![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 23, 2021, 8:35 PM IST
ಕೋಲಾರ: ಮಕ್ಕಳಿಗೆ ಆಸ್ತಿ ಮಾಡದೆ,ಅವರಿಗೆ ಗುಣಮಟ್ಟದ ಶಿಕ್ಷಣ, ಸಂಸ್ಕಾರ, ಬದುಕು ಕಲಿಸಿಕೊಡುವ ಮೂಲಕ ಸಮಾಜಕ್ಕೆ ಅವರನ್ನೇ ಆಸ್ತಿಯನ್ನಾಗಿ ಮಾಡಬೇಕು ಎಂದು ತಾಲೂಕು ದಂಡಾಧಿಕಾರಿ ಶೋಭಿತಾ ಹೇಳಿದರು.
ತಾಲೂಕಿನ ಹೊನ್ನೇನಹಳ್ಳಿ ಗ್ರಾಪಂನಲ್ಲಿ ಮಕ್ಕಳ ಹಕ್ಕುಗಳ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳ ಬಾಲ್ಯವನ್ನು ಅರಳಿಸಬೇಕು, ಚಿವುಟಬಾರದು. ಶಿಕ್ಷಕರು ಸಮಯಪಾಲನೆಗೆ ಗಮನ ನೀಡಬೇಕು. ಸಕಾರಣವಿಲ್ಲದೇ ಶಾಲೆ ಬಿಡಬಾರದು. ಮಕ್ಕಳನ್ನು ಸತøಜೆಗಳಾಗಿ ನಿರ್ಮಾಣ ಮಾಡುವ ಕಾಯಕ ಎಲ್ಲರ ಹೊಣೆಯಾಗಿದೆ ಎಂದರು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವುದರೊಂದಿಗೆ, ಬಾಲ್ಯ ವಿವಾಹ ಪದ್ಧತಿಯನ್ನು ಸಹ ನಿರ್ಮೂಲನೆ ಮಾಡ ಬೇಕು. ಶಾಲೆಗಳಿಗೆ ಮೂಲಭೂತವಾಗಿ ಅಗತ್ಯಗಳನ್ನು ಪೂರೈಸುವ ಭರವಸೆ ನೀಡಿದರು.
ಇದನ್ನೂ ಓದಿ:ರಸ್ತೆಗೆ ಹಾಕಿದ ಹುರುಳಿಕಾಳು ಸಿಪ್ಪೆ ಕಾರಿನ ಚಕ್ರಕ್ಕೆ ಸಿಲುಕಿ ಬೆಂಕಿ: ಹೊತ್ತಿ ಉರಿದ ಕಾರು
ಪಿಆರ್ ಇಡಿ ಇಂಜಿನಿಯರ್ ಪಂಚಾಯ್ತಿ ನೋಡಲ್ ಅಧಿಕಾರಿ ಮಾತನಾಡಿ, ಯಾವ್ಯಾವ ಶಾಲೆಗಳು ಶಿಥಿಲಗೊಂಡಿವೆ ಅವುಗಳನ್ನು ನೆಲಸಮ ಮಾಡಲು ಕೂಡಲೇ ಅನುಮತಿ ನೀಡಲಾಗುವುದು ಎಂದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶೋಭಾ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ತಿಮ್ಮಸಂದ್ರ ನಾಗರಾಜ್, ಸಮೂಹ ಸಂಪನ್ಮೂಲ ವ್ಯಕ್ತಿ ಸುಜಾತ, ಶಿಕ್ಷಕರು ಪಂಚಾಯಿತಿಯ ಎಲ್ಲಾ ಸಿಬ್ಬಂದಿ, ಮಕ್ಕಳು ಉಪಸ್ಥಿತರಿದ್ದರು.
Kolar: ಬಾಲಕಿ ಮೇಲೆ ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ
BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು
Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!
Byrathi Suresh: ಪವರ್ ಪಾಲಿಟಿಕ್ಸ್, ಶೇರಿಂಗ್, ಕೇರಿಂಗ್ ಯಾವುದೂ ಇಲ್ಲ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.