
ನನೆಗುದಿಗೆ ಬಿದ್ದಿರುವ ಶುದ್ಧ ನೀರಿನ ಘಟಕ ಆರಂಭಿಸಿ
ಯಂತ್ರೋಪಕರಣ, ಇತರೆ ಪರಿಕರಗಳ ಅಳವಡಿಸದೇ ನಿರ್ಲಕ್ಷ್ಯ
Team Udayavani, May 26, 2019, 1:40 PM IST

ಬೇತಮಂಗಲದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮಾತ್ರ ನಿರ್ಮಾಣಗೊಂಡಿದ್ದು, ಶುದ್ಧೀಕರಣ ಪರಿಕರ ಅಳವಡಿಸದೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ.
ಬೇತಮಂಗಲ: ಹೋಬಳಿ ವ್ಯಾಪ್ತಿಯ ಎನ್.ಜಿ.ಹುಲ್ಕೂರು ಗ್ರಾಮ ಪಂಚಾಯ್ತಿನ ಪೂಗಾನಗಳ್ಳಿ ಗ್ರಾಮದಲ್ಲಿ ಶುದ್ಧ ನೀರಿನ ಘಟಕ ನಿರ್ಮಾಣವಾಗಿ ತಿಂಗಳುಗಳೇ ಗತಿಸಿದರೂ ಆರಂಭಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ.
ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರನ್ನು ಕಲ್ಪಿಸಲು ಜಿಪಂ ಯೋಜನೆ ಅಡಿಯಲ್ಲಿ ಕೈಗೊಂಡ ಘಟಕಕ್ಕೆ ಇಂದಿಗೂ ಯಂತ್ರೋಪಗಳು, ಇತರೆ ಪರಿಕರಗಳನ್ನು ಅಳವಡಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ಇದರಿಂದ ಈ ಭಾಗದ ಜನತೆಗೆ ಶುದ್ಧ ನೀರು ಲಭ್ಯವಾಗುತ್ತಿಲ್ಲ. ಶುದ್ಧ ನೀರು ಬೇಕೆಂದರೆ ಪಕ್ಕದ ಗ್ರಾಮಗಳಿಗೆ ಹೋಗಿ ಹಣ ನೀರು ನೀರು ಖರೀದಿ ಮಾಡಬೇಕಾದ ಅನಿವಾರ್ಯತೆ ಇದೆ.
ಯಂತ್ರೋಪಕರಣ ಜೋಡಿಸಿಲ್ಲ: ಈಗಾಗಲೇ ಅಂತರ್ಜಲ ಬತ್ತಿಹೋಗಿ ಜನರಿಗೆ ಬೋರ್ವೆಲ್ ನೀರು ಕುಡಿಯಲು ಸಾಧ್ಯವಾಗುತ್ತಿಲ್ಲ. 1200 ಅಡಿ ಆಳದಿಂದ ಹೊರತೆಗೆಯುವ ನೀರು ಫ್ಲೋರೈಡ್ ಹಾಗೂ ಗಡುಸಾಗಿದ್ದು, ಈ ನೀರನ್ನು ಕುಡಿದು ಜನ ಮೂಳೆ ಸವೆತ, ಇತರೆ ರೋಗಗಳಿಂದ ಬಳಲುವಂತಾಗಿದೆ. ಹೀಗಾಗಿ ಬಡ ಜನರ ಆರೋಗ್ಯ ದೃಷ್ಟಿಯಿಂದ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಪ್ರತಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಲು ಮುಂದಾಗಿದೆ.
ಅದರಂತೆ ಪೂಗಾನಗಳ್ಳಿಯಲ್ಲೂ ಘಟಕ ನಿರ್ಮಿಸಿದ್ದು, ಅದಕ್ಕೆ ಅಗತ್ಯ ಯಂತ್ರೋಪಕರಣ, ಸಲಕರಣೆ ಜೋಡಿಸಿಲ್ಲ. ಇದರಿಂದ ಘಟಕ ಪಾಳು ಬಿದ್ದಿದೆ.
ಗಡುಸು ನೀರೇ ಗತಿ: ಯುವಕರು ಮತ್ತು ದ್ವಿಚಕ್ರ ವಾಹನ ಬಳಸುವವರು ಸಮೀಪದ ಗ್ರಾಮವೊಂದಕ್ಕೆ ತೆರಳಿ ಶುದ್ಧ ಕುಡಿಯುವ ನೀರನ್ನು ವಾಹನಗಳ ಮೂಲಕ ಹೊತ್ತು ತರುತ್ತಾರೆ. ಆದರೆ, ವಾಹನ ಇಲ್ಲದವರು, ವೃದ್ಧಾಪ್ಯ ಜೀವನ ಸಾಗಿಸುತ್ತಿರುವ ಹಿರಿಯರಿಗೆ ಬಹುದೂರ ಹೋಗಿ ನೀರು ತರುವುದು ಕಷ್ಟವಾಗಿದೆ. ಆದ್ದರಿಂದ ವಿಧಿಯಿಲ್ಲದೇ ಗಡುಸು ನೀರನ್ನೇ ಕುಡಿಯುವ ಪರಿಸ್ಥಿತಿ ಇದೆ ಎಂದು ಯುವ ಮುಖಂಡ ಸುನಿಲ್ ಕುಮಾರ್ ತಮ್ಮ ಅಳಲು ತೋಡಿಕೊಳ್ಳುತ್ತಾರೆ.
ಪಕ್ಕದ ಊರಿನ ನೀರೇ ಗತಿ: ಇತ್ತೀಚಿನ ದಿನಗಳಲ್ಲಿ ಬೋರ್ವೆಲ್ಗಳಲ್ಲಿ ಕಲುಷಿತ ನೀರು ಬರುತ್ತವೆ ಎಂಬ ಸುದ್ದಿಯಾಗಿದೆ. ಅಂದಿನಿಂದಲೂ ಯಾವುದೇ ಗ್ರಾಮಸ್ಥರು ಕೊಳವೆಬಾವಿಗಳ ನೀರನ್ನು ಕುಡಿಯಲು ಹಿಂಜರಿಯುತ್ತಿದ್ದಾರೆ. ಗ್ರಾಮದಿಂದ ದೂರದೂರಿಗೆ ಹೋಗಿ ಕ್ಯಾನ್ಗೆ 20 ರೂ. ವರೆಗೂ ಹಣ ನೀಡಿ, ನೀರು ಕುಡಿಯುವ ಪರಿಸ್ಥಿತಿ ಇದೆ. ಈ ಬಗ್ಗೆ ಕೂಡಲೇ ಜಿಪಂ ಸಿಇಒ ಮತ್ತು ಜಿಲ್ಲಾಧಿಕಾರಿಗಳು ಗಮನ ಹರಿಸಿ ಕೂಡಲೇ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭಿಸಬೇಕೆಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.