ರಾಹುಲ್‌ಗಾಂಧಿ ಸ್ಪರ್ಧಿಸಿದರೂ ಸೋಲು ಖಚಿತ


Team Udayavani, Jan 2, 2023, 2:50 PM IST

tdy-14

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅಲ್ಲ ಅವರ ಲೀಡರ್‌ ರಾಹುಲ್‌ ಗಾಂಧಿನೇ ಬಂದರೂ ಭಯವಿಲ್ಲ, ಇಲ್ಲಿನ ಜನ ಈಗಾಗಲೇ ಅವರನ್ನು ಹೀನಾಯವಾಗಿ ಸೋಲಿಸಿ ಮನೆಗೆ ಕಳುಹಿಸಲು ಶಪಥ ಮಾಡಿದ್ದಾರೆ. ಕೋಲಾರದಲ್ಲಿ ವರ್ತೂರು ಪ್ರಕಾಶ್‌ ಸೇರಿದಂತೆ ಜಿಲ್ಲೆಯಲ್ಲಿ ಕನಿಷ್ಠ 4 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಶತಸಿದ್ಧ ಎಂದು ಸಂಸದ ಎಸ್‌.ಮುನಿಸ್ವಾಮಿ ಘೋಷಿಸಿದರು.

ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್‌ ನೇತೃತ್ವದಲ್ಲಿ ನಡೆದ ಬೃಹತ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಸಾವಿರಾರು ಜನರನ್ನುದ್ದೇಶಿಸಿ ಮಾತನಾಡಿದರು. ಜನರ ಜತೆಗಿರುವ ವರ್ತೂರು ಪ್ರಕಾಶ್‌ ಕೆಲಸ ಮಾಡುತ್ತಿದ್ದಾರೆ, ಅಧಿಕಾರ ಇಲ್ಲದಿದ್ದರೂ ಹಳ್ಳಿಹಳ್ಳಿಗೆ ಹೋಗಿ ಜನರ ಕಷ್ಟ ಕೇಳುತ್ತಿದ್ದಾರೆ, ಇದನ್ನು ಬಿಜೆಪಿ ಹೈಕಮಾಂಡ್‌ ಗಮನಿಸುತ್ತಿದೆ, ಟಿಕೆಟ್‌ ನೀಡುವುದು ಖಚಿತ ಎಂದರು.

ಹಾಲು,ಮೊಸರು ಕಲ್ಲಿನಲ್ಲೂ ಮೋಸ : ಮಾಲೂರು ಶಾಸಕ ಕೆ.ವೈ.ನಂಜೇಗೌಡ ಕಲ್ಲು, ಮಣ್ಣು, ಹಾಲು, ಮೊಸರಿನಲ್ಲೂ ಜನರನ್ನು ವಂಚಿಸಿದ್ದಾರೆ. ಅವರ ಅಧ್ಯಕ್ಷತೆಯ ಕೋಲಾರ ಹಾಲು ಒಕ್ಕೂಟದಲ್ಲಿ ಅವರ ಮನೆಯ ಮೂರು ಕಾರುಗಳಿಗೆ ಡೀಸೆಲ್‌ ಹಾಕಿಸ್ತಾರೆ, ಈ ಹಣ ರೈತರದ್ದು, ಈ ವಂಚನೆ ನಿಲ್ಲಬೇಕು ಎಂದು ಒತ್ತಾಯಿಸಿದರು.

ಮಾಜಿ ಸಚಿವ ವರ್ತೂರು ಪ್ರಕಾಶ್‌ ಮಾತನಾಡಿ, ವಕ್ಕಲೇರಿ ಹೋಬಳಿಯ ಜನತೆ ಬುದ್ದಿವಂತರು, ಈ ಕ್ಷೇತ್ರದಲ್ಲಿ ಎರಡು ಚುನಾವಣೆಯಲ್ಲಿ ನನಗೆ ಲೀಡ್‌ ನೀಡಿದ್ದಾರೆ, ಗ್ರಾ.ಪಂ ಸದಸ್ಯ ಮಂಜುನಾಥ್‌, ಮುಖಂಡರಾದ ಅಬ್ಬಣ್ಣ, ಶ್ರೀಪತಿ, ಪ್ರಕಾಶ್‌,ನಾರಾಯಣಗೌಡ, ಎಲ್ಲರೂ ಇಂದು ಸೇರ್ಪಡೆಯಾಗುತ್ತಿದ್ದು, ಬಿಜೆಪಿ ಕಟ್ಟುವ ಕೆಲಸ ಮಾಡಿ ಎಂದು ಕರೆ ನೀಡಿದರು.

ಇಂದು ಕುರಗಲ್‌ಗ್ರಾಮದ ಮುಖಂಡರಾದ ಮುನೇಶ್ವರಪ್ಪ, ನಾರಾಯಣಸ್ವಾಮಿ, ರಾಜಣ್ಣ, ಪ್ರಕಾಶ್‌, ಮುನಿನಾರಾಯಣಪ್ಪ, ಮುನೇಶ್‌, ವೆಂಕಟೇಶ್‌, ಪ್ರವೀಣ್‌, ರಾಮಪ್ಪ, ವಿಜಯಕುಮಾರ್‌, ಚಿಕ್ಕಮುನಿರಾಜು, ಆಂಜಿ ಮತ್ತಿತರರು ಬಿಜೆಪಿಗೆ ಸೇರ್ಪಡೆಯಾದರು.

ಮಾಜಿ ಶಾಸಕರಾದ ಸಂಪಂಗಿ, ಮಂಜುನಾಥಗೌಡ, ಎಂ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್‌, ತಾಲ್ಲೂಕು ಅಧ್ಯಕ್ಷ ಸಿ.ಡಿ.ರಾಮಚಂದ್ರೇಗೌಡ, ಬಿಜೆಪಿ ಮುಖಂಡರಾದ ಬೆಗ್ಲಿ ಪ್ರಕಾಶ್‌, ಜಿಪಂ ಮಾಜಿ ಸದಸ್ಯರಾದ ಅರುಣ್‌ ಪ್ರಸಾದ್‌,ರೂಪಶ್ರೀ, ಬಂಕ್‌ ಮಂಜುನಾಥ್‌, ಸೂಲೂರು ಆಂಜಿನಪ್ಪ, ತಂಬಳ್ಳಿ ಮುನಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

ವರ್ತೂರು ಗೆಲುವು ತಡೆಯಲು ಸಾಧ್ಯವಿಲ್ಲ : ಸಿದ್ದರಾಮಯ್ಯ ಮತ್ತವರ ಕಾಂಗ್ರೆಸ್‌ ಪಕ್ಷ ಕುರುಬರು, ಒಕ್ಕಲಿಗರು, ದಲಿತರು, ಅಲ್ಪಸಂಖ್ಯಾತರ ವಿರೋಧಿಯಾಗಿದೆ, ಇವರೆಲ್ಲರೂ ಸಿದ್ದರಾಮಯ್ಯ ಕೋಲಾರಕ್ಕೆ ಬರಲಿ ಎಂದು ಕಾಯುತ್ತಿದ್ದಾರೆ. ಜನರೊಂದಿಗೆ ಮಿಳಿತವಾಗಿರುವ ವರ್ತೂರು ಪ್ರಕಾಶ್‌ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ದಲಿತರ ವಿರೋಧಿ ಕಾಂಗ್ರೆಸ್‌ ಎಂಬುದು ಅನೇಕ ನಿದರ್ಶನಗಳ ಮೂಲಕ ಸತ್ಯವಾಗಿದೆ, ಬಿಜೆಪಿ ಎಂದಿಗೂ ದಲಿತ ವಿರೋಧಿಯಲ್ಲ, ವಾಜಪೇಯಿ, ಮೋದಿಯವರ ಆಡಳಿತದಲ್ಲಿ ದಲಿತರಿಗಾಗಿ ಕೆಲಸ ಮಾಡಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಸಂಸದ ಮುನಿಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.