ಅಪ್ರಾಪ್ತರ ವ್ಹೀಲಿಂಗ್‌ ಹಾವಳಿಗೆ ಕಡಿವಾಣ ಹಾಕಿ


Team Udayavani, Jun 26, 2023, 3:13 PM IST

ಅಪ್ರಾಪ್ತರ ವ್ಹೀಲಿಂಗ್‌ ಹಾವಳಿಗೆ ಕಡಿವಾಣ ಹಾಕಿ

ಕೆಜಿಎಫ್‌: ನಗರದಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಚಾಲನಾ ಪರವಾನಗಿ ಇಲ್ಲದೆ ದ್ವಿಚಕ್ರ ವಾಹನಗಳನ್ನು ಓಡಿಸುವುದು, ವ್ಹೀಲಿಂಗ್‌ ಮಾಡುವುದು ಹೆಚ್ಚಾಗಿದ್ದು, ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ ಸಾರ್ವಜನಿಕರು ಆರೋಪಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೆಚ್ಚಾಗಿ ಬೈಕ್‌ಗಳಲ್ಲಿ ಬರುತ್ತಿದ್ದರು, ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಯವರು ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. 18 ವರ್ಷದೊಳಗಿನ ಬಾಲಕ, ಬಾಲಕಿಯರು ಚಾಲನಾ ಪರವಾನಗಿ ಇಲ್ಲದೇ ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ. ಮಕ್ಕಳಿಗೆ ವಾಹನ ನೀಡುವ ಮೂಲಕ ಪೋಷಕರು, ತಮ್ಮದೇ ಮಕ್ಕಳ ಜೀವದ ಜತೆ ಚೆಲ್ಲಾಟವಾಡುತ್ತಿದ್ದಾರೆ.

ಶಾಲಾ ಆಡಳಿತ ಮಂಡಳಿ ಪೋಷಕರಿಗೆ ನಿರ್ದೇಶನ ನೀಡುತ್ತಿಲ್ಲ: ಮಕ್ಕಳಿಗೆ ಚಲಾಯಿಸಲು ವಾಹನ ನೀಡಿದರೆ ಪೋಷಕರು ಅಥವಾ ವಾಹನ ಮಾಲೀಕರಿಗೆ ಶಿಕ್ಷೆಯಾಗುತ್ತದೆ ಎಂಬ ಕಾನೂನು ಇದ್ದರೂ, ನಗರದಲ್ಲಿನ ಪೋಷಕರು ತಲೆಕಡಿಸಿಕೊಂಡಿಲ್ಲ. ಶಾಲಾ ಕಾಲೇಜುಗಳಿಗೆ ದ್ವಿಚಕ್ರ ವಾಹನಗಳನ್ನು ಚಲಾಯಿಸಿಕೊಂಡು ಬರುವ ಮಕ್ಕಳ ಪೋಷಕರಿಗೆ ಶಾಲಾ ಆಡಳಿತ ಮಂಡಳಿಯವರು ಈ ಬಗ್ಗೆ ಸೂಕ್ತ ನಿರ್ದೇಶನ ನೀಡುತ್ತಿಲ್ಲ ಎಂಬುದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ ದೂರುಗಳಾಗಿದೆ. ಬೈಕ್‌, ಸ್ಕೂಟರ್‌ಗಳಲ್ಲಿ ಕಾಲೇಜಿಗೆ ಬರುವ ಹುಡುಗರು ಸಂಚಾರ ನಿಯಮಗಳನ್ನು ಉಲ್ಲಂಘಿ ಸುತ್ತಿದ್ದಾರೆ, ಹೆಲ್ಮೆಟ್‌ ಧರಿಸುವುದಿಲ್ಲ, ಒಂದು ಬೈಕ್‌ನಲ್ಲಿ ಮೂವರು, ನಾಲ್ವರನ್ನು ಕೂರಿಸಿಕೊಂಡು ಮನಬಂ ದಂತೆ ಅತಿ ವೇಗದಲ್ಲೂ ಬೈಕ್‌ಗಳನ್ನು ಚಲಾಯಿಸುತ್ತಾರೆ. ಮೊಬೈಲ್‌ನಲ್ಲಿ ಮಾತನಾಡುತ್ತಾ ಬೈಕ್‌ ಚಲಾಯಿಸುವರ ಸಂಖ್ಯೆ ಹೆಚ್ಚಾಗಿದೆ.

ಶಾಲಾ ಪಕ್ಕದ ಅಂಗಡಿ, ಬಂಕ್‌ಗಳಲ್ಲಿ ಬೈಕ್‌ ನಿಲುಗಡೆ: ಇನ್ನು ಕೆಲವರು ಮೀಲಿಂಗ್‌ ಕೂಡ ಮಾಡುತ್ತಾರೆ. ಕೆಲವು ಮಕ್ಕಳು ಪೋಷಕರಿಗೆ ಟ್ಯೂಶನ್‌ಗೆ ಹೋಗಿ ಬರುವುದಾಗಿ ಹೇಳಿ, ಬೈಕ್‌ಗಳನ್ನು ತೆಗೆದುಕೊಂಡು ಹೊರಬರುತ್ತಾರೆ. ಆದರೆ ಟ್ಯೂಶನ್‌ಗೆ ಹೋಗದೆ ಮುಖ್ಯ ರಸ್ತೆಗಳಲ್ಲಿ ಅಡ್ಡಾದಿಡ್ಡಿಯಾಗಿ ಸುತ್ತುವುದು ಹೆಚ್ಚಾಗಿದ್ದು, ಟ್ಯೂಶನ್‌ ಶಿಕ್ಷಕರು ಸಹ ಇದರ ಬಗ್ಗೆ ಯಾವ ಮಕ್ಕಳಿಗೂ ಬೈಕ್‌ ತರಬಾರದು ಎಂದು ತಿಳಿ ಹೇಳಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ನಗರದ ಪ್ರತಿಷ್ಠಿತ ಶಾಲಾ ಕಾಲೇಜುಗಳಿಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬೈಕ್‌ನಲ್ಲಿ ಬರುತ್ತಾರೆ, ಕೆಲವು ಶಾಲೆಗಳಲ್ಲಿ ಮಕ್ಕಳು ಬೈಕ್‌ ತರಬಾರದು ಎಂದು ಶಾಲಾ ಆಡಳಿತ ಮಂಡಳಿಯವರು ಸೂಚನೆ ನೀಡಿದ್ದಾರೆ. ಆದರೂ ಕೆಲವೊಂದು ಮಕ್ಕಳು ಬೈಕ್‌ನಲ್ಲಿ ಬಂದು ಶಾಲೆಯ ಸಮೀಪವಿರುವ ಪೆಟ್ರೋಲ್‌ ಬಂಕ್‌, ಬಸ್‌ ನಿಲ್ದಾಣ, ರಸ್ತೆಗಳ ಪಕ್ಕದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಿ ಕಾಲೇಜಿಗೆ ಬರುತ್ತಿದ್ದಾರೆ ಎನ್ನಲಾಗಿದೆ.

ಮುಖ್ಯ ರಸ್ತೆಯಲ್ಲಿ ಬೈಕ್‌ ವ್ಹೀಲಿಂಗ್‌ : ಕೆಲವು ಪಡ್ಡೆ ಹುಡುಗರು, ಬೈಕ್‌ಗಳಲ್ಲೇ ಸ್ಟಂಟ್‌ ಮಾಡುತ್ತಾ, ಗಾಡಿಗಳನ್ನು ಓಡಿಸುವ ಮೂಲಕ ಅಮಾಯಕ ಜನರನ್ನು ಹೆದರಿಸುತ್ತಾರೆ. ಒಬ್ಬರು ವ್ಹೀಲಿಂಗ್‌ ಮಾಡುತ್ತಿದ್ದರೆ ಮತ್ತೆ ಕೆಲವರು ಹಿಂದೆ ಗಾಡಿಗಳಲ್ಲಿ ಕುಳಿತು ಮೊಬೈಲ್‌ನಲ್ಲಿ ವಿಡಿಯೋಗಳನ್ನು ಮಾಡುವುದು ಹೆಚ್ಚಾಗಿದೆ. ವಿಡಿಯೋ ಮಾಡುವ ಸಂದರ್ಭದಲ್ಲಿ ಇವರನ್ನು ನೋಡುವುದಕ್ಕೆ ಕೆಲವರು ರಸ್ತೆಯಲ್ಲಿ ನಿಲ್ಲುತ್ತಾರೆ, ಇದರಿಂದ ಅಪಘಾತಗಳೂ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

ವೀಲಿಂಗ್‌ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ವೀಲಿಂಗ್‌ ಮಾಡುವವರ ವಿರುದ್ಧ ಹಾಗೂ ಅಂತಹ ಮಕ್ಕಳ ಪೋಷಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು ಎನ್ನುವುದು ಸಾರ್ವಜನಿಕರ ಒತ್ತಾಯವಾಗಿದೆ. ಮಕ್ಕಳಿಗೆ ಬುದ್ಧಿ ಹೇಳಿ ಮುಂದಾಗುವ ಅವಘಡವನ್ನು ತಡೆಯುವಲ್ಲಿ ಇಲಾಖೆ ಅಧಿಕಾರಿಗಳು ಹಾಗೂ ಪೋಷಕರು ಮುಂದಾಗಬೇಕು. ಶಾಲಾ ಆಡಳಿತ ಮಂಡಳಿಗಳಿಗೆ ಸೂಕ್ತ ನಿರ್ದೇಶನ ನೀಡಿ ಮಕ್ಕಳು ಕಾಲೇಜಿಗೆ ಬೈಕ್‌ ತರದಂತೆ ನಿಯಮಾವಳಿ ಹಾಕಬೇಕೆಂದು ಜನರು ಆಗ್ರಹಿಸಿದ್ದಾರೆ.

ಈಗಾಗಲೇ ಶಾಲಾ ಕಾಲೇಜುಗಳಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಪರವಾ ನಿಗೆ ಇಲ್ಲದೆ ವಾಹನವನ್ನು ಚಾಲಾಯಿಸ ಬಾರದೆಂದು ಅರಿವು ಮೂಡಿಸಲಾಗಿದೆ. ಮಕ್ಕಳು ಬೈಕ್‌ಗಳನ್ನು ಚಲಾಯಿಸಿದರೆ ಪೋಷಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಾಗುವುದು. ಅಪ್ರಾಪ್ತರ ವಾಹನಗಳಿಗೆ ದಂಡ ವಿಧಿ ಸಲಾಗಿದೆ. ಕೆಲವು ಮಕ್ಕಳ ಪೋಷಕರನ್ನು ಠಾಣೆಗಳಿಗೆ ಕರೆಸಿ ಬುದ್ದಿವಾದವನ್ನು ಹೇಳಲಾಗಿದೆ. ಆದಾಗ್ಯೂ ಸಂಚಾರ ನಿಯಮ ಉಲ್ಲಂಘನೆ ಮುಂದುವರಿಸಿದರೆ ವಾಹನವನ್ನೇ ಜಪ್ತಿ ಮಾಡಲಾಗುವುದು. – ಡಾ. ಧರಣಿದೇವಿ, ಪೊಲೀಸ್‌ ವರಿಷ್ಠಾಧಿಕಾರಿ

 – ನಾಗೇಂದ್ರ ಕೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.