ಸೋರುತಿಹುದು ನಾಡಕಚೇರಿ ಮಾಳಿಗೆ


Team Udayavani, Nov 21, 2021, 5:15 PM IST

ನಾಡ ಕಚೇರಿ

ಮಾಲೂರು: ಕಳೆದ ಎರಡು ದಿನಗಳಿಂದ ಟೇಕಲ್‌ ಸುತ್ತಮುತ್ತ ಮಳೆ ಆಗುತ್ತಿದ್ದು, ಕೆರೆ ಕುಂಟೆಗಳು ತುಂಬಿ ನೀರು ಹರಿಯುತ್ತಿದೆ. ಟೇಕಲ್‌ ನಾಡಕಚೇರಿಯು ಮಳೆಯಿಂದ ಶಿಥಿಲವಾಗಿದ್ದು, ಚಾವಣಿ ಕಿತ್ತುಹೋಗಿ ನೀರು ಸೋರಿಕೆ ಆಗುತ್ತಿದೆ. ಕಡತಗಳು ಸಂಗ್ರಹಿಸಿ ಇಡುತ್ತಿದ್ದ ಅಬಿಲೇಖಾಲಯದ ಎಲ್ಲಾ ಗೋಡೆ ನೀರು ಹಿಡಿದಿದೆ.

ಇಡೀ ಕಚೇರಿ ಜಲಾವೃತ ಗೊಂಡಿದೆ. ಈ ಹಿನ್ನೆಲೆಯಲ್ಲಿ ಕಂಪ್ಯೂಟರ್‌ ರೂಂನಿಂದ ಪಹಣಿ, ಇತರೆ ದಾಖಲೆ ಕೊಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾಡಕಚೇರಿ ಉಪತಹಶೀಲ್ದಾರ್‌ ಕಚೇರಿ ಬಳಿ ಮಳೆಯಿಂದ ಕಚೇರಿ ಶಿಥಿಲಗೊಂಡಿದ್ದು, ನ.20ರಂದು ಕೆಲಸ ಸ್ಥಗಿತಗೊಳಿಸಲಾಗಿದೆ ಎಂದು ಸೂಚನಾ ಫಲಕವನ್ನು ಲಗತ್ತಿಸಿ, ಕಚೇರಿಗೆ ಬೀಗ ಹಾಕಲಾಗಿದೆ. ರೈತರು ತಮ್ಮ ದಾಖಲೆಗಳು ಸಿಗದೆ ವಾಪಸ್ಸಾದರು.

ಇದನ್ನೂ ಓದಿ:- ಬೇಡಿಕೆ ಈಡೇರಿಕೆಗೆ ರೈತರ ಒತ್ತಾಯ

ಕಳೆದ ಎರಡು ತಿಂಗಳಿಂದಲೇ ಟೇಕಲ್‌ ನಾಡಕಚೇರಿಯು ಬಹುತೇಕ ಶಿಥಿಲಗೊಂಡಿತ್ತು. ಪ್ರತಿ ಬಾರಿ ಮಳೆ ಬಂದಾಗಲೂ ಇದೇ ರೀತಿಯಾದ ಸಮಸ್ಯೆ ಎದುರಾಗುತ್ತಿದ್ದು, ಈ ಬಾರಿ ಇಡೀ ಕಟ್ಟಡ ನೀರು ಹಿಡಿದಿದೆ. ಕಂಪ್ಯೂಟರ್‌ ರೂಂನಲ್ಲಿ ವಿದ್ಯುತ್‌ ಸಂಪರ್ಕವಿಲ್ಲದ ಕಾರಣ, ತಕ್ಷಣ ಕಾರ್ಯ ಸ್ಥಗಿತಗೊಳಿಸಲಾಯಿತು.

ಕಚೇರಿಯ ಎಲ್ಲಾ ಕೊಠಡಿಗಳು ಮಳೆಯಿಂದ ನೆನೆಯುತ್ತಿದ್ದು, ಅಧಿ ಕಾರಿಗಳು ಕುಳಿತು ಕೆಲಸ ಮಾಡಲು ಸಹ ಸಾಧ್ಯವಾಗುತ್ತಿಲ್ಲ. ನಾಡಕಚೇರಿ ಉಪತಹಶೀಲ್ದಾರ್‌ ಜಗನ್ನಾಥರೆಡ್ಡಿ ಮಾತನಾಡಿ, ನಿರಂತರ ಮಳೆಗೆ ರೆಕಾರ್ಡ್‌ ರೂಮ್‌ ಸೋರಿಕೆ ಆಗುತ್ತಿದ್ದು, ಕಡತಗಳನ್ನು ಸಂರಕ್ಷಿಸಲು ಟಾರ್ಪಲ್‌ ಹಾಕಲಾಗಿದೆ.

ಕಂಪ್ಯೂಟರ್‌ ರೂಂನಲ್ಲಿ ನೀರು ಸುರಿಯುತ್ತಿರುವ ಕಾರಣ ಕರೆಂಟ್‌ ಶಾಕ್‌ ಹೊಡೆಯುತ್ತಿದ್ದು, ನಾಡಕ ಚೇರಿಯ ಕಾರ್ಯಚಟುವಟಿಕೆ ತಾತ್ಕಾಲಿಕ ಸ್ಥಗಿತ ಮಾಡಲಾಗಿದೆ ಎಂದು ಹೇಳಿದರು. ಮಳೆ ನಿಲ್ಲುವ ಸೂಚನೆ ನೋಡಿಕೊಂಡು ಶಿಥಿಲವಾದ ಕಡೆ ಸ್ವಲ್ಪಮಟ್ಟಿಗೆ ರೀಪೇರಿ ಮಾಡಿಕೊಂಡು ಮುಂದು ವರಿಸಲಾಗುತ್ತದೆ. ಕೆ.ಜಿ.ಹಳ್ಳಿ ಸರ್ವೆ ನಂ.10ರಲ್ಲಿ 20 ಗುಂಟೆ ಸ್ಥಳ ನಾಡಕಚೇರಿಗೆ ಮಂಜೂರು ಆಗಿದ್ದು, ಡೀಸಿ ಆದೇಶದಂತೆ ಶೀಘ್ರದಲ್ಲೆ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.