ಕಾಯಂ ಜನತಾ ನ್ಯಾಯಾಲಯ ಸದ್ಭಳಕೆ ಮಾಡಿಕೊಳ್ಳಿ


Team Udayavani, Apr 4, 2019, 3:00 AM IST

khayam

ಕೋಲಾರ: ಕಾಯಂ ಜನತಾ ನ್ಯಾಯಾಲಯ ಅನುಷ್ಠಾನದಿಂದ ಸಾರ್ವಜನಿಕ ಸೇವೆಗಳಿಗೆ ಸಂಬಂ ಧಿಸಿದ ತೀವ್ರ ತರವಲ್ಲದ ಸಾಮಾನ್ಯ ಪ್ರಕರಣಗಳನ್ನು ನ್ಯಾಯಾಲಯದ ಮೆಟ್ಟಿಲೇರುವ ಮೊದಲೇ ಇತ್ಯರ್ಥ ಪಡಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ರಾಜ್ಯ ಕಾನೂನು ಸೇವೆಗಳ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿ ಸಂಜೀವ್‌ ಕುಮಾರ್‌ ಹೆಂಚಾಟೆ ತಿಳಿಸಿದರು.

ರಾಜ್ಯದ ವಿವಿಧ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದ ಸದಸ್ಯ ಕಾರ್ಯದರ್ಶಿಗಳ ಜೊತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾಹಿತಿ ನೀಡಿದ ಅವರು, ಕೇಂದ್ರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾ ಧಿಕಾರದ ಅಧಿ ಸೂಚನೆಯಂತೆ ಸಾರ್ವಜನಿಕರ ಉಪಯುಕ್ತ ಸೇವೆಗಳಿಗೆ ದೂರುಗಳನ್ನು ಶೀಘ್ರವಾಗಿ ಪರಿಹಾರಪಡಿಸಿ ಕೊಳ್ಳಬಹುದಾಗಿದೆ ಎಂದು ಹೇಳಿದರು.

ತ್ವರಿತಗತಿಯಲ್ಲಿ ನ್ಯಾಯ: ಕಕ್ಷಿದಾರರ ಸಮಕ್ಷಮದಲ್ಲಿ ಕುಳಿತು ಸಾಮಾನ್ಯ ರೀತಿಯಲ್ಲಿ ಸೌಹಾರ್ಧಯುತವಾಗಿ ಸಮಸ್ಯೆಗಳು ಮುಕ್ತಾಯಗೊಳ್ಳಲಿವೆ. ಅಲ್ಲದೆ, ಕಕ್ಷಿದಾರನಿಗೆ ಯಾವುದೇ ರೀತಿಯ ಹಣಕಾಸಿನ ಹೊರೆಯಾಗುವುದಿಲ್ಲ. ಎಲ್ಲರಿಗೂ ತ್ವರಿತಗತಿಯಲ್ಲಿ ನ್ಯಾಯ ದೊರಕಬೇಕು ಹಾಗೂ ನ್ಯಾಯದಾನದ ಬಗ್ಗೆ ಅರಿವು ಮತ್ತು ವಿಶ್ವಾಸ ಮೂಡಿಸುವ ನಿಟ್ಟನಲ್ಲಿ ಜನತಾ ನ್ಯಾಯಾಲಯ ಮಹತ್ವ ಪಡೆಯುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ಪ್ರಯಾಣಿಕರನ್ನು ಅಥವಾ ಸರಕುಗಳನ್ನು ವಾಯು ಮಾರ್ಗ, ರಸ್ತೆ, ಜಲ ಮಾರ್ಗಗಳ ಸಾಗಣಿಕೆಗೆ ಸಂಬಂ ಧಿಸಿದಂತೆ, ಅಂಚೆ, ದೂರವಾಣಿ ಸೇವೆ, ವಿದ್ಯುತ್‌ ಸಮಸ್ಯೆ, ಸಾರ್ವಜನಿಕ ಸಂರಕ್ಷಣೆ, ನೈರ್ಮಲ್ಯ, ಆಸ್ಪತ್ರೆ ವಿತರಣಾ ಸೇವೆ, ವಿಮೆ, ಬ್ಯಾಂಕಿಂಗ್‌, ವಸತಿ, ಭೂಮಿ, ಶಿಕ್ಷಣ, ಸೇವೆ ಇತ್ಯಾದಿಗಳ 9 ಸೇವೆಗಳು ಇದರಿಂದ ಪರಿಹಾರ ಪಡೆಯಬಹುದಾಗಿದೆ ಎಂದು ಹೇಳಿದರು.

ಕಾಯಂ ಜನತಾ ನ್ಯಾಯಾಲಯದಲ್ಲಿ ಸಾರ್ವಜನಿಕ ಕ್ಷೇತ್ರದ ಪ್ರತಿನಿ ಧಿಗಳು, ವಕೀಲರು ಹಾಗೂ ನ್ಯಾಯಾ ಧೀಶರನ್ನು ಒಳಗೊಂಡ ಸಮಿತಿಯಲ್ಲಿ ಪ್ರಕರಣ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು, ನಂತರ ಯಾವುದೇ ಕಾರಣಕ್ಕೂ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಹೇಳಿದರು.

ಯಾವುದೇ ಶುಲ್ಕ ವಿಧಿಸುವುದಿಲ್ಲ: ರಾಜ್ಯದ ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಮಂಗಳೂರು, ಧಾರವಾಡ ಹಾಗೂ ಕಲ್ಬುರ್ಗಿಯ ಆರು ಸ್ಥಳಗಳಲ್ಲಿ ಕಾಯಂ ಜನತಾ ನ್ಯಾಯಾಲಯವನ್ನು ಸ್ಥಾಪಿಸಿದ್ದು, ಕೋಲಾರ ಜಿಲ್ಲೆಯವರು ಬೆಂಗಳೂರಿನ ವ್ಯಾಪ್ತಿಯಲ್ಲಿ ದೂರುಗಳನ್ನು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಲು ಅಪೀಲುದಾರನಿಂದ ಯಾವುದೇ ಶುಲ್ಕವನ್ನು ವಿ ಧಿಸುವುದಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಗುರುರಾಜ್‌ ಜಿ ಶಿರೋಳ್‌ ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.