ಔಷಧಿ ಚೀಟಿ ಬರೆದರೆ ಕ್ರಮ


Team Udayavani, May 17, 2019, 3:13 PM IST

kol-5

ಮುಳಬಾಗಿಲು: ರೋಗಿಗಳಿಗೆ ಹೊರಗಡೆಯಿಂದ ಔಷಧಿ ತರಲು ಚೀಟಿ ಬರೆದುಕೊಟ್ಟರೆ ಆ ವೈದ್ಯರ ವಿರುದ್ಧ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಯಾರೇ ಆಗಲೀ ಕೆರೆಗಳಲ್ಲಿ ಏನೇ ಚಟುವಟಿಕೆ ಕೈಗೊಳ್ಳಬೇಕಾದರೂ ಸರ್ಕಾರದಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕೆಂದು ಜಿಪಂ ಸಿಇಒ ಜಿ.ಜಗದೀಶ್‌ ಎಚ್ಚರಿಕೆ ನೀಡಿದರು.

ಗುರುವಾರ ನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿದ ಅವರು, ಮೆಡಿಕಲ್ ಸ್ಟೋರ್‌ನಲ್ಲಿ ನಾಯಿ ಕಡಿತಕ್ಕೆ ಔಷಧಿ ದಾಸ್ತಾನು ಇಲ್ಲವೆಂದು ನಾಮಫ‌ಲಕ ಹಾಕಿದ್ದನ್ನು ಕಂಡು ಫಾರ್ಮಾಸಿಸ್ಟ್‌ ಜಮೀರ್‌ಅಹಮದ್‌ರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಅಲ್ಲದೇ, ಔಷಧಿಗಳ ಖರೀದಿಸಲು ಈಗಾಗಲೇ ಜಿಪಂ ಅನುದಾನ 10 ಲಕ್ಷ ಲಭ್ಯವಿದ್ದರೂ ಔಷಧಿಗಳನ್ನು ದಾಸ್ತಾನು ಮಾಡಿಕೊಳ್ಳುವುದನ್ನು ಬಿಟ್ಟು ನಾಮಫ‌ಲಕ ಹಾಕಿರುವುದೇಕೆ ಎಂದು ಪ್ರಶ್ನಿಸಿ, ನಾಮಫ‌ಲಕ ತೆಗೆಸಿಹಾಕಿ 24 ಗಂಟೆಯೊಳಗಾಗಿ ಎಲ್ಲಾ ಔಷಧಿಗಳನ್ನು ದಾಸ್ತಾನು ಮಾಡಿಕೊಳ್ಳಲು ಗಡುವು ನೀಡಿದರು.

ಸ್ವಚ್ಛತೆ ಕಾಪಾಡಿ: ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಅಭಾವ ಕಂಡು ಪೌರಾಯುಕ್ತ ಎಸ್‌.ರಾಜು ಅವರನ್ನು ಸ್ಥಳಕ್ಕೆ ಕರೆಸಿ ಪ್ರತಿನಿತ್ಯ ಟ್ಯಾಂಕರ್‌ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು. ಹೆರಿಗೆ ವಿಭಾಗ ಪರಿಶೀಲಿಸಿ ರೋಗಿಗಳಿಂದ ಮಾಹಿತಿ ಪಡೆದು ಮಹಿಳಾ ವೈದ್ಯರು ಉತ್ತಮವಾಗಿ ಕಾರ್ಯನಿರ್ವಹಿಸಿರುವುದನ್ನು ಕಂಡು ಅಭಿನಂದಿಸಿದರಲ್ಲದೇ ತಾವು ಮುಂದಿನ ವಾರ ಬರುವಷ್ಟರಲ್ಲಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕೆಂದು ತಾಕೀತು ಮಾಡಿದರು.

ದೇವರಾಯಸಮುದ್ರ ಗ್ರಾಪಂ ವ್ಯಾಪ್ತಿಯ ಮಲಪನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ನೀರಿನ ಸಮಸ್ಯೆ ಪರಿಶೀಲಿಸಿದರು. ಗ್ರಾಮದಲ್ಲಿ ಈಗಾ ಗಲೇ ಸರ್ಕಾರದಿಂದ ಕುಡಿಯುವ ನೀರಿನ ಸೌಕರ್ಯಕ್ಕಾಗಿ 5 ಕೊಳವೆ ಬಾವಿ ಕೊರೆಸ ಲಾಗಿದ್ದು 3 ಕೊಳವೆ ಬಾವಿಗಳು ಬತ್ತಿ ಹೋಗಿ ವೆ. ಇನ್ನೆರಡರಲ್ಲಿ ನೀರು ಬರುತ್ತಿದೆ. ಆದರೂ ನೀರು ಕೊರತೆಯುಂಟಾಗಿದ್ದು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಗ್ರಾ ಮದಲ್ಲಿ 500 ರೂ.ಗಳಿಗೆ ನೀರು ಸರಬರಾಜು ಮಾಡಲು ಟ್ಯಾಂಕರ್‌ಗಳು ಯಾರೂ ಬರುತ್ತಿಲ್ಲ ಎಂದು ಪಿಡಿಒ ತಿಳಿಸಿದ್ದಾರೆ.

ಹೀಗಾಗಿ ಬೇರೆ ಗ್ರಾಮಗಳಿಂದ ಟ್ಯಾಂಕರ್‌ ತರಿಸಿ ನೀರು ಸರಬರಾಜು ಮಾಡುವಂತೆ ತಿಳಿಸಿದರಲ್ಲದೇ ಮಲ್ಲಪನಹಳ್ಳಿ ಕೆರೆಯಲ್ಲಿ ಗುತ್ತಿಗೆದಾರನೊಬ್ಬ ಅನಧಿಕೃತವಾಗಿ ಗೋಕುಂಟೆ ಮಾಡಲಾಗಿದ್ದು ಅವರ ವಿರುದ್ಧ ಪ್ರಕರಣ ದಾಖಲು ಮಾಡಲು ಪಿಡಿಒ ರಘುಪತಿಗೆ ಸೂಚಿಸಿದರು.

ಅಲ್ಲದೇ ಮಂಡಿಕಲ್ ಗ್ರಾಮದ ಕಲ್ಯಾಣಿ ಅಭಿವೃದ್ಧಿ ಕುರಿತು ಪ್ರತಿಕ್ರಿಯಿಸಿದ ಸಿಇಒ ಈ ವರ್ಷ ಜಲಾಮೃತ ಯೋಜನೆಯಲ್ಲಿ ಹಳ್ಳಿಗಳಲ್ಲಿನ ಕಲ್ಯಾಣಿ ಮತ್ತು ಗೋಕುಂಟೆ ಪುನಶ್ಚೇತನಗೊಳಿಸಿ ಜಲಮೂಲಗಳನ್ನು ಸಂರಕ್ಷಣೆ ಮಾಡಲಾಗುವುದೆಂದು ಹೇಳಿದರು.

ಆಡಳಿತಾಧಿಕಾರಿಗೆ ಸಿಇಒ ತಾಕೀತು

ಶೌಚಾಲಯ ಪರಿಶೀಲಿಸಿದಾಗ ಒಳಗಡೆ ಯಾರೊಬ್ಬರೂ ಕಾಲಿಡಲೂ ಆಗದಂತೆ ದುರ್ವಾಸನೆ ಬರುತ್ತಿರುವುದನ್ನು ಕಂಡ ಜಿಪಂ ಸಿಇಒ ಜಿ.ಜಗದೀಶ್‌ , ರೋಗಿಗಳು ಚಿಕಿತ್ಸೆ ಪಡೆದುಕೊಂಡು ಆರೋಗ್ಯವಂತರಾಗಲು ಆಸ್ಪತ್ರೆಗೆ ಬರುತ್ತಾರೆ. ಆದರೆ, ಬಂದ ರೋಗಿಗಳು ಈ ದುರ್ವಾಸನೆಯ ಶೌಚಾಲಯಕ್ಕೆ ಹೋದಲ್ಲಿ ಮತ್ತಷ್ಟು ರೋಗ ಉಲ್ಬಣವಾಗದೇ ಇರದು ನೀವೇನು ಮಾಡುತ್ತಿದ್ದೀರಿ ಎಂದು ಆಡಳಿತಾಧಿಕಾರಿ ಡಾ.ರಾಜೇಶ್‌ರನ್ನು ತೀವ್ರ ತರಾಟೆಗೆ ತೆಗೆದುಕೊಂಡರಲ್ಲದೇ ಕೂಡಲೇ ಸ್ವಚ್ಛಗೊಳಿಸಲು ಕ್ರಮಕೈಗೊಳ್ಳುವಂತೆ ತಾಕೀತು ಮಾಡಿದರು.
•ಶೌಚಾಲಯಗಳಲ್ಲಿ ಸ್ವಚ್ಛತೆ ಕಾಪಾಡಿ: ವೈದ್ಯರಿಗೆ ಜಗದೀಶ್‌ ಸಲಹೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDP ಮುಖಂಡನ ಹತ್ಯೆಗೆ ನೆರವು: ಇಬ್ಬರು ಪೊಲೀಸರ ಅಮಾನತು

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

Ration Card: 1.25 ಲಕ್ಷ ಪಡಿತರ ಚೀಟಿ ಅನರ್ಹ ಸಾಧ್ಯತೆ!

14-bng

Kolar: 1.25 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಪತ್ತೆ

CM-Dineh

Eagles Eye: ಭ್ರೂಣಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್‌ ಸೆಂಟರ್‌ಗಳ ಮೇಲೆ ನಿಗಾ: ದಿನೇಶ್‌

Benga-Club

Bengaluru Press Club: ಸುದ್ದಿಗೋಷ್ಠಿ ನಡುವೆಯೇ ಮೃತಪಟ್ಟ ಕಾಂಗ್ರೆಸ್‌ ಕಾರ್ಯಕರ್ತ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.