ರಾಕ್‌ವ್ಯಾಲಿ ರೆಸಾರ್ಟ್‌ನಲ್ಲಿ ವೇಶ್ಯಾವಾಟಿಕೆ: ನಾಲ್ವರ ಬಂಧನ


Team Udayavani, Jun 27, 2023, 1:31 PM IST

tdy-15

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಕ್‌ವ್ಯಾಲಿ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ಹೈಟೆಕ್‌ ವೇಶ್ಯಾವಾಟಿಕೆ ಅಡ್ಡೆ ಮೇಲೆ ಭಾನುವಾರ ಮಧ್ಯರಾತ್ರಿ ದಾಳಿ ನಡೆಸಿ ನಾಲ್ವರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಉಳಿದ ಮೂವರ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದರು.

ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಕಾರ್ಯಾಚರಣೆಯಲ್ಲಿ ಆರು ಮಹಿಳೆಯನ್ನು ರಕ್ಷಿಸಲಾಗಿದೆ. ಈ ಮಹಿಳೆಯರನ್ನು ಹೆ„ದರಾಬಾದ್‌ ಮೂಲದ ವಿಜಯ್‌ ಎಂಬಾತ ಆಂಧ್ರದ ವಿಜಯವಾಡ, ವಿಶಾಖಪಟ್ಟಣಂ, ಚಿತ್ತೂರು ಸೇರಿದಂತೆ ಕೆಲವು ಭಾಗಗಳಿಂದ ಕರೆತಂದು ರೆಸ್ಟೋರೆಂಟ್‌ ಮಾಲೀಕರೊಂದಿಗೆ ಸೇರಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ 14 ಜನರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗಿದೆ.

7 ಜನರ ವಿರುದ್ಧ ಪ್ರಕರಣ : ರೆಸ್ಟೋರೆಂಟ್‌ ಮಾಲಿಕ, ಮ್ಯಾನೇಜರ್‌, ಸಪ್ಲೆ„ಯರ್‌, ರಿಸೆಪ್ಷನಿಸ್ಟ್‌ ಹಾಗೂ ಮಹಿಳೆಯರನ್ನು ಕರೆತಂದಿದ್ದ ಏಜೆಂಟ್‌ ಸೇರಿದಂತೆ 7 ಮಂದಿ ವಿರುದ್ಧ ಕೋಲಾರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಏಜೆಂಟ್‌ ವಿಜಯ್‌, ಮಂಜುನಾಥ್‌, ಆಂಜಪ್ಪ, ಸತೀಶ್‌ ಎಂಬುವರನ್ನು ಬಂಧಿಸಿದ್ದು, ರೆಸ್ಟೋರೆಂಟ್‌ ಮಾಲೀಕ ಚಂದ್ರಹಾಸ ಸೇರಿದಂತೆ ಮೂವರು ತಲೆಮರೆಸಿ ಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯ ವಶಕ್ಕೆ ಒಪ್ಪಿಸಲಾಗಿದೆ ಎಂದರು.

ನಗದು , ಮೊಬೈಲ್‌ ವಶ: ದಾಳಿ ವೇಳೆ 5,56,300 ನಗದು, ಸುಮಾರು 2 ಕೋಟಿ ಬೆಲೆ ಬಾಳುವ 10 ಐಷಾರಾಮಿ ಕಾರುಗಳು ಹಾಗೂ 14 ಮೊಬೈಲ್‌ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಮಾನವ ಕಳ್ಳಸಾಗಣೆ ನಿಯಂತ್ರಣ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಲಾರ ಮಹಿಳಾ ಪೊಲೀಸ್‌ ಠಾಣೆಯ ಇನ್ಸಪೇಕ್ಟರ್‌ ಭೈರಾ ನೇತೃತ್ವದಲ್ಲಿ ವಿಶೇಷ ತಂಡ ದಾಳಿ ನಡೆಸಿದೆ. ನಂಗಲಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬೈರಕೂರು ಹೋಬಳಿ ಎಚ್‌.ಬೈಯಪ್ಪನಹಳ್ಳಿ ಗ್ರಾಮ ವ್ಯಾಪ್ತಿಯ ಕರ್ನಾಟಕ-ಆಂಧ್ರ ಗಡಿ ವ್ಯಾಪ್ತಿಯಲ್ಲಿ ಸುಮಾರು ಏಳೆಂಟು ಎಕರೆ ಪ್ರದೇಶದಲ್ಲಿ ಈ ರೆಸಾರ್ಟ್‌ ಇದ್ದು. ಆವರಣದಲ್ಲಿರುವ ರಾಕ್‌ ವ್ಯಾಲಿ ಬಾರ್‌ ಅಂಡ್‌ ರೆಸ್ಟೋರೆಂಟ್‌ ಕಟ್ಟಡದ ಕೊಠಡಿಗಳಲ್ಲಿ ಮಹಿಳೆಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದರು.

ಕಾರ್ಯಾಚರಣೆಯಲ್ಲಿ ಭೈರಾ, ಸಿಬ್ಬಂದಿ ರಮೇಶ್‌, ಮುನಿರಾಜು, ಆಂಜನಪ್ಪ, ಮಂಜುನಾಥ್‌, ನಿಂಗಣ್ಣ, ಶಾಮೂರ್ತಿ,ರೇವಣ ಸಿದ್ದಪ್ಪ, ಮಹಿಳಾ ಸಿಬ್ಬಂದಿ ಶಿಲ್ಪಾ, ನಂದಿನಿ, ಲಾವಣ್ಯಾ, ಚಾಲಕರಾದ ಸುಭಾಷ್‌ ಪಾಲ್ಗೊಂಡಿದ್ದರು. ಇವರಿಗೆ ಕೇಂದ್ರ ವಲಯ ಐಜಿಪಿ ಡಾ.ಬಿ.ಆರ್‌.ರವಿಕಾಂತೇಗೌಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದರು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.