ಮಾವು ಬೆಳೆಗಾರರು ಬೇಸಿಗೆ ಬೇಸಾಯ ಕ್ರಮ ಅನುಸರಿಸಲಿ


Team Udayavani, May 11, 2019, 11:16 AM IST

k-3

ಕೋಲಾರ: ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾವು ಬೆಳೆಗಾರರಿದ್ದು, ಕಾಲಕ್ಕೆ ತಕ್ಕಂತೆ ಮಾವು ಬೆಳೆ ನಿರ್ವಹಣೆ ಮಾಡಬೇಕಿದೆ. ಇಲ್ಲದೇ ಹೋದಲ್ಲಿ ರೋಗ ಮತ್ತು ಕೀಟಗಳ ಬಾಧೆ, ಇಳುವರಿಯಲ್ಲಿ ಕುಂಠಿತ ಅನುಭವಿಸಬೇಕಾಗುತ್ತದೆ. ಆದ್ದರಿಂದ ರೈತ ಫಲಾನುಭವಿಗಳು ರಕ್ಷಣಾ ಕ್ರಮ ಕೈಗೊಳ್ಳಬೇಕಾಗಿದೆ.

ಬೇಸಿಗೆಯಲ್ಲಿ ಎರಡು ಬಾರಿ ನೇಗಿಲಿನಿಂದ ಆಳವಾಗಿ ಉಳುಮೆ ಮಾಡುವುದು, ಭೂಮಿಯನ್ನು ಸಮತಟ್ಟು ಮಾಡುವುದು. ಹೆಚ್ಚಿನ ಸಾಂಧ್ರತೆಯುಳ್ಳ ನೆಡುತೋಪುಗಳಿಗಾಗಿ ಸಾಲುಗಳು, ಸಸ್ಯಗಳನ್ನು 5 ಮೀಟರ್‌ ಅಂತರದಲ್ಲಿ ನೆಡಲು, ಅಗೆಯುವ ಗುಂಡಿಗಳ ಹೊಂದಾಣಿಕೆ ಮಾಡುವುದು ಮತ್ತು ಗೂಟದಿಂದ ಗುರುತು ಮಾಡುವುದು ಹಾಗೂ ಸಾಮಾನ್ಯ ನೆಡುತೋಪುಗಳಿಗೆ 9 ಮೀ. ಅಂತರ ನೀಡಬೇಕು. ಗುಂಡಿಯ ಗಾತ್ರ, ಅಳತೆ 90X-90X90 ಸೆಂ.ಮೀ.ಇರಬೇಕು.

ಗುಂಡಿ ಅಗೆಯುವಾಗ ಮುನ್ನೆಚ್ಚರಿಕೆ ಕ್ರಮ: ಅಗೆದ (1 ಅಡಿ) ಮೇಲ್ಭಾಗದ ಮೇಲ್ಪದರದ ಮಣ್ಣನ್ನು ಎಡಭಾಗದಲ್ಲಿ ಇರಿಸಬೇಕು. ಅಗೆದ ಗುಂಡಿಯನ್ನು ತುಂಬುವ ಮೊದಲು ಮಣ್ಣಿನಿಂದ ಬರುವ ಕೀಟ ಮತ್ತು ರೋಗಗಳನ್ನು ನಿಯಂತ್ರಿಸಲು ಸೂಯನ ಕಿರಣಗಳಿಗೆ ಗುಂಡಿಗಳನ್ನು 2 ವಾರಗಳವರೆಗೆ ತೆರೆದಿಡಬೇಕು.

ಸರ್ಕಾರದ ವಿಶ್ವಾಸಾರ್ಹ ನರ್ಸರಿಗಳಿಂದ, ತೋಟಗಾರಿಕೆ ಇಲಾಖೆ ಶಿಫಾರಸ್ಸು ಮಾಡಿದ ನರ್ಸರಿಗಳಿಂದ ಸಸಿ ಪಡೆಯಲು ವ್ಯವಸ್ಥೆ ಮಾಡಿಕೊಳ್ಳಬೇಕು. ಹಣ್ಣು ಬಿಡುವ ಮರಗಳಿಂದ ಮಾವಿನ ಹಣ್ಣುಗಳನ್ನು ಸರಿಯಾಗಿ ಪಕ್ವವಾದ ನಂತರ ಸುಧಾರಿತ ಕ್ರಮಗಳನ್ನು ಅನುಸರಿಸುವುದರೊಂದಿಗೆ ಕಟಾವು ಮಾಡಬೇಕಿದೆ.

ಕೊಯ್ಲೋತ್ತರ ಕ್ರಮ ಕಡ್ಡಾಯ: ಹಳೆಯ ತೋಟಗಳಲ್ಲಿ ಕಾಂಡಕೊರಕ ಹುಳುವಿನ ಬಾಧೆ ಇದ್ದಲ್ಲಿ, ಹೀಲರ್‌ ಕಮ್‌ ಸೀಲರ್‌ ಚಿಕಿತ್ಸೆಯನ್ನು ನೀಡಬೇಕು. ಪ್ಯಾಕ್‌ಹೌಸ್‌ ಹೊಂದಿರುವ ರೈತರು ಕೊಯ್ಲು ಮುಂಚಿನ ಹಾಗೂ ಕೊಯ್ಲೋತ್ತರ ಕ್ರಮ ಕಡ್ಡಾಯವಾಗಿ ಪಾಲಿಸಬೇಕು.

ಹಣ್ಣುಗಳನ್ನು ಮಾಗಿಸಲು ಐಐಎಚ್ಆರ್‌, ಬೆಂಗಳೂರು ವತಿಯಿಂದ ಅಭಿವೃದ್ಧಿ ಪಡಿಸಲಾಗಿರುವ ಮಾವು ಮಾಗಿಸುವ ಘಟಕಗಳನ್ನು ಉಪಯೋಗಿಸಿಕೊಳ್ಳುವುದು, ಹಣ್ಣು ನೊಣ ಮತ್ತು ಚಿಬ್ಬು ರೋಗದ ಹಾನಿಯನ್ನು ತಡೆಗಟ್ಟುವ ಸಲುವಾಗಿ ಐಐಎಚ್ಆರ್‌, ಬೆಂಗಳೂರಿಂದ ಶಿಫಾರಸ್ಸು ಮಾಡಿದಂತೆ ಕೊಯ್ಲು ಮಾಡಲಾದ ಹಣ್ಣುಗಳನ್ನು ಬಿಸಿ ನೀರಿನಲ್ಲಿ ಉಪಚರಿಸಬೇಕು.

ಕೊಯ್ಲು ಮಾಡಲಾದ ಹಣ್ಣುಗಳನ್ನು ವಿಂಗಡಣೆ ಮತ್ತು ಪ್ಯಾಕಿಂಗ್‌ ಮಾಡಿ ಮಾರುಕಟ್ಟೆಗೆ ಕಳುಹಿಸುವುದು. ದೂರದ ಮಾರುಕಟ್ಟೆಗೆ ಉತ್ತಮ ಗುಣಮಟ್ಟದ ಪ್ಯಾಕಿಂಗ್‌ ಸಾಮಗ್ರಿಗಳನ್ನು ಬಳಸಿಕೊಂಡು ಸಣ್ಣ ಪ್ರಮಾಣದ ಪ್ಯಾಕಿಂಗ್‌ಗಳಲ್ಲಿ ಕಳುಹಿಸಿಕೊಡುವುದು, ಮಾವಿನ ಹಣ್ಣಿನ ಹಣ್ಣು ನೊಣದ ಮೋಹಕ ಬಲೆಯಲ್ಲಿ ಮೋಹಕ ಧಾತುವನ್ನು ಬದಲಿಸುವುದು, ಬಿದ್ದ ಹಣ್ಣುಗಳನ್ನು ಸಂಗ್ರಹಿಸುವುದು ಹಾಗೂ ನಾಶಪಡಿಸುವುದು, ಮಾವಿನ ಹಣ್ಣಿನ ಹಣ್ಣು ನೊಣದ ಆಕರ್ಷಣೆಗೆ ಬೇಟ್ ಪದಾರ್ಥವನ್ನು ಸಿಂಪಡಿಸುವುದು ಮಾಡಬೇಕು.

ಮಾಹಿತಿಗೆ ದೂ. 7829512236, ತೋಟಗಾರಿಕೆ ಸಲಹಾ ಮತ್ತು ಮಾಹಿತಿ ಕೇಂದ್ರ ಸಂಪರ್ಕಿಸಿ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.