ಅಪ್ರಾಪ್ತರ ವ್ಹೀಲಿಂಗ್‌ ಹಾವಳಿಗೆ ಕಡಿವಾಣ ಹಾಕಿ


Team Udayavani, Jun 26, 2023, 3:13 PM IST

ಅಪ್ರಾಪ್ತರ ವ್ಹೀಲಿಂಗ್‌ ಹಾವಳಿಗೆ ಕಡಿವಾಣ ಹಾಕಿ

ಕೆಜಿಎಫ್‌: ನಗರದಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಚಾಲನಾ ಪರವಾನಗಿ ಇಲ್ಲದೆ ದ್ವಿಚಕ್ರ ವಾಹನಗಳನ್ನು ಓಡಿಸುವುದು, ವ್ಹೀಲಿಂಗ್‌ ಮಾಡುವುದು ಹೆಚ್ಚಾಗಿದ್ದು, ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ ಸಾರ್ವಜನಿಕರು ಆರೋಪಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೆಚ್ಚಾಗಿ ಬೈಕ್‌ಗಳಲ್ಲಿ ಬರುತ್ತಿದ್ದರು, ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರು ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. 18 ವರ್ಷದೊಳಗಿನ ಬಾಲಕ, ಬಾಲಕಿಯರು ಚಾಲನಾ ಪರವಾನಗಿ ಇಲ್ಲದೇ ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ. ಮಕ್ಕಳಿಗೆ ವಾಹನ ನೀಡುವ ಮೂಲಕ ಪೋಷಕರು, ತಮ್ಮದೇ ಮಕ್ಕಳ ಜೀವದ ಜತೆ ಚೆಲ್ಲಾಟವಾಡುತ್ತಿದ್ದಾರೆ.

ಶಾಲಾ ಆಡಳಿತ ಮಂಡಳಿ ಪೋಷಕರಿಗೆ ನಿರ್ದೇಶನ ನೀಡುತ್ತಿಲ್ಲ: ಮಕ್ಕಳಿಗೆ ಚಲಾಯಿಸಲು ವಾಹನ ನೀಡಿದರೆ ಪೋಷಕರು ಅಥವಾ ವಾಹನ ಮಾಲೀಕರಿಗೆ ಶಿಕ್ಷೆಯಾಗುತ್ತದೆ ಎಂಬ ಕಾನೂನು ಇದ್ದರೂ, ನಗರದಲ್ಲಿನ ಪೋಷಕರು ತಲೆಕಡಿಸಿಕೊಂಡಿಲ್ಲ. ಶಾಲಾ ಕಾಲೇಜುಗಳಿಗೆ ದ್ವಿಚಕ್ರ ವಾಹನಗಳನ್ನು ಚಲಾಯಿಸಿಕೊಂಡು ಬರುವ ಮಕ್ಕಳ ಪೋಷಕರಿಗೆ ಶಾಲಾ ಆಡಳಿತ ಮಂಡಳಿಯವರು ಈ ಬಗ್ಗೆ ಸೂಕ್ತ ನಿರ್ದೇಶನ ನೀಡುತ್ತಿಲ್ಲ ಎಂಬುದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ ದೂರುಗಳಾಗಿದೆ. ಬೈಕ್‌, ಸ್ಕೂಟರ್‌ಗಳಲ್ಲಿ ಕಾಲೇಜಿಗೆ ಬರುವ ಹುಡುಗರು ಸಂಚಾರ ನಿಯಮಗಳನ್ನು ಉಲ್ಲಂಘಿ ಸುತ್ತಿದ್ದಾರೆ, ಹೆಲ್ಮೆಟ್‌ ಧರಿಸುವುದಿಲ್ಲ, ಒಂದು ಬೈಕ್‌ನಲ್ಲಿ ಮೂವರು, ನಾಲ್ವರನ್ನು ಕೂರಿಸಿಕೊಂಡು ಮನಬಂ ದಂತೆ ಅತಿ ವೇಗದಲ್ಲೂ ಬೈಕ್‌ಗಳನ್ನು ಚಲಾಯಿಸುತ್ತಾರೆ. ಮೊಬೈಲ್‌ನಲ್ಲಿ ಮಾತನಾಡುತ್ತಾ ಬೈಕ್‌ ಚಲಾಯಿಸುವರ ಸಂಖ್ಯೆ ಹೆಚ್ಚಾಗಿದೆ.

ಶಾಲಾ ಪಕ್ಕದ ಅಂಗಡಿ, ಬಂಕ್‌ಗಳಲ್ಲಿ ಬೈಕ್‌ ನಿಲುಗಡೆ: ಇನ್ನು ಕೆಲವರು ಮೀಲಿಂಗ್‌ ಕೂಡ ಮಾಡುತ್ತಾರೆ. ಕೆಲವು ಮಕ್ಕಳು ಪೋಷಕರಿಗೆ ಟ್ಯೂಶನ್‌ಗೆ ಹೋಗಿ ಬರುವುದಾಗಿ ಹೇಳಿ, ಬೈಕ್‌ಗಳನ್ನು ತೆಗೆದುಕೊಂಡು ಹೊರಬರುತ್ತಾರೆ. ಆದರೆ ಟ್ಯೂಶನ್‌ಗೆ ಹೋಗದೆ ಮುಖ್ಯ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ಸುತ್ತುವುದು ಹೆಚ್ಚಾಗಿದ್ದು, ಟ್ಯೂಶನ್‌ ಶಿಕ್ಷಕರು ಸಹ ಇದರ ಬಗ್ಗೆ ಯಾವ ಮಕ್ಕಳಿಗೂ ಬೈಕ್‌ ತರಬಾರದು ಎಂದು ತಿಳಿ ಹೇಳಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ನಗರದ ಪ್ರತಿಷ್ಠಿತ ಶಾಲಾ ಕಾಲೇಜುಗಳಿಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬೈಕ್‌ನಲ್ಲಿ ಬರುತ್ತಾರೆ, ಕೆಲವು ಶಾಲೆಗಳಲ್ಲಿ ಮಕ್ಕಳು ಬೈಕ್‌ ತರಬಾರದು ಎಂದು ಶಾಲಾ ಆಡಳಿತ ಮಂಡಳಿಯವರು ಸೂಚನೆ ನೀಡಿದ್ದಾರೆ. ಆದರೂ ಕೆಲವೊಂದು ಮಕ್ಕಳು ಬೈಕ್‌ನಲ್ಲಿ ಬಂದು ಶಾಲೆಯ ಸಮೀಪವಿರುವ ಪೆಟ್ರೋಲ್‌ ಬಂಕ್‌, ಬಸ್‌ ನಿಲ್ದಾಣ, ರಸ್ತೆಗಳ ಪಕ್ಕದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ ಕಾಲೇಜಿಗೆ ಬರುತ್ತಿದ್ದಾರೆ ಎನ್ನಲಾಗಿದೆ.

ಮುಖ್ಯ ರಸ್ತೆಯಲ್ಲಿ ಬೈಕ್‌ ವ್ಹೀಲಿಂಗ್‌ : ಕೆಲವು ಪಡ್ಡೆ ಹುಡುಗರು, ಬೈಕ್‌ಗಳಲ್ಲೇ ಸ್ಟಂಟ್‌ ಮಾಡುತ್ತಾ, ಗಾಡಿಗಳನ್ನು ಓಡಿಸುವ ಮೂಲಕ ಅಮಾಯಕ ಜನರನ್ನು ಹೆದರಿಸುತ್ತಾರೆ. ಒಬ್ಬರು ವ್ಹೀಲಿಂಗ್‌ ಮಾಡುತ್ತಿದ್ದರೆ ಮತ್ತೆ ಕೆಲವರು ಹಿಂದೆ ಗಾಡಿಗಳಲ್ಲಿ ಕುಳಿತು ಮೊಬೈಲ್‌ನಲ್ಲಿ ವಿಡಿಯೋಗಳನ್ನು ಮಾಡುವುದು ಹೆಚ್ಚಾಗಿದೆ. ವಿಡಿಯೋ ಮಾಡುವ ಸಂದರ್ಭದಲ್ಲಿ ಇವರನ್ನು ನೋಡುವುದಕ್ಕೆ ಕೆಲವರು ರಸ್ತೆಯಲ್ಲಿ ನಿಲ್ಲುತ್ತಾರೆ, ಇದರಿಂದ ಅಪಘಾತಗಳೂ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

ವೀಲಿಂಗ್‌ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ವೀಲಿಂಗ್‌ ಮಾಡುವವರ ವಿರುದ್ಧ ಹಾಗೂ ಅಂತಹ ಮಕ್ಕಳ ಪೋಷಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು ಎನ್ನುವುದು ಸಾರ್ವಜನಿಕರ ಒತ್ತಾಯವಾಗಿದೆ. ಮಕ್ಕಳಿಗೆ ಬುದ್ಧಿ ಹೇಳಿ ಮುಂದಾಗುವ ಅವಘಡವನ್ನು ತಡೆಯುವಲ್ಲಿ ಇಲಾಖೆ ಅಧಿಕಾರಿಗಳು ಹಾಗೂ ಪೋಷಕರು ಮುಂದಾಗಬೇಕು. ಶಾಲಾ ಆಡಳಿತ ಮಂಡಳಿಗಳಿಗೆ ಸೂಕ್ತ ನಿರ್ದೇಶನ ನೀಡಿ ಮಕ್ಕಳು ಕಾಲೇಜಿಗೆ ಬೈಕ್‌ ತರದಂತೆ ನಿಯಮಾವಳಿ ಹಾಕಬೇಕೆಂದು ಜನರು ಆಗ್ರಹಿಸಿದ್ದಾರೆ.

ಈಗಾಗಲೇ ಶಾಲಾ ಕಾಲೇಜುಗಳಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಪರವಾ ನಿಗೆ ಇಲ್ಲದೆ ವಾಹನವನ್ನು ಚಾಲಾಯಿಸ ಬಾರದೆಂದು ಅರಿವು ಮೂಡಿಸಲಾಗಿದೆ. ಮಕ್ಕಳು ಬೈಕ್‌ಗಳನ್ನು ಚಲಾಯಿಸಿದರೆ ಪೋಷಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಾಗುವುದು. ಅಪ್ರಾಪ್ತರ ವಾಹನಗಳಿಗೆ ದಂಡ ವಿಧಿ ಸಲಾಗಿದೆ. ಕೆಲವು ಮಕ್ಕಳ ಪೋಷಕರನ್ನು ಠಾಣೆಗಳಿಗೆ ಕರೆಸಿ ಬುದ್ದಿವಾದವನ್ನು ಹೇಳಲಾಗಿದೆ. ಆದಾಗ್ಯೂ ಸಂಚಾರ ನಿಯಮ ಉಲ್ಲಂಘನೆ ಮುಂದುವರಿಸಿದರೆ ವಾಹನವನ್ನೇ ಜಪ್ತಿ ಮಾಡಲಾಗುವುದು. – ಡಾ. ಧರಣಿದೇವಿ, ಪೊಲೀಸ್‌ ವರಿಷ್ಠಾಧಿಕಾರಿ

 – ನಾಗೇಂದ್ರ ಕೆ

ಟಾಪ್ ನ್ಯೂಸ್

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

4-mc-sudhakar

Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.