿ ಆರಂಭವಾಗಿ ಸಾರ್ವಜನಿಕರಿಗೆ ಸೇವೆ ಶೀಘ್ರವೇ ಪೂರ್ಣ ಪ್ರಮಾಣದಲ್ಲಿ ಸಿಗುವಂತಾಗಲಿ ಎಂದು ಜನರು ಆಶಿಸಿದ್ದಾರೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.