ಹಣ, ಬಿರಿಯಾನಿ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ


Team Udayavani, Oct 26, 2021, 3:30 PM IST

ಹಣ, ಬಿರಿಯಾನಿ ಹೇಳಿಕೆ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ

ಬಂಗಾರಪೇಟೆ: ಶಾಸಕ ಎಸ್‌.ಎನ್‌. ನಾರಾಯಣ ಸ್ವಾಮಿ ಹಾಗೂ ಕೆಜಿಎಫ್ ಶಾಸಕಿ ರೂಪಾಕಲಾ ತಮ್ಮ ಕ್ಷೇತ್ರಗಳ ಅಭಿವೃದ್ಧಿಗಿಂತಲೂ ಬಿಜೆಪಿಸರ್ಕಾರದ ಮೇಲೆ ಗೂಬೆ ಕೂರಿಸುವುದರಲ್ಲಿಹೆಚ್ಚಿನ ಆಸಕ್ತಿ ಹೊಂದಿದ್ದಾರೆ ಎಂದು ಸಂಸದ ಎಸ್‌.ಮುನಿಸ್ವಾಮಿ ಟೀಕಿಸಿದರು.

ಪಟ್ಟಣದಿಂದ ಕೆಜಿಎಫ್ವರೆಗೂ ಹದಗೆಟ್ಟಿರುವ ರಸ್ತೆಗೆ ಕಾಂಕ್ರೀಟ್‌ ತೇಪೆ ಹಾಕುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಈ ರಸ್ತೆ ಹಲವು ವರ್ಷಗಳಿಂದ ಗುಂಡಿಗಳಿಂದ ಕೂಡಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿ ಹಲವು ಮಂದಿ ಅಪಘಾತಕ್ಕೆ ತುತ್ತಾಗಿದ್ದಾರೆ. ಅದಕ್ಕೆ ಮೋಕ್ಷ ಕಲ್ಪಿಸಲು ಇಬ್ಬರು ಶಾಸಕರಿಂದ ಸಾಧ್ಯವಾಗದೆ ಇದ್ದರೂ, ಬಿಜೆಪಿಸರ್ಕಾರದ ಮೇಲೆ ಕೆಸರು ಎರೆಚುವ ಕೆಲಸ ಮಾತ್ರ ನಾಜೂಕಾಗಿ ಮಾಡುತ್ತಿದ್ದಾರೆ ಎಂದು ದೂರಿದರು.

ಅಧಿವೇಶನದಲ್ಲಿ ಏಕೆ ಧ್ವನಿ ಎತ್ತಲಿಲ್ಲ: ಎಸ್ಪಿ ಕಚೇರಿ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಹೇಳಿಲ್ಲ, ಆದರೂ, ರಾಜಕೀಯ ಲಾಭ ಪಡೆಯಲು ಸುಳ್ಳುವದಂತಿಗಳನ್ನು ಸೃಷ್ಟಿಸಿ ಜನರನ್ನು ದಾರಿತಪ್ಪಿಸುವ ಕೆಲಸದಲ್ಲಿ ತೊಡಗಿದ್ದಾರೆ. ಇವರಿಗೆ ಎಸ್ಪಿ ಕಚೇರಿ ಸ್ಥಳಾಂತರವಾಗುವ ವಿಷಯ ಮೊದಲೇ ತಿಳಿದಿದ್ದರೆ, ವಿಧಾನಸಭೆ ಅಧಿವೇಶನದಲ್ಲಿ ಯಾಕೆ ಇವರು ಧ್ವನಿ ಎತ್ತಲಿಲ್ಲ ಎಂದು ಪ್ರಶ್ನಿಸಿದರು.

ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ: ಕೆಜಿಎಫ್ ಶಾಸಕಿ ರೂಪಕಲಾ ಜನರಿಗೆ ಹಣ, ಬಿರಿಯಾನಿ ಕೊಟ್ಟುತಮ್ಮ ಸತ್ಯಾಗ್ರಹ ಸಭೆಯಲ್ಲಿ ಭಾಗವಹಿಸುವಂತೆ ಮಾಡಿದ್ದಕ್ಕೆ ನಾನು ಆಕ್ಷೇಪವ್ಯಕ್ತಪಡಿಸಿದೆ. ಆದರೆ,ಇದನ್ನು ಸಂಘಟನೆಗಳ ಮುಖಂಡರು ತಪ್ಪಾಗಿಅರ್ಥೈಸಿಕೊಂಡು ತಮ್ಮ ವಿರುದ್ಧ ಪ್ರತಿಭಟನೆಮಾಡುವುದರಲ್ಲಿ ಅರ್ಥವಿಲ್ಲ ಎಂದು ಸ್ಪಷ್ಟಪಡಿಸಿದರು.

ಜನರ ಒಳಿತಿಗೆ ಬಳಸಿ: ಕಾಂಗ್ರೆಸ್‌ನ ಇಬ್ಬರು ಶಾಸಕರಿಗೆ ಜನರಿಗಿಂತ ತಮ್ಮ ಅಭಿವೃದ್ಧಿಮುಖ್ಯವಾಗಿದೆ. ನಿಜವಾದ ಜನಪ್ರತಿನಿಧಿಗಳು ಜನರ ಸಮಸ್ಯೆ ಆಲಿಸಿ ಸ್ಪಂದಿಸಬೇಕು. ಇವರುಜನರ ಮುಂದೆ ಡ್ರಾಮ ಮಾಡುತ್ತಿದ್ದಾರೆ. ಜನರಿಂದ ಹಾಗೂ ಸರ್ಕಾರಿ ಜಮೀನನ್ನುಲಪಟಾಯಿಸಿ ಕೊಳ್ಳೆ ಹೊಡೆದಿರುವ ಹಣಲ್ಲವೆ, ಅದನ್ನು ಜನರ ಒಳಿತಿಗಾಗಿ ಬಳಸಿ ಎಂದು ಸಲಹೆ ನೀಡಿದರು.

ಐಜಿಪಿಯಿಂದಲೂ ಸ್ಪಷ್ಟಿಕರಣ: ಈಗಾಗಲೇಕೆಜಿಎಫ್ನಲ್ಲಿರುವ ಜಿಲ್ಲಾ ಎಸ್ಪಿ ಕಚೇರಿ ಬಗ್ಗೆಎದ್ದಿರುವ ಊಹಾಪೋಹಗಳ ಬಗ್ಗೆ ಸಿಎಂ ಮತ್ತುಗೃಹಮಂತ್ರಿ ಜೊತೆ ಚರ್ಚೆ ಮಾಡಲಾಗಿದೆ.ಯಾವುದೇ ಕಾರಣಕ್ಕೂ ಕೆಜಿಎಫ್ ಎಸ್ಪಿ ಕಚೇರಿಎತ್ತಂಗಡಿಯಾಗದು. ಐಜಿಪಿ ಅವರೂ ಟ್ವಿಟರ್‌ಮೂಲಕ ಸ್ಪಷ್ಟೀಕರಣ ನೀಡಿದ್ದಾರೆಂದು ತಿಳಿಸಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ವಿ.ಮಹೇಶ್‌, ಕೆಜಿಎಫ್ ನಗರ ಬಿಜೆಪಿ ಅಧ್ಯಕ್ಷ ಕಮಲ್‌ನಾಥ್‌,ಪುರಸಭೆ ಸದಸ್ಯ ಕಪಾಲಿ ಶಂಕರ್‌, ಪ್ರಭಾಕರ್‌ರಾವ್‌, ಯುವ ಮೋರ್ಚಾ ಅಧ್ಯಕ್ಷ ಬಿಂದುಮಾಧವ್‌, ಎಸ್‌ಸಿ ಮೋರ್ಚಾಧ್ಯಕ್ಷ ವೆಂಕಟೇಶ್‌,ಪ್ರಧಾನ ಕಾರ್ಯದರ್ಶಿ ಹೂವು ಆರ್‌.ಬಾಬು,ಬೆಂಗನೂರು ನಾರಾಯಣಗೌಡ, ದೊಡೂxರು ತ್ಯಾಗರಾಜ್‌, ಡಿ.ಕೆ.ಹಳ್ಳಿ ಗ್ರಾಪಂ ಸದಸ್ಯ ರಾಮಯ್ಯ, ದೋಣಿಮಡಗು ಮಂಜುನಾಥ್‌, ಆಲದಮರ ಬಾಬು, ಜೋಗಿ, ಎಸ್‌ಜಿ ಕೋಟೆ ಚಂದ್ರಶೇಖರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.