![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 29, 2022, 6:38 PM IST
ಕೋಲಾರ: ಇನ್ಫೋಸಿಸ್ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರು ಶುಕ್ರವಾರ ಕೋಲಾರದ ಶಕ್ತಿ ದೇವತೆ ಕೋಲಾರಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ತಮ್ಮ ಸಂಬಂಧಿಕರ ಮದುವೆ ಹಿನ್ನೆಲೆ ಕೋಲಾರಕ್ಕೆ ಆಗಮಿಸಿದ್ದ ಸುಧಾಮೂರ್ತಿ, ನಗರದ ಕೋಟೆಯಲ್ಲಿರುವ ಪುರಾಣ ಪ್ರಸಿದ್ಧ ಕೋಲಾರಮ್ಮ ದೇವಾಲಯಕ್ಕೂ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ದೇಗುಲದಲ್ಲಿ ಸುಧಾಮೂರ್ತಿ ಅವರನ್ನು ಕಂಡ ಭಕ್ತರು ಅವರ ಕುಶಲೋಪರಿ ವಿಚಾರಿಸಿ, ಕಾಲುಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಸೆಲ್ಪಿ ತೆಗೆಸಿಕೊಳ್ಳಲು ಮುಗಿಬಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಸುಧಾಮೂರ್ತಿ ಮಾತನಾಡಿ, ಕೋಲಾರಕ್ಕೆ ಬಂದಾಗೆಲ್ಲಾ ಕೋಲಾರಮ್ಮ ದೇವಾಲಯಕ್ಕೆ ಬರೋದು ವಾಡಿಕೆ. ಅದರಂತೆ ದೇವಿ ದರ್ಶನ ಪಡೆದೆ. ಮನಸ್ಸಿಗೆ ಬಹಳ ನೆಮ್ಮದಿಯಾಯ್ತು. ದೇವಸ್ಥಾನವನ್ನು ಬಹಳ ಚೆನ್ನಾಗಿ ಅಭಿವೃದ್ಧಿ ಮಾಡಿದ್ದಾರೆ ಎಂದರು. ಅಳಿಯ ರಿಷಿ ಸುನಕ್ ಬ್ರಿಟನ್ ಪ್ರಧಾನಿಯಾಗಿದ್ದರ ಕುರಿತು ಪ್ರತಿಕ್ರಿಯಿಸಿದ ಸುಧಾಮೂರ್ತಿ, ಅವರಿಗೆ ನಮ್ಮ ಆಶೀರ್ವಾದ ಸದಾ ಇದ್ದೇ ಇರುತ್ತದೆ ಎಂದರು.
ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿರುವ ವಿವಾದಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಬೇರೆ ವಿಚಾರ ಮಾತನಾಡುವುದು ಬೇಡ ಎಂದು ನಗುತ್ತಾ ತೆರಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.