ಕೆ.ಸಿ.ರೆಡ್ಡಿ ಹುಟ್ಟೂರಲ್ಲೇ ಗ್ರಂಥಾಲಯ ಸಮಸ್ಯೆ

ಮಳೆಯಿಂದ ಸೋರುತ್ತಿರುವ ಕಟ್ಟಡ • ಬೇರೊಂದು ಕಟ್ಟಡಕ್ಕೆ ಸ್ಥಳಾಂತರಿಸಿದರೂ ಪುಸ್ತಕಗಳಿಗೆ ಭದ್ರತೆ ಇಲ್ಲ

Team Udayavani, Jul 19, 2019, 12:15 PM IST

kolar-tdy-1

ಬೇತಮಂಗಲ ಬಳಿಯ ಕ್ಯಾಸಂಬಳ್ಳಿ ಗ್ರಾಮದಲ್ಲಿರುವ ಗ್ರಂಥಾಲಯ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು ಬೀಗ ಹಾಕಲಾಗಿದೆ.

ಬೇತಮಂಗಲ: ಸರ್ಕಾರಗಳು ಶಿಕ್ಷಣಕ್ಕಾಗಿ ಅನುದಾನಗಳ ಜತೆಗೆ ಪ್ರೋತ್ಸಾಹವನ್ನೂ ನೀಡುತ್ತಿವೆ. ಆದರೆ, ಇಲ್ಲಿನ ಗ್ರಂಥಾಲಯ ತದ್ವಿರುದ್ಧ. ಪ್ರಥಮ ಮುಖ್ಯಮಂತ್ರಿ ಹುಟ್ಟೂರಲ್ಲೇ ಇಂತಹ ಸ್ಥಿತಿ ಕಂಡು ಓದುಗರು ಬೇಸರ ಪಟ್ಟುಕೊಳ್ಳುತ್ತಿದ್ದಾರೆ.

ಆತಂಕ: ಪಟ್ಟಣದ ಸಮೀಪದ ಕ್ಯಾಸಂಬಳ್ಳಿ ಗ್ರಾಮದಲ್ಲಿ ಸುಮಾರು ದಶಕದಿಂದ ಶಿಥಿಲಗೊಂಡ ಕಟ್ಟಡದಲ್ಲೇ ಗ್ರಂಥಾಲಯ ನಡೆಯುತ್ತಿತ್ತು. ಆದರೆ, ಇತ್ತೀಚೆಗೆ ಬಾರಿ ಬಿರುಗಾಳಿ, ಮಳೆಗೆ ಹೆಂಚಿನ ಶೀಟುಗಳು ಜಖಂಗೊಂಡು ಮಳೆ ನೀರು ಕೊಠಡಿಯೊಳಕ್ಕೆ ಬರುತ್ತಿದೆ. ಯಾವುದೇ ಸಮಯದಲ್ಲಾದರೂ ಅವಘಡ ಸಂಭವಿಸುವುದರಿಂದ ಕಟ್ಟಡದ ಬಾಗಿಲಿಗೆ ಬೀಗ ಜಡಿಯಲಾಗಿದೆ. ಅಲ್ಲದೇ, ಗ್ರಂಥಪಾಲಕರು ಮತ್ತು ಓದುಗರು ಕಟ್ಟಡದ ಬಳಿ ಸುಳಿಯಲೂ ಹಿಂದೇಟು ಹಾಕುವಂತಾಗಿದೆ.

ಓದುಗರು ಬೇಸರ: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಜನಿಸಿದ ಈ ಗ್ರಾಮದಲ್ಲೇ ಮೂಲ ಸೌಲಭ್ಯಗಳ ಕೊರತೆಯುಂಟಾಗಿದೆ. ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಲ್ಲದೆ, ಹಿರಿಯರು, ಸಾಹಿತಿಗಳು, ಉನ್ನತ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು, ದಿನಪತ್ರಿಕೆ, ವಾರ ಪತ್ರಿಕೆ, ವಿವಿಧ ಪುಸ್ತಕ, ಸ್ಫರ್ಧಾತ್ಮಕ ಪುಸ್ತಕಗಳನ್ನು ಓದಿ ತಿಳಿದುಕೊಳ್ಳುತ್ತಿದ್ದರು. ಆದರೆ, ಇತ್ತೀಚೆಗೆ ಗ್ರಂಥಾಲಯ ಕಟ್ಟಡ ಶಿಥಿಲಗೊಂಡಿದ್ದು ಪ್ರಾಣ ಭೀತಿಯುಂಟಾಗಿದೆ.

ಸಮುದಾಯ ಭವನ ಆಶ್ರಯ: ಗ್ರಂಥಾಲಯ ಕಟ್ಟಡ ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿರುವುದನ್ನು ಮನಗೊಂಡ ಗ್ರಂಥಪಾಲಕಿ ಸುನೀತಾ, ಪಕ್ಕದಲ್ಲೇ ಇರುವ ಸಮುದಾಯ ಭವನಕ್ಕೆ ಇಲ್ಲಿರುವ ಪುಸ್ತಕ ಮತ್ತು ಇತರೆ ವಸ್ತುಗಳನ್ನು ರವಾನಿಸಿ ಕೆಲಸ ಮಾಡುತ್ತಿದ್ದಾರೆ. ಆದರೆ ಇಲ್ಲಿ ಅವಶ್ಯಕ ಸ್ಥಳವಿಲ್ಲದೆ ಮೂಲಸೌಲಭ್ಯವಿಲ್ಲದೆ ಓದುಗರ ಸಂಖ್ಯೆ ಕಡಿಮೆಯಾಗಿದೆ. ಈ ಭವನದಲ್ಲಿ ಕುಳಿತುಕೊಳ್ಳುವಷ್ಟು ಸ್ಥಳಾವಕಾಶ ಇಲ್ಲದೆ ಪ್ರತಿನಿತ್ಯ ಪರದಾಡುವಂತಾಗಿದೆ. ಅಲ್ಲದೇ, ಪುಸ್ತಕಗಳಿಗೆ ಯಾವುದೇ ಭದ್ರತೆಯೂ ಇಲ್ಲದಂತಾಗಿದೆ.

ಭರವಸೆ ಹುಸಿ: ಶಾಸಕಿ ಎಂ.ರೂಪಕಲಾ ಅವರು ಗ್ರಾಮಕ್ಕೆ ಗ್ರಾಮ ವೀಕ್ಷಣೆ ವೇಳೆ 3 ತಿಂಗಳೊಳಗೆ ನೂತನ ಕಟ್ಟಡ ನಿರ್ಮಿಸಿ ಕೊಡುತ್ತೇನೆ ಎಂಬ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯ ವಾರ್ಡ್‌ ನಿವಾಸಿಗಳು ದೂರಿದ್ದಾರೆ.

ವರ್ಷ ಕಳೆದರೂ ಸ್ವತಂಃ ಕೊಠಡಿ ಇಲ್ಲ: ಜಿಲ್ಲಾ ಗ್ರಂಥಾಲಯ ಅಧಿಕಾರಿಗಳು ಗ್ರಂಥಾಲಯದ ಕೊಠಡಿ ಸಮಸ್ಯೆ ಕುರಿತು ಸರ್ಕಾರಕ್ಕೆ ಪ‌ತ್ರ ಬರೆದಿದ್ದಾರೆ. ಆದರೆ, ನೂತನ ಕೊಠಡಿ ನಿರ್ಮಾಣ ಮಾಡಿ ನೀಡುವ ವೇಳೆಗೆ 1 ವರ್ಷ ಪೂರ್ಣಗೊಳ್ಳುತ್ತದೆ. ಆದರೆ ಅದುವರೆಗೂ ಗ್ರಂಥಾಲಯವನ್ನು ಸುಗಮವಾಗಿ ನಡೆಸಲು ಅನಾನುಕೂಲವಾಗಿದೆ. ಶಾಸಕರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಶೀಘ್ರವಾಗಿ ಇತ್ತ ಕಡೆ ಗಮನಹರಿಸಬೇಕೆಂದು ವಿದ್ಯಾರ್ಥಿಗಳು ಮತ್ತು ಉನ್ನತ ಕೋರ್ಸ್‌ ಪಡೆಯುವ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

 

● ಆರ್‌.ಪುರುಷೋತ್ತಮರೆಡ್ಡಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.