![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 18, 2022, 10:30 PM IST
ಮಾಲೂರು: ತಪ್ಪು ಮಾಡಿದವರು ಎಂದಿಗೂ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮಾಡಿದ ವ್ಯವಹಾರಗಳಿಗೆ ಸರಿಯಾದ ಲೆಕ್ಕ ಇಟ್ಟರೆ ಇಡಿ ಅಲ್ಲ, ಯಾವುದೇ ತನಿಖಾ ಸಂಸ್ಥೆಯಿಂದ ಏನೂ ಮಾಡಲಾಗದು ಎಂದು ಸಚಿವ ಅಶ್ವತ್ಥನಾರಾಯಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಟಾಂಗ್ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಅದು ಬಿಟ್ಟು ತಮ್ಮ ಹುಳಕುಗಳನ್ನು ಮುಚ್ಚಿಕೊಳ್ಳಲು ಇನ್ನೊಬ್ಬರ ಮೇಲೆ ದೂರು ಹಾಕುವುದು ಸರಿಯಲ್ಲ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ರಾಜ್ಯದ ಜನರೇನು ಕಣ್ಣು ಮುಚ್ಚಿ ಕೂತಿಲ್ಲ, ಅವರವರ ಕಾರ್ಯಕ್ಷಮತೆಯಂತೆ ಜನರು ಅಧಿ ಕಾರ ನೀಡುತ್ತಾರೆ ಎಂದು ಹೇಳಿದರು.
ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿಗೆ ಅಧಿಕಾರ ನೀಡಿರುವ ಸಾರ್ವಜನಿಕರು ಭ್ರಷ್ಟಾಚಾರ ಮುಕ್ತ ಭಾರತವನ್ನು ನೋಡಲು ಕಾತುರರಾಗಿದ್ದಾರೆ. ಕರ್ನಾಟಕದಲ್ಲಿ ಬಲವಂತದ ಮತಾಂತರ ಕಾಯ್ದೆ ಜಾರಿಗೆ ಕಾಂಗ್ರೆಸ್ ವಿರೋಧಿಸುತ್ತಿದೆ. ಸಾರ್ವಜನಿಕರು ಇಚ್ಛೆಯಿಂದ ಮತಾಂತರವಾದಲ್ಲಿ ಯಾರ ಅಭ್ಯಂತರವೂ ಇಲ್ಲ. ಆದರೆ, ಅಸೆ ಆಮಿಷಗಳಿಂದ ಬಲವಂತದ ಮತಾಂತರ ಮಾಡುವುದನ್ನು ಸರ್ಕಾರ ಮತ್ತು ಬಿಜೆಪಿ ಸಹಿಸುವುದಿಲ್ಲ ಎಂದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.