ಲೋಪವಾಗದಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿ


Team Udayavani, Jun 19, 2020, 5:58 AM IST

lopa-sslc

ಕೋಲಾರ: ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಾಗಿದ್ದು, ಕೋವಿಡ್‌ ಸಂಕಷ್ಟದಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸಿ ಯಶಸ್ವಿಯಾಗಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಅಧಿಕಾರಿಗಳಿಗೆ  ಸೂಚನೆ ನೀಡಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಯಾರಿ ಸಂಬಂಧ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿ ಕಾರಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಆಯಾ  ಜಿಲ್ಲೆಗಳ ಉಸ್ತುವಾರಿ ಸಚಿವರು ಪೂರ್ವ ಸಿದ್ಧತೆ ಬಗ್ಗೆ ಚರ್ಚಿಸಿ, ಪರೀಕ್ಷೆ ಯಶಸ್ವಿಗೊಳಿಸಲು ಸಚಿವ ಸಂಪುಟದಲ್ಲಿ ತೀರ್ಮಾಸಲಾಗಿದೆ ಎಂದು ಹೇಳಿದರು.

ಆಂಧ್ರ, ಮಹಾರಾಷ್ಟ್ರ, ಪುದುಚೇರಿ ಸೇರಿದಂತೆ ಅನೇಕ ರಾಜ್ಯಗಳು 10ನೇ  ತರಗತಿ ಪರೀಕ್ಷೆ ರದ್ದುಪಡಿಸಿವೆ. ಆದರೆ, ರಾಜ್ಯ ಸರ್ಕಾರ ಪರೀಕ್ಷೆ ನಡೆಸುವ ದಿಟ್ಟ ತೀರ್ಮಾನ ತೆಗೆದುಕೊಂಡಿದೆ. ಸಂಕಷ್ಟದ ನಡುವೆಯೂ ನಡೆಸುತ್ತಿರುವ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿ, ಇಡೀ ದೇಶಕ್ಕೆ ಮಾದರಿಯಾಗಬೇಕು.  ಇದನ್ನು ಇತರೆ ರಾಜ್ಯಗಳು ಅನುಸರಿಸುವಂತಾಗಬೇಕೆಂದು ನುಡಿದರು.

ನೆಲದಲ್ಲಿ ಕೂರಿಸಬೇಡಿ: ಜಿಲ್ಲೆಯ ಎಲ್ಲಾ 70 ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆಗೆ ಮುನ್ನ ಹಾಗೂ ನಂತರ ಸ್ಯಾನಿಟೈಸ್‌ ಮಾಡಿ ಸುರಕ್ಷೆ ಯ ಕೇಂದ್ರವನ್ನಾಗಿ ಮಾಡಬೇಕು. ಮಾಸ್ಕ್, ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಆಗಬೇಕು, ದೈಹಿಕ ಅಂತರ ಪಾಲನೆ ಆಗಬೇಕು, ಮಕ್ಕಳಿಗೆ ಬೆಂಚು, ಡೆಸ್ಕ್ ವ್ಯವಸ್ಥೆ ಮಾಡಿ, ನೆಲದಲ್ಲಿ ಕುಳ್ಳಿರಿಸಿ ಪರೀಕ್ಷೆ ಬರೆಸಬಾರದು. ಶಾಲೆ  ಯಲ್ಲೇ ಬಿಸಿನೀರು, ಆ್ಯಂಬುಲೆನ್ಸ್‌ ಅನ್ನು ಸಿದ್ಧವಾಗಿಡಿ, ಮಕ್ಕಳಿಗೆ ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆ ನೀಡುವವರು ಕೈಗವಸು  ಧರಿಸಿರಬೇಕು ಎಂದು ಸೂಚಿಸಿದರು.

ಸಕಲ ಸಿದ್ಧತೆ: ಡಿಡಿಪಿಐ ಕೆ.ರತ್ನಯ್ಯ ಮಾತನಾಡಿ, ಜಿಲ್ಲೆಯ 70 ಪರೀಕ್ಷೆ ಕೇಂದ್ರದಲ್ಲಿ 20,906 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಮಕ್ಕಳ ಸುರಕ್ಷತೆಗಾಗಿ ಮಾಸ್ಕ್, ಸ್ಯಾನಿ  ಟೈಸರ್‌, ಧರ್ಮಲ್‌ ಸ್ಕ್ರೀನಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ  ಎಂದು ಹೇಳಿದರು.

ಮಾಸ್ಕ್ ನೀಡುವ ಭರವಸೆ: ಸಂಸದ ಎಸ್‌. ಮುನಿಸ್ವಾಮಿ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿ, ಶೌಚಗೃಹ ಸ್ವತ್ಛವಾಗಿಟ್ಟುಕೊಳ್ಳಿ, ಮಕ್ಕಳಿಗೆ 20,000 ಬಟ್ಟೆ  ಮಾಸ್ಕ್ಗಳನ್ನು ವ್ಯವಸ್ಥೆ ಮಾಡುತ್ತೇನೆ. ಏನೇ ಅವಶ್ಯಕತೆ ಇದ್ದರೂ ಗಮ ನಕ್ಕೆ ತಂದಲ್ಲಿ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಕೆಎಸ್‌ಆರ್‌ಟಿಸಿ ಡಿ.ಸಿ. ಚಂದ್ರಶೇಖರ್‌ ಮಾತನಾಡಿ, ಶಿಕ್ಷಣ ಇಲಾಖೆಯೂ ಮಕ್ಕಳ ಪಟ್ಟಿ ಒದಗಿಸಿದಲ್ಲಿ  ಬಸ್‌ ವ್ಯವಸ್ಥೆ ಮಾಡಲಾಗುವು ದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿಪಂ ಸಿಇಒ ಎಚ್‌.ವಿ.ದರ್ಶನ್‌, ಎಸ್ಪಿ ಕಾರ್ತಿಕ್‌ ರೆಡ್ಡಿ, ಎಸಿ ಸೋಮಶೇಖರ್‌, ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಡಲ್‌ ಅಧಿಕಾರಿ ಎ.ಎನ್‌.ನಾಗೇಂದ್ರಪ್ರಸಾದ್‌, ಬಿಇಒಗಳಾದ ಕೆ. ಎಸ್‌.ನಾಗರಾಜಗೌಡ,  ಉಮಾದೇವಿ, ಶಿಕ್ಷ ಣಾಧಿಕಾರಿ ಸಿ.ಆರ್‌.ಅಶೋಕ್‌ ಶಿಕ್ಷಣ ಇಲಾಖೆ ಹೊರತಂದಿರುವ ಕೋವಿಡ್‌ 19 ಜಾಗೃತಿ ಕರಪತ್ರ ಬಿಡುಗಡೆ ಮಾಡಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.