ಲಾಕ್‌ಡೌನ್‌ ಅವಧಿಯಲ್ಲಿ ನರೇಗಾ ವರದಾನ


Team Udayavani, Apr 19, 2020, 3:32 PM IST

kolar-tdy-1

ಸಾಂದರ್ಭಿಕ ಚಿತ್ರ

ಕೋಲಾರ: ಲಾಕ್‌ಡೌನ್‌ ಅವಧಿಯಲ್ಲಿಯೂ ಉದ್ಯೋಗ ಖಾತ್ರಿ ಯೋಜನೆಯು ಜಿಲ್ಲೆಯ ಗ್ರಾಮೀಣ ಜನತೆಯ ಪ್ರಮುಖ ಆದಾಯ ಮೂಲವಾಗಿದೆ.

ದೈಹಿಕ ಅಂತರ ಕಾಪಾಡಿಕೊಂಡು ಎಂತದ್ದೇ ಮಾನವಶಕ್ತಿ ಸೃಜನೆಯ ಕೆಲಸವನ್ನು ಮಾಡ ಬಹುದು ಎಂಬುದಷ್ಟೇ ನರೇಗಾಗೆ ವಿಧಿಸಿರುವ ಹೊಸ ಷರತ್ತಾಗಿದೆ. ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಸಾವಿರಾರು ಮಂದಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಸಂಜೆ ವೇಳೆಗೆ 33,180 ಮಾನವ ದಿನಗಳನ್ನು ಸೃಜಿಸಲಾಗಿತ್ತು. ಶನಿವಾರಕ್ಕೆ ಇದಕ್ಕೆ ಮತ್ತೂಂದು ಸಾವಿರದಷ್ಟು ಮಾನವ ಸೃಜನೆಯ ಕಾರ್ಯ ಸೇರ್ಪಡೆ ಯಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ಅಂದಾಜು ಮಾಡುತ್ತಿದ್ದಾರೆ.

ಲಾಕ್‌ಡೌನ್‌ ಆರಂಭಿಕ ದಿನಗಳಲ್ಲಿ ಯಾವುದೇ ಕೆಲಸ ಕಾರ್ಯ ಮಾಡಬಾರ ದೆಂಬ ಭೀತಿ ಎದುರಾಗಿತ್ತು. ಆದರೆ, ಆನಂತರದ ದಿನಗಳಲ್ಲಿ ನರೇಗಾಗೆ ಹಸಿರು ನಿಶಾನೆ ಸಿಕ್ಕಿರುವುದ ರಿಂದ ಸಾವಿರಾರು ಮಂದಿ ಮನೆಗಳಿಂದ ಹೊರ ಬಂದು ವಿವಿಧ ಖಾತ್ರಿ ಕಾಮಗಾರಿಗಳಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುತ್ತಿದ್ದಾರೆ. ವಿದ್ಯಾವಂತರು ಸೇರ್ಪಡೆ: ಕೋಲಾರ ತಾಲೂಕಿನ ಕೋಟಿ ಗಾನಹಳ್ಳಿ ಹೊಸಕೆರೆಯಲ್ಲಿ ಲಾಕ್‌ಡೌನ್‌ ಆರಂಭಕ್ಕೂ ಮುನ್ನವೇ ಉದ್ಯೋಗ ಖಾತ್ರಿಯಲ್ಲಿ ಕೆರೆ ಹೂಳೆತ್ತುವ ಕಾಮ ಗಾರಿ ಆರಂಭವಾಗಿತ್ತು. ಆದರೆ, ಹತ್ತಿಪ್ಪತ್ತು ಮಂದಿ ಮಾತ್ರವೇ ಕೆಲಸಕ್ಕೆ ಬರುತ್ತಿ ದ್ದರು. ಆದರೆ, ಲಾಕ್‌ಡೌನ್‌ನಿಂದ ಉಳಿದ ಆದಾಯ ಮೂಲ ಕೆಲಸಗಳು ಸ್ಥಗಿತಗೊಂಡಿ ರುವುದರಿಂದ ಶನಿವಾರ 60ಕ್ಕೂ ಹೆಚ್ಚು ಮಂದಿ ಅದರಲ್ಲೂ ವಿದ್ಯಾವಂತ ಯುವಕ ಯುವತಿಯರು ಕೆಲಸದಲ್ಲಿ ಸೇರ್ಪಡೆಯಾಗಿದ್ದಾರೆ.

ಲಾಕ್‌ಡೌನ್‌ ಅವಧಿಯಲ್ಲಿಯೇ ದೈಹಿಕ ಮಿತಿ ಕಾಪಾಡಿಕೊಂಡು ಗ್ರಾಮೀಣ ಜನತೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳು ತೆಗೆಯುವುದು, ಕೆರೆಯಲ್ಲಿ ನಾಟಿ ಮಾಡುವುದು, ಬದುಗಳ ನಿರ್ಮಾಣ, ನೀರು ಒಳ ಹರಿವು ಹೊರ ಹರಿವು ಕಾಲುವೆಗಳ ನಿರ್ಮಾಣ, ಮಣ್ಣಿನ ರಸ್ತೆ, ವೈಯಕ್ತಿಕವಾಗಿ 2 ಎಕರೆ ಜಮೀನುಗಳ ಬದು ನಿರ್ಮಾಣ, ಮನೆ ನಿರ್ಮಾಣದಂತ ಕೆಲಸಗಳನ್ನು ಮಾಡಬಹುದಾಗಿದೆ. ಲಾಕ್‌ಡೌನ್‌ ಅವಧಿಯಲ್ಲಿ ಮಿಕ್ಕೆಲ್ಲಾ ಕೆಲಸ ಕಾರ್ಯಗಳು ಸ್ಥಗಿತಗೊಂಡಿರುವುದರಿಂದ ಉದ್ಯೋಗ ಖಾತ್ರಿ ಕೋಲಾರ ಜಿಲ್ಲೆಯ ಜನತೆಗೆ ವರದಾನವಾಗಿ ಪರಿಣಮಿಸಿದೆ.

ದೈಹಿಕ ಅಂತರದ ಹೊಸ ಷರತ್ತಿಗೊಳಪಟ್ಟು ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂದಿನ ನಿಯಮಾವಳಿಗಳನ್ವಯ ಮಾನವ ಸೃಜನೆಯ ಎಲ್ಲಾ ಕಾಮಗಾರಿಗಳನ್ನು ಮಾಡಲು ಅವಕಾಶವಿದ್ದು, ಗ್ರಾಮೀಣ ಜನತೆ ನರೇಗಾವನ್ನು ಮತ್ತಷ್ಟು ಸದ್ಬಳಕೆಮಾಡಿಕೊಳ್ಳಬೇಕು.  ಸಿ.ಎಸ್‌.ವೆಂಕಟೇಶ್‌, ಅಧ್ಯಕ್ಷರು, ಜಿಪಂ

 

-ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.