ಸರ್ಕಾರದ ಯೋಜನೆ ಪ್ರತಿ ಮನೆಗೆ ತಲುಪಿದೆ: ಸಚಿವ ಮುನಿರತ್ನ


Team Udayavani, Aug 29, 2022, 4:20 PM IST

tdy-18

ಶ್ರೀನಿವಾಸಪುರ: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ಯೋಜನೆಗಳು ಪ್ರತಿ ಮನೆಗೆ ತಲುಪಿವೆ. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದರು.

ಪಟ್ಟಣದಲ್ಲಿ ಬಿಜೆಪಿ ಆಯೋಜಿಸಿದ್ದ ಜನೋತ್ಸವ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರದ 3 ವರ್ಷದ ಜನಪ್ರಿಯ ಯೋಜನೆಗಳ ಬಗ್ಗೆ ಸಾಧನಾ ಸಮಾವೇಶ ನಡೆಸಲು ದೊಡ್ಡ ಬಳ್ಳಾಪುರ ದಲ್ಲಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರ ಭಾಗವಾಗಿ ಇಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದೆ ಎಂದು ವಿವರಿಸಿದರು.

ಜನರ ಕರೆತನ್ನಿ: ಪ್ರತಿ ಕುಟುಂಬ ಅಭಿವೃದ್ಧಿ ಆಗಬೇಕೆಂಬ ಪ್ರಧಾನಿ ಮೋದಿ ಹತ್ತು ಹಲವು ಯೋಜನೆ ತಂದು ವಿಶ್ವ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅಭಿವೃದ್ಧಿಗೆ ಬಿಜೆಪಿ ಶ್ರಮಿಸುತ್ತಿದೆ. ಜನರಿಗೆ ಸರ್ಕಾರದ ಸಾಧನೆ ತಿಳಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕ್ಷೇತ್ರದಿಂದ 15 ಸಾವಿರ ಮಂದಿ ಬರಬೇಕೆಂದು ತಿಳಿಸಿದೆ. ಹಾಗಾಗಿ ಕಾರ್ಯಕರ್ತರು ಜನರನ್ನು ಕರೆ ತರಬೇಕೆಂದು ತಿಳಿಸಿದರು.

ಸರ್ಕಾರದ ಮುಖ್ಯ ಸಚೇತಕ, ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಆದರೂ ಇಲ್ಲಿನ ಶಾಸಕರು ನಾನೇ ಮಾಡಿಸಿದ್ದು ಎನ್ನುತ್ತಾರೆ. ಕೆ.ಸಿ.ವ್ಯಾಲಿ 2ನೇ ಹಂತದ ಯೋಜನೆಗೆ ಸಿ.ಎಂ.ಬಸವರಾಜು ಬೊಮ್ಮಾಯಿ ಅನುದಾನ ಕೊಟ್ಟಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಲ್ಲಿ ಬಂದು ಡಿಸಿಸಿ ಬ್ಯಾಂಕ್‌ ಸಾಲ ವಿತರಣೆ ಮಾಡುತ್ತಾರಂತೆ, ರಾಹುಲ್‌ ಗಾಂಧಿಗೂ ಕೋಲಾರ ಡಿಸಿಸಿ ಬ್ಯಾಂಕ್‌ಗೆ ಸಂಬಂಧವೇನು ಎಂದು ಟೀಕಿಸಿದರು.

ರಾಜ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ರೈಲ್ವೆ ಕಂಬಿಗಳಂತೆ, ಒಂದಾಗುವುದು ಸುಳ್ಳಿನ ಮಾತು. ಕಾಂಗ್ರೆಸ್‌ ಸರ್ಕಾರ ಬರುವುದು ಕನಸು. ಆದರೂ, ಸರ್ಕಾರದ ಜನಪ್ರಿಯ ಯೋಜನೆಗಳನ್ನು ಸಹಿಸಿದೆ, ಅಪಪ್ರಚಾರ ಮಾಡುತ್ತಿ ದ್ದಾರೆ. ಇದಕ್ಕೆ 2023ನೇ ಸಾಲಿಗೆ ಬಿಜೆಪಿ ಸರ್ಕಾರ ಬರಲು ತಾವು ಆಶೀರ್ವಾದ ಮಾಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ ನಳಿನ್‌ಕುಮಾರ್‌ ಕಟೀಲ್‌ ಅವರು ಬಿಜೆಪಿ ಅಧ್ಯಕ್ಷರಾಗಿ 3 ವರ್ಷ ಪೂರೈಸಿದ್ದಾರೆ. ಸರ್ಕಾರದ ಸಾಧನೆ ಬಗ್ಗೆ ಜನೋತ್ಸವ ನಡೆಸಲಾಗುತ್ತಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್‌.ವೇಣುಗೋಪಾಲ್‌ ಪ್ರಾಸ್ತಾವಿಕವಾಗಿ, ಮಾಜಿ ಶಾಸಕ ವರ್ತೂರ್‌ ಪ್ರಕಾಶ್‌ ಇತರರು ಮಾತನಾಡಿದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವಪ್ರಸಾದ್‌, ಬಂಗಾರಪೇಟೆ ಮಾಜಿ ಶಾಸಕ ಬಿ.ಪಿ.ವೆಂಕಟ ಮುನಿಯಪ್ಪ, ಎಸ್‌.ಬಿ.ಮುನಿವೆಂಕಟಪ್ಪ, ಲಕ್ಷ್ಮಣಗೌಡ, ಚಂದ್ರಾರೆಡ್ಡಿ ಸೇರಿ ಜಿಲ್ಲಾ, ತಾಲೂಕು ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4 ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

8

Arrested: ಜಲಮಂಡಳಿಯ ಸೆಂಟ್ರಿಂಗ್‌ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.