ಅಕ್ರಮ ಪಿಯು ಕಾಲೇಜುಗೆ ನೋಟಿಸ್‌


Team Udayavani, Jun 1, 2018, 2:13 PM IST

bantwal.jpg

ಕೋಲಾರ: ಜಿಲ್ಲಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ಕಾಲೇಜುಗಳು ನಾಯಿ ಕೊಡೆಗಳಂತೆ ತಲೆ ಎತ್ತಿದ್ದು, ಬಹುತೇಕ ಕಾಲೇಜುಗಳು ನಿಯಮ ಮೀರಿ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ವಿದ್ಯಾರ್ಥಿ ಪೋಷಕರಿಂದ ಲಕ್ಷಾಂತರ ರೂ. ಡೊನೇಷನ್‌ ಮತ್ತಿತರ ಹೆಸರಿನಲ್ಲಿ ವಸೂಲು ಮಾಡುತ್ತಿರುವ ಕಾಲೇಜುಗಳು ಸಮರ್ಪಕ ದಾಖಲೆಗಳನ್ನು ಹೊಂದಿಲ್ಲ ಎಂದು ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಎಚ್ಚೆತ್ತುಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಸಂಬಂಧಪಟ್ಟ ಕಾಲೇಜುಗಳಿಗೆ ನೋಟಿಸ್‌ ಜಾರಿ ಮಾಡಿದೆ. ಏಳು ದಿನಗಳೊಳಗಾಗಿ ಸೂಕ್ತ ಸಮಜಾಯಿಷಿ ನೀಡದಿದ್ದರೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಶಿಕ್ಷಣದ ವ್ಯಾಪಾರೀಕರಣ: ಇತ್ತೀಚಿನ ದಿನಗಳಲ್ಲಿ ಕೋಲಾರ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ ಹೆಚ್ಚಳವಾಗಿದ್ದು, ಹೀಗೆ ಪಾಸಾದ ವಿದ್ಯಾರ್ಥಿಗಳನ್ನು ವಿವಿಧ ರೀತಿಯಲ್ಲಿ ಆಕರ್ಷಿಸುವ ಮೂಲಕ ಶಿಕ್ಷಣದ ವ್ಯಾಪಾರೀಕರಣಕ್ಕಾಗಿ ಅನೇಕ ಕಾಲೇಜುಗಳು ಹುಟ್ಟಿಕೊಂಡಿವೆ. ಕೆಲವು ಕಾಲೇಜುಗಳು ತಾವು ಅನುಮತಿ ಪಡೆದ ಕಟ್ಟಡದಲ್ಲಿ ಕಾಲೇಜನ್ನು ನಡೆಸದೇ ಬೇಕಾಬಿಟ್ಟಿಯಾಗಿ ಸ್ಥಳಾಂತರ ಮಾಡಿಕೊಂಡಿವೆ.

ಇನ್ನು ಕೆಲವು ಕಾಲೇಜುಗಳು ತಮ್ಮ ಕಾಲೇಜಿನ ಹೆಸರಿನಲ್ಲಿ ಮತ್ತೂಂದು ಸಂಸ್ಥೆಗೆ ಕಾಲೇಜು ನಡೆಸಲು ಅನಧಿಕೃತವಾಗಿ ಅವಕಾಶ ಕಲ್ಪಿಸುವ ಮೂಲಕ ನಿಯಮಗಳನ್ನು ಮೀರಿ ಕೋಟ್ಯಂತರ ರೂ. ವಹಿವಾಟನ್ನು ನಡೆಸುತ್ತಿವೆ. ಇನ್ನುಕೆಲವು ಕಾಲೇಜುಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಯಾವುದೇ ಪರವಾನಗಿ ಪಡೆಯದೇ ತಮ್ಮಿಷ್ಟದಂತೆ ರಾಜಾರೋಷವಾಗಿ ಕಾಲೇಜು ಆರಂಭಿಸಿ ನೂರಾರು ವಿದ್ಯಾರ್ಥಿಗಳಿಗೂ ಪ್ರವೇಶವನ್ನು ಕಲ್ಪಿಸಿರುವುದು ಕಂಡುಬಂದಿದೆ.
 
ನಾಯಿ ಕೊಡೆಯಂತೆ ತಲೆ ಎತ್ತಿದ ಪಿಯು ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳ ಭವಿಷ್ಯದ ಬೆಳವಣಿಗೆಯಿಂದ ಪ್ರಮುಖ ಘಟ್ಟವಾಗಿದ್ದು, ಬಹುತೇಕ ಪೋಷಕರು ಹಣದ ಮುಖ ನೋಡದೇ ಉತ್ತಮ ಕಾಲೇಜಿಗಾಗಿ ಅರಸುವುದು ಸಾಮಾನ್ಯವಾಗಿದೆ. ಇದನ್ನು ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಜಿಲ್ಲಾ ಕೇಂದ್ರದಲ್ಲಿ ದ್ವಿತೀಯ ಪಿಯು ಕಾಲೇಜುಗಳು ನಾಯಿ ಕೊಡೆಗಳಂತೆ ತಲೆ ಎತ್ತುತ್ತಿವೆ.

ಲಕ್ಷಾಂತರ ರೂ.ವಸೂಲಿ: ಅನ್ನು ಪ್ರತಿ ವಿದ್ಯಾರ್ಥಿಯಿಂದ ವಸೂಕಾಲೇಜುಗಳ ಕಟ್ಟಡ, ಸಮವಸ್ತ್ರ, ಭಾರೀ ಡೊನೇಷನ್‌ ಹಾಗೂ ಫ್ಲೆಕ್ಸ್‌ಗಳ ಆಕರ್ಷಕ ಜಾಹೀರಾತು ಇತ್ಯಾದಿಗಳನ್ನು ಗಮನಿಸುತ್ತಿರುವ ಪೋಷಕರು ತಮ್ಮ ಮಕ್ಕಳನ್ನು ಅವರು ಕೇಳಿದಷ್ಟು ಹಣ ಕೊಟ್ಟು ದಾಖಲಾತಿ ಮಾಡುತ್ತಿದ್ದಾರೆ.

ತಾವು ಮಕ್ಕಳನ್ನು ಸೇರಿಸುತ್ತಿರುವ ಕಾಲೇಜುಗಳಿಗೆ ಸಮರ್ಪಕ ದಾಖಲಾತಿ, ಅನುಮತಿ ಇದೆಯೇ ಎನ್ನುವುದನ್ನೂ ಗಮನಿಸುತ್ತಿಲ್ಲ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಕಾಲೇಜುಗಳು, ದ್ವಿತೀಯ ಪಿಯು ಕೋಚಿಂಗ್‌, ಸಿಇಟಿ ಕೋಚಿಂಗ್‌, ನೆಟ್‌ ಕೋಚಿಂಗ್‌, ಗೇಟ್‌ ಕೋಚಿಂಗ್‌ ಇತ್ಯಾದಿ ನೆಪದಲ್ಲಿ ಎರಡು ಮೂರು ಲಕ್ಷ ರೂ. ಅನ್ನು ಪ್ರತಿ ವಿದ್ಯಾರ್ಥಿಯಿಂದ ವಸೂಲು ಮಾಡುತ್ತಿವೆ.

ರಾಜಾರೋಷವಾಗಿ ನಡೆದ ಕಾಲೇಜು ದಂಧೆ: ಇಂತಹ ಕಾಲೇಜುಗಳಲ್ಲಿ ಕೇವಲ ನಗರ ಮಟ್ಟದ ವಿದ್ಯಾರ್ಥಿಗಳು ಮಾತ್ರ ದಾಖಲಾತಿ ಆಗುವುದಲ್ಲದೇ, ಜಿಲ್ಲಾ ಕೇಂದ್ರದ ಸುತ್ತಮುತ್ತಲ ತಾಲೂಕುಗಳಿಂದಲೂ ಬಸ್‌ಗಳ ಮೂಲಕ ನೂರಾರು ಮಕ್ಕಳನ್ನು ಕರೆತಂದು ನಿಮಯ ಮೀರಿ ದಾಖಲಾತಿ ಮಾಡಿಕೊಂಡು ರಾಜಾರೋಷವಾಗಿ ಕಾಲೇಜು ನಡೆಸಲಾಗುತ್ತಿದೆ.

ಪದವಿ ಪಿಯು ಇಲಾಖೆ ಮತ್ತು ಅಧಿಕಾರಿಗಳಿಗೆ ಕಿಂಚಿತ್ತೂ ಬೆಲೆ ನೀಡದೇ ಬಹುತೇಕ ಹಣ ಮಾಡುವ ಏಕೈಕ ನೆಪದಿಂದಲೇ ನಡೆಯುತ್ತಿರುವ 
ಪಿಯು ಕಾಲೇಜುಗಳ ದಂಧೆ ಹಾಗೂ ಬೆಂಗಳೂರು ಮೂಲ ಮತ್ತು ನೆರೆಯ ರಾಜ್ಯಗಳ ಶಿಕ್ಷಣ ಸಂಸ್ಥೆಗಳು ಅಕ್ರಮಗಳನ್ನು ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ತನ್ನ ನೋಟಿಸ್‌ನಲ್ಲಿ ಪ್ರಶ್ನಿಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮೇ 29 ರಂದು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಎಂದೇ ಹೆಸರಾಗಿರುವ ವಿದ್ಯಾಜ್ಯೋತಿ ಪದವಿ ಪೂರ್ವ ಕಾಲೇಜಿಗೆ ನೋಟಿಸ್‌ ನೀಡಿ, ಇದೇ ಕಾಲೇಜಿನಲ್ಲಿ ಅನಧಿಕೃತವಾಗಿ ಎಕ್ಸೆಲ್‌ ಅಕಾಡೆಮಿಕ್ಸ್‌ ಸಂಸ್ಥೆ ನಡೆಯುತ್ತಿರುವ ಕುರಿತು ವಿವರಣೆ ಕೋರಿದ್ದಾರೆ. 

ಅಚ್ಚರಿಯ ವಿಷಯವೆಂದರೆ, ಇದೇ ಕಾಲೇಜು ಹಲವಾರು ವರ್ಷಗಳಿಂದ ಎಕ್ಸೆಲ್‌ ಅಕಾಡೆಮಿಕ್ಸ್‌ ಹೆಸರಿನಲ್ಲಿಯೇ ವ್ಯವಹರಿಸುತ್ತ ಜಾಹೀರಾತು ಫ್ಲೆಕ್ಸ್‌ಗಳನ್ನು ಅಳವಡಿಸಿದ್ದರೂ, ಕರಪತ್ರಗಳನ್ನು ಮುದ್ರಿಸಿದ್ದರೂ, ಇದೇ ಹೆಸರಿನಲ್ಲಿ ಕಾಲೇಜು ಬಸ್‌ಗಳನ್ನು ಓಡಿಸುತ್ತಿದ್ದರೂ ಪದವಿ ಪೂರ್ವ ಕಾಲೇಜು ಇಲಾಖೆ ಇದಾವುದೂ ತಮಗೆ ತಿಳಿದಿಲ್ಲ. ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ನೋಟಿಸ್‌ ಜಾರಿ ಮಾಡಲಾಗುತ್ತಿದೆ ಎಂದು ನೋಟಿಸ್‌ನಲ್ಲಿ ವಿವರಿಸಿರುವುದು ಕಾಲೇಜು ಆಡಳಿತ ಮಂಡಳಿ ಎಷ್ಟರ ಮಟ್ಟಿಗೆ ಪ್ರಭಾವಿಯಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಇದೇ ರೀತಿಯಲ್ಲಿಯೇ ತಮ್ಮದೇ ಕಾಲೇಜಿನ ಹೆಸರಿನಲ್ಲಿ ಮತ್ತೂಂದು ಕಾಲೇಜನ್ನು ನಡೆಸುತ್ತಿರುವ ಕಾರಣಕ್ಕಾಗಿ ಚಿನ್ಮಯ ಪದವಿ ಪೂರ್ವ ಕಾಲೇಜಿಗೂ ಪದವಿ ಪಿಯು ಉಪ ನಿರ್ದೇಶಕರು ನೋಟಿಸ್‌ ಜಾರಿ ಮಾಡಿದ್ದಾರೆ. ಅನುಮತಿ ಪಡೆದ ಕಟ್ಟಡದಲ್ಲಿ ಕಾಲೇಜು ನಡೆಸದೇ ತಮ್ಮಿಷ್ಟದಂತೆ ಕಾಲೇಜನ್ನು ಸ್ಥಳಾಂತರಿಸಿಕೊಂಡಿರುವ ಕುರಿತು ಮತ್ತೂಂದೆರೆಡು ಕಾಲೇಜುಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಈ ನೋಟೀಸ್‌ನ ನಂತರವಾದರೂ ಜಿಲ್ಲೆಯಲ್ಲಿ ಅನಧಿಕೃತ ಸಂಸ್ಥೆಗಳ ನಿಮಯ ಮೀರಿ ನಡೆಯುತ್ತಿರುವ ಕಾಲೇಜುಗಳ ವಸೂಲಾತಿ ದಂಧೆಗೆ ಕಡಿವಾಣ ಬೀಳುತ್ತದೆಯೇ ಕಾದು ನೋಡಬೇಕಿದೆ.

* ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.