ಹೆದ್ದಾರಿಯಲ್ಲಿ ರಸ್ತೆ ವಿಭಜಕವಿಲ್ಲದ್ದಕ್ಕೆ ಸಂಕಷ್ಟ

ರಸ್ತೆ ದಾಟಲು ಹೋಗಬೇಕು ಕಿ.ಮೀ. ದೂರ , ತಾಲೂಕಿನ 35-40 ಹಳ್ಳಿಗಳ ಜನರಿಗೆ ಸಂಕಷ್ಟ

Team Udayavani, Jan 4, 2021, 2:48 PM IST

ಹೆದ್ದಾರಿಯಲ್ಲಿ ರಸ್ತೆ ವಿಭಜಕವಿಲ್ಲದ್ದಕ್ಕೆ ಸಂಕಷ್ಟ

ಮುಳಬಾಗಿಲು: ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರಾಷ್ಟ್ರೀಯ ಹೆದ್ದಾರಿ 75ರ ಆಂಧ್ರದ ಗಡಿ ರೇಖೆಯಲ್ಲಿ ಹೆದ್ದಾರಿ ಅಧಿಕಾರಿಗಳು ರಸ್ತೆ ವಿಭಜಕ ನಿರ್ಮಾಣ ಮಾಡದೇ ಇರುವುದರಿಂದ ಗಡಿ ಭಾಗದ ಎರಡೂ ಬದಿಯಲ್ಲಿನ 35-40 ಹಳ್ಳಿಗಳ ಜನರು ರಸ್ತೆ ದಾಟಲು 2 ಕಿ.ಮೀ. ದೂರದ ಆಂಧ್ರದ ಹಾಲುಕುಪ್ಪಕ್ಕೆ ಹೋಗಿ ಸುತ್ತಿಕೊಂಡು ಬರ ಬೇಕಾಗಿದೆ.

ತಾಲೂಕಿನಲ್ಲಿ ಹಾದು ಹೋಗಿರುವ ಹೆದ್ದಾರಿಯನ್ನುಕೇಂದ್ರ ಸರ್ಕಾರ ಮೇಲ್ದರ್ಜೆಗೇರಿಸಲು ಉದ್ದೇಶಿಸಿಹೆದ್ದಾರಿ ಅಭಿವೃದ್ಧಿ ಅಧಿಕಾರಿಗಳು ಚುತುಷ್ಪಥ ರಸ್ತೆಯನ್ನಾಗಿ ನಿರ್ಮಿಸಲು ಕ್ರಮ ಕೈಗೊಂಡಿದ್ದರು.ಅದರಂತೆ 2013ರಲ್ಲಿ ಲ್ಯಾಂಕೋ ಕಂಪನಿಯು ಹೊಸ ಕೋಟೆಯಿಂದ ಮುಳಬಾಗಿಲು ನಗರದ ಮದರಸಾವರೆಗೂ ನಿರ್ಮಿಸಿ ಹೆದ್ದಾರಿ ಅಭಿವೃದ್ಧಿಗಾಗಿವ್ಯಯವಾಗಿರುವ ಹಣವನ್ನು ವಸೂಲಿ ಮಾಡಲು ದೇವರಾಯಸಮುದ್ರ ಬಳಿ ಟೋಲ್‌ ನಿರ್ಮಿಸಿದ್ದಾರೆ.

ಶುಲ್ಕ ವಸೂಲಿ: ಎರಡನೇ ಹಂತವಾಗಿ ರಸ್ತೆ ಸಾರಿಗೆಮತ್ತು ಹೆದ್ದಾರಿಗಳ ಸಚಿವಾಲಯ ಭಾರತ ಸರ್ಕಾರದ ಅನುಸಾರ ಜೆಎಸ್‌ಆರ್‌ ಟೋಲ್‌ವೇಸ್‌ ಪ್ರçವೇಟ್‌ಲಿಮಿಟೆಡ್‌ ಕಂಪನಿಯು ರಾ.ಹೆ.75ರ ಮುಳಬಾಗಿಲ  ನಗರದ ಮದರಸಾದಿಂದ ಕರ್ನಾಟಕ ಗಡಿ ಭಾಗದ ವರೆಗೆ 2015ರಲ್ಲಿ ಚುತುಷ್ಪಥ ರಸ್ತೆ ನಿರ್ಮಿಸಿದ್ದು, ಹೆದ್ದಾರಿಯ ಬಳಕೆಗಾಗಿ ಬಳಕೆದಾರ ಶುಲ್ಕ  ಸಂಗ್ರಹಿಸಲು ಗಡಿ ರೇಖೆಯಿಂದ 500 ಮೀ.ದೂರದ ಎನ್‌.ಯಲುವಹಳ್ಳಿ ಬಳಿ ಟೋಲ್‌ ಪ್ಲಾಜಾನಿರ್ಮಿಸಿಕೊಂಡು ಶುಲ್ಕ ವಸೂಲಿ ಮಾಡಲಾಗುತ್ತಿದೆ.

ಆಂಧ್ರದ ಹಾಲುಕುಪ್ಪದಲ್ಲಿ ರಸ್ತೆ ವಿಭಜಕ: ಆದರೆ ಗಡಿ ರೇಖೆಯಿಂದ ಆಂಧ್ರದಲ್ಲಿ ಹೆದ್ದಾರಿಯನಿರ್ಮಾಣ ಕಾರ್ಯವು ಹಲವಾರು ವರ್ಷಗಳಿಂದ ವಿಳಂಬವಾಗಿತ್ತು. ಆದರೆ ಕಳೆದ 10 ತಿಂಗಳ ಹಿಂದೆ ಆಂಧ್ರದಲ್ಲಿಯೂ ಹೆದ್ದಾರಿ ಅಭಿವೃದ್ಧಿ ಕಾಮಗಾರಿಪೂರ್ಣಗೊಂಡಿತ್ತು. ಆ ಸಂದರ್ಭದಲ್ಲಿ ಗಡಿ ರೇಖೆಯಬಳಿ ವಾಹನಗಳು ಒಂದು ಭಾಗದಿಂದ ಮತ್ತೂಂದುಭಾಗಕ್ಕೆ ತಿರುವು ಪಡೆದುಕೊಳ್ಳಲು ಅಗತ್ಯವುಳ್ಳ ರಸ್ತೆವಿಭಜಕವನ್ನು ಹೆದ್ದಾರಿ ಅಧಿಕಾರಿಗಳು ನಿರ್ಮಿಸದೇಇದೇ ರಸ್ತೆಗೆ ಸಂಯೋಜನೆ ಮಾಡಿಕೊಂಡೇಮುಂದುವರೆಸಿಕೊಂಡು ಹೋಗಿ ಗಡಿ ರೇಖೆಯಿಂದ ಆಂಧ್ರದ ಹಾಲುಕುಪ್ಪ ಗ್ರಾಮದಲ್ಲಿ ರಸ್ತೆ ವಿಭಜಕ ನಿರ್ಮಿಸಿರುತ್ತಾರೆ.

2 ಕಿ.ಮೀ ದೂರ: ಇದರಿಂದ ರಸ್ತೆಯ ಇಕ್ಕಲಗಳಲ್ಲಿರುವ ಉಪ್ಪರಹಳ್ಳಿ, ಬ್ಯಾಟನೂರು,ನಗವಾರ, ಉಗಣಿ, ಗೋಣಿಕುಪ್ಪ, ಟಿ.ಕುರುಬರಹಳ್ಳಿ,  ಪ್ಪದೊಡ್ಡಿ, ಕುಕ್ಕಲದೊಡ್ಡಿ ಚಿನ್ನಬಾಲೇಪಲ್ಲಿ ಸೇರಿದಂತೆ ಆಂಧ್ರದ ಗಡಿ ಭಾಗದಲ್ಲಿನ ಕರ್ನಾಟಕಕ್ಕೆ ಸೇರಿದಹಲವಾರು ಉಪ್ಪರಹಳ್ಳಿ, ಬ್ಯಾಟನೂರು, ನಗವಾರಗ್ರಾಮಗಳ ಜನರು ಮುಳಬಾಗಿಲಿಗೆ ಅಥವಾಮತ್ತಿತರ ಗ್ರಾಮಗಳಿಗೆ ವಾಹನಗಳ ಮೂಲಕ ತೆರಳಿರಸ್ತೆ ದಾಟಬೇಕಾದರೆ 2 ಕಿ.ಮೀ. ದೂರದಲ್ಲಿರುವಹಾಲುಕುಪ್ಪ ಗ್ರಾಮಕ್ಕೆ ಹೋಗಿ ಬರ ಬೇಕಾಗಿರುತ್ತದೆ.ಇಲ್ಲದೇ ಮುಂದೆಯಿಂದ ಬರುವ ವಾಹನಗಳನ್ನುತಪ್ಪಿಸಿಕೊಂಡು 1.ಕಿ.ಮೀ ದೂರದಲ್ಲಿರುವ ಜೆಎಸ್‌ಆರ್‌ಟೋಲ್‌ಗೇಟ್‌ವರೆಗೂ ರಾಂಗ್‌ ರೋಡಲ್ಲಿವಾಹನಗಳಲ್ಲಿ ಚಲಿಸಿಕೊಂಡು ಮುಂದೆ ಹೋಗಿ ರಸ್ತೆದಾಟಬೇಕಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಹಲವು ಬಾರಿ ಅಪಘಾತಗಳು ಉಂಟಾಗುವ ಸಾಧ್ಯತೆ ಇರುತ್ತದೆ.

ರಸ್ತೆ ವಿಭಜಕ ನಿರ್ಮಿಸಲು ಆಗ್ರಹ ಕರ್ನಾಟಕ : ಗಡಿ ರೇಖೆಯಿಂದ 500 ಮೀ.ದೂರದ ಆಂಧ್ರದಲ್ಲಿ ಪೊಲೀಸ್‌ ಚೆಕ್‌ ಪೋಸ್ಟ್‌ ನಿರ್ಮಿಸಲಾಗಿರುವುದರಿಂದ ಉಪ್ಪರಹಳ್ಳಿ,ಬ್ಯಾಟನೂರು, ನಗವಾರ, ಉಗಣಿ, ಗೋಣಿಕುಪ್ಪ, ಟಿ.ಕುರುಬರಹಳ್ಳಿ, ತಿಪ್ಪದೊಡ್ಡಿ, ಕುಕ್ಕಲದೊಡ್ಡಿ ಚಿನ್ನಬಾಲೇಪಲ್ಲಿ ಮತ್ತಿತರ ಗ್ರಾಮಗಳ ಜನಸಾಮಾನ್ಯರ ಅನಾರೋಗ್ಯ ಹಾಗೂ ಅತ್ಯವಸರಸಂದರ್ಭಗಳಲ್ಲಿಯೂ ರಸ್ತೆ ದಾಟಲು 2+2ಕಿ.ಮೀ ಸುತ್ತಿಕೊಂಡು ಬರಬೇಕಾಗಿದೆ. ಶೀಘ್ರವಾಗಿ ಕರ್ನಾಟಕ-ಆಂಧ್ರದ ಪ್ರದೇಶ ಗಡಿ ರೇಖೆಯಲ್ಲಿರಸ್ತೆ ವಿಭಜಕವನ್ನು ನಿರ್ಮಿಸಬೇಕೆಂದುಉಪ್ಪರಹಳ್ಳಿ ಗ್ರಾಮದ ಮುಖಂಡ ಕಾಂತರಾಜ್‌ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗುವುದು. ಎಸ್‌.ಮುನಿಸ್ವಾಮಿ, ಸಂಸದ

 

-ಎಂ.ನಾಗರಾಜಯ್ಯ

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.