![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 3, 2024, 7:13 PM IST
ಬಂಗಾರಪೇಟೆ(ಕೋಲಾರ): ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಮತ ಚಲಾವಣೆ ಆಗದಿದ್ದರೆ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ರದ್ದಾಗಲಿದೆ ಎಂದು ಶಾಸಕ ಹಾಗೂ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧ್ಯಕ್ಷ ಎಸ್.ಎನ್.ನಾರಾಯಣಸ್ವಾಮಿ ಎಚ್ಚರಿಕೆ ನೀಡಿದರು.
ಪಟ್ಟಣದ ಪುರಸಭೆ ಆವರಣದಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಮೇಲ್ವಿಚಾರಣೆ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಮತದಾರರು ಬೇರೆ ಪಕ್ಷಕ್ಕೆ ಮತ ಹಾಕಿದರೆ 5 ಗ್ಯಾರಂಟಿಗಳು ರದ್ದಾಗಲಿದೆ.
ಪ್ರತಿ ಕುಟುಂಬಕ್ಕೂ ವರ್ಷಕ್ಕೆ ಕನಿಷ್ಠ 45 ರಿಂದ 50 ಸಾವಿರ ರೂ.ಗಳ ಅನುಕೂಲವಾಗುತ್ತಿರುವುದರಿಂದ ಈ ಯೋಜನೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾದರೆ ಲೋಕಸಭಾ ಚುನಾವಣೆಯಲ್ಲಿ ನನ್ನ ಪರವಾಗಿ ಬೆಂಬಲಿಸುವುದು ಅನಿವಾರ್ಯವಾಗಿದೆ ಎಂದರು.
ಭಾಷಣ ಮಾಡಲು ನಿರಾಕರಣೆ: ಕಾರ್ಯಕ್ರಮದಲ್ಲಿ ಖಾಲಿ ಕುರ್ಚಿಗಳನ್ನು ಕಂಡ ಶಾಸಕರು ಅಧಿಕಾರಿಗಳ ನಡೆ ಖಂಡಿಸಿ ಭಾಷಣ ಮಾಡಲು ನಿರಾಕರಿಸಿದರು, ತದನಂತರ ಒಬ್ಬರೊಬ್ಬರಂತೆ ಕಾರ್ಯಕ್ರಮಕ್ಕೆ ಜನರು ಬರತೊಡಗಿದರು. ಈ ಸಂದರ್ಭದಲ್ಲಿ ಸಭಿಕರು ಶಾಸಕರಿಗೆ ಭಾಷಣ ಮಾಡುವಂತೆ ಒತ್ತಾಯಿಸಿಡಿದರು. ಅವರ ಮನವಿಗೆ ಸ್ಪಂದಿಸಿದ ಶಾಸಕರು ಭಾಷಣವನ್ನು ಮುಂದುವರಿಸಿದ ಪ್ರಸಂಗ ನಡೆಯಿತು.
Kolar: ಬಾಲಕಿ ಮೇಲೆ ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ
BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು
Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!
Byrathi Suresh: ಪವರ್ ಪಾಲಿಟಿಕ್ಸ್, ಶೇರಿಂಗ್, ಕೇರಿಂಗ್ ಯಾವುದೂ ಇಲ್ಲ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
You seem to have an Ad Blocker on.
To continue reading, please turn it off or whitelist Udayavani.