![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 23, 2021, 1:54 PM IST
ಕೋಲಾರ : ಹೈನೋದ್ಯಮದ ಪಿತಾಮಹ ಎಂದೇ ಖ್ಯಾತಿ ಪಡೆದು ಇಂದು ಲಕ್ಷಾಂತರ ರೈತರ ಜೀವನಕ್ಕೆ ದಾರಿ ದೀಪವಾಗಿರುವ ದಿವಂಗತ ಎಂ. ವಿ. ಕೃಷ್ಣಪ್ಪ ರವರ ಧರ್ಮಪತ್ನಿ ಹಾಗೂ ಕೋಲಾರ ಜಿಲ್ಲೆಯ ಪ್ರಭಾವಿ ಮುಖಂಡರಾದ ಶ್ರೀ ಅಶೋಕ್ ಕೃಷ್ಣಪ್ಪ ಮತ್ತು ಜಯಸಿಂಹ ಕೃಷ್ಣಪ್ಪ ರವರ ತಾಯಿ ಪ್ರಮೀಳಮ್ಮ ಕೃಷ್ಣಪ್ಪ (95) ವರ್ಷ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಕೇಂದ್ರ ಮತ್ತು ರಾಜ್ಯಸರ್ಕಾರಗಳಲ್ಲಿ ಪ್ರಭಾವಿ ಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕ್ಕೆ ಅದರಲ್ಲೂ ವಿಶೇಷವಾಗಿ ಕೋಲಾರಜಿಲ್ಲೆಗೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ ಎಂ. ವಿ. ಕೆ ರವರ ಸಾಧನೆಯಲ್ಲಿ ಮೃತ ಪತ್ನಿ ಪ್ರಮೀಳಮ್ಮ ರವರ ಪಾತ್ರವೂ ಇತ್ತು ಎಂದು ತಿಳಿಸಿದ್ದಾರೆ.
ಸ್ವಾತಂತ್ರ ಹೋರಾಟದಲ್ಲಿ ಗಂಡ ಕೃಷ್ಣಪ್ಪರವರ ಜೊತೆ ಬಾಗಿಯಾಗಿದ್ದ ಪ್ರಮೀಳಮ್ಮ ಹಲವು ಭಾರಿ ಜೈಲಿಗೂ ಹೋಗಿದ್ದರು ಇತ್ತೀಚಿನ ವರೆಗೂ ಅರೋಗ್ಯವಾಗಿಯೇ ಇದ್ದ ಪ್ರಮೀಳಮ್ಮ ಕೆಲವು ದಿನಗಳಿಂದ ಆರೋಗ್ಯದಲ್ಲಿ ಸ್ವಲ್ಪಮಟ್ಟಿಗೆ ಏರುಪೇರಾಗಿದ್ದು ಈ ದಿನ 23-06-21ರಂದು ಬೆಳಿಗ್ಗೆ ಬೆಂಗಳೂರು ಅವರ ಸ್ವಗೃಹದಲ್ಲಿ ನಿಧಾನರಾಗಿದ್ದಾರೆ.
ಇಂದು ಸಂಜೆ 4ಗಂಟೆಗೆ ಕೆಜಿಎಪ್ ತಾಲೂಕು ಬಂಗಾರುತಿರುಪತಿ (ಗುಟ್ಟಹಳ್ಳಿ ) ಬಳಿಯ ಅವರ ಸ್ವಂತ ತೋಟದ ಭೂಮಿಯಲ್ಲಿ ( ಗಂಡ ದಿವಂಗತ ಎಂ. ವಿ. ಕೃಷ್ಣಪ್ಪ ಸಮಾಧಿ ಪಕ್ಕದಲ್ಲೇ ) ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಕೋವಿಡ್ 19 ಹಿನ್ನಲೆಯಲ್ಲಿ ಎಲ್ಲರಿಗೂ ಮಾಹಿತಿ ನೀಡಲು ಸಾಧ್ಯವಾಗದ ಕಾರಣ ವಿಷಯ ತಿಳಿದವರು ತುಂಬಾ ಆಪ್ತರು,ಸಂಬಧಿಕರು,ಹಿತೈಷಿಗಳು, ಮತ್ತು ಅಭಿಮಾನಿಗಳು ಭಾಗವಹಿಸಲು ಸಾಧ್ಯವಾಗದಿದ್ದರೆ ಶ್ರದ್ದಾoಜಲಿ,ಸಂತಾಪಗಳನ್ನು ಸೂಚಿಸಬೇಕೆಂದು ಕುಟುಂಬದವರು ಕೋರಿದ್ದಾರೆ.
Kolar: ಬಾಲಕಿ ಮೇಲೆ ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ
BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು
Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!
Byrathi Suresh: ಪವರ್ ಪಾಲಿಟಿಕ್ಸ್, ಶೇರಿಂಗ್, ಕೇರಿಂಗ್ ಯಾವುದೂ ಇಲ್ಲ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.