ಸರ್ಕಾರಿ ಕಡತ ವಾಪಸ್‌ ನೀಡದ ತಹಶೀಲ್ದಾರ್‌  


Team Udayavani, Jul 23, 2023, 4:06 PM IST

tdy-18

ಮುಳಬಾಗಿಲು: ಕೋಟ್ಯಾಂತರ ರೂ. ಬೆಲೆ ಬಾಳುವ 36 ಎಕರೆ ಸರ್ಕಾರಿ ಜಮೀನನ್ನು 13 ವರ್ಷಗಳ ಹಿಂದೆ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡ ಅಂದಿನ ತಹಶೀಲ್ದಾರ್‌ ಜಯಮಾದವ್‌ ಹಲವಾರು ವರ್ಷಗಳ ಹಿಂದೆ ಪರಿಶೀಲನೆಗಾಗಿ ದಾಖಲೆ ಕಡತ ತೆಗೆದುಕೊಂಡು ಹೋಗಿದ್ದು, ಇದುವರೆಗೂ ಕಂದಾಯ ಇಲಾಖೆಗೆ ವಾಪಸ್‌ ನೀಡದೇ ಇರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ತಾಲೂಕಿನ ಆವಣಿ ಹೋಬಳಿ ರಾ.ಹೆ.75ರ ಅಂಚಿನಲ್ಲಿರುವ ಜಮ್ಮನಹಳ್ಳಿ ಸ.ನಂ. 103ರಲ್ಲಿನ ಸರ್ಕಾರಿ ಗೋಮಾಳದಲ್ಲಿ 1969-72ರ ಸಾಲಿನಲ್ಲಿ ದೇವರಾಯಸಮುದ್ರ ಜಿ.ಎಸ್‌.ವೆಂಕಟೇಶ್‌ಅಯ್ಯರ್‌, ಸ.ನಂ. 103/4, 103/5, 103/6, 103/7 ರಲ್ಲಿ ತಲಾ 5 ಎಕರೆಯಂತೆ ಒಟ್ಟು 20 ಎಕರೆ ಜಮೀನು ಮತ್ತು ಎಂ.ಆರ್‌.ವೆಂಕಟೇಶ್‌ಅಯ್ಯರ್‌ ಸಹ ಜಮ್ಮನಹಳ್ಳಿ ಸ.ನಂ.103/9, 103/10, 103/11, 103/13 ರಲ್ಲಿ ತಲಾ 4 ಎಕರೆಯಂತೆ ಒಟ್ಟು 16 ಎಕರೆ ಸೇರಿದಂತೆ 36 ಎಕರೆ ಜಮೀನನ್ನು ನಕಲಿ ದಾಖ ಲೆಗಳ ಸೃಷ್ಟಿಸಿಕೊಂಡು ಪಡೆದುಕೊಂಡಿದ್ದು, ಅಲ್ಲದೇ ಕಾನೂನು ಬಾಹಿರವಾಗಿ ಬೆಂಗಳೂರಿನ ಸಯ್ಯದ್‌ಮಸ್ತಾನ್‌ಗೆ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.

2010ರಲ್ಲಿ ಜಮೀನು ಮುಟ್ಟುಗೋಲು: ಈ ಕುರಿತು ದಲಿತ ಮುಖಂಡರಾದ ಕೀಲುಹೊಳಲಿ ಸತೀಶ್‌ ಮತ್ತು ಕಾರ್ಗಿಲ್‌ ವೆಂಕಟೇಶ್‌ ಜಮೀನುಗಳನ್ನು ಸರ್ಕಾರಕ್ಕೆ ಮುಟ್ಟು ಗೋಲು ಹಾಕಿಕೊಳ್ಳಬೇಕೆಂದು 2008ರಲ್ಲಿ ಅಂದಿನ ಡೀಸಿಗೆ ಅರ್ಜಿ ನೀಡಿದ್ದರು. ಡೀಸಿ ಸೂಚನೆ ಯಂತೆ ತಹಶೀಲ್ದಾರ್‌ ಜಯಮಾಧವ್‌ ವಿಚಾರಣೆ ನಡೆಸಿ, 2010ರಲ್ಲಿ ನಕಲಿ ದಾಖಲೆ ರದ್ದುಗೊಳಿಸಿ ಜಮೀನನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿತ್ತು. ಜಮ್ಮನಹಳ್ಳಿ ಸ.ನಂ.103/9, 103/10, 103/11, 103/13 ರಲ್ಲಿ ತಲಾ 4 ಎಕರೆಯಂತೆ ಒಟ್ಟು 16 ಎಕರೆ ಪಹಣಿಗಳಲ್ಲಿ ಮಾತ್ರ ಎಂ.ಆರ್‌.8/2011-12, ದಿ.7/2/12 ರಂತೆ ಸರ್ಕಾರಕ್ಕೆ ಎಂದು ನಮೂದಿಸಿದೆ.

ಆದರೆ ಜಮ್ಮನಹಳ್ಳಿ ಸ.ನಂ. 103/4, 103/5, 103/6, 103/7ರಲ್ಲಿ ತಲಾ 5 ಎಕರೆ ಸೇರಿದಂತೆ 20 ಎಕರೆ ಪಹಣಿ ಗಳಲ್ಲಿ ಮಾತ್ರ ಎಂ.ಆರ್‌.13/2011/12, ದಿ.31/1/12ರಂತೆ ಸರ್ಕಾರಕ್ಕೆ ಎಂದು ನಮೂದಿಸಿದ್ದು, ಅಲ್ಲದೇ ಉತ್ಛ ನ್ಯಾಯಾ ಲಯದ ಡಬ್ಲ್ಯೂಪಿ ನಂಬರ್‌ 13679/2012, ಜುಲೈ 24 2012ರಂದು ತಡೆಯಾಜ್ಞೆ ನೀಡಿದೆ ಎಂದು ನಮೂದಿಸಲಾಗಿದೆ.

16 ಎಕರೆ ಜಮೀನು ವಶಕ್ಕೆ ಪಡೆಯದ ಇಲಾಖೆ: ಜಿ.ಎಸ್‌.ವೆಂಕಟೇಶ್‌ಅಯ್ಯರ್‌ ಹೆಸರಿನಲ್ಲಿದ್ದ 20 ಎಕರೆ ಜಮೀನು ವಿಚಾರವಾಗಿ ಎರಡು ವರ್ಷಗಳ ನಂತರ 2012ರಲ್ಲಿ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, 11 ವರ್ಷ ಕಳೆದರೂ ಯಾವ ತಹಶೀಲ್ದಾರ್‌ರು ತಡೆಯಾಜ್ಞೆ ತೆರವುಗೊಳಿಸಿಲ್ಲ. ಮುಳಬಾಗಿಲು ಜೆಎಂಎಫ್ಸಿ ನ್ಯಾಯಾಲಯದಲ್ಲಿ ಓ.ಎಸ್‌/270/2014 ಪ್ರಕರಣವು ವಿಚಾರಣೆಯಲ್ಲಿದೆ, ಅಲ್ಲದೇ ಯಾವುದೇ ಅಡೆ ತಡೆಯಿಲ್ಲದ ಎಂ.ಆರ್‌.ವೆಂಕಟೇಶ್‌ಅಯ್ಯರ್‌ ಹೆಸರಿನಲ್ಲಿದ್ದ 16 ಎಕರೆ ಜಮೀನನ್ನೂ ಸಹ ವಶಕ್ಕೆ ತೆಗೆದುಕೊಳ್ಳದೇ ಕೈ ಬಿಟ್ಟಿರುತ್ತಾರೆ. ಜಮ್ಮನಹಳ್ಳಿ ಸ.ನಂ.103 ರಲ್ಲಿ 36 ಎಕರೆ ಸರ್ಕಾರಿ ಜಮೀನನ್ನು ತಹಶೀಲ್ದಾರ್‌ ಜಯ ಮಾದವ್‌ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿದ್ದರೂ, ದಾಖಲೆಗಳ ಪರಿಶೀಲ ನೆಗಾಗಿ ಖುದ್ದು ಅವರೇ ಮೂಲ ಕಡತ ತೆಗೆದುಕೊಂಡು ಹೋಗಿದ್ದು, ಇದುವರೆಗೂ ಸ್ಥಳೀಯ ಕಂದಾಯ ಇಲಾಖೆಗೆ ವಾಪಸ್‌ ನೀಡಿಲ್ಲ. ಮೂಲ ಕಡತವಿಲ್ಲದೇ ಸ್ಥಳೀಯ ನ್ಯಾಯಾಲಯದಲ್ಲಿ ನಡೆಯು ತ್ತಿರುವ ವಿಚಾರಣೆ ಸಿಬ್ಬಂದಿ ಬರಿಗೈಲಿ ಹಾಜರಾಗುತ್ತಿದ್ದಾರೆ. ಅಲ್ಲದೇ, ಕಡತ ಅಲಭ್ಯತೆಯಿಂದ ನ್ಯಾಯಾ ಲಯದಲ್ಲಿ ತಡೆ ಯಾಜ್ಞೆ ತೆರವುಗೊಳಿಸಿ, ಜಮೀನು ಸರ್ಕಾರದ ವಶಕ್ಕೆ ಪಡೆಯಲು ಸಾಧ್ಯವಾಗಿಲ್ಲ.

-ಎಂ.ನಾಗರಾಜಯ್ಯ.

ಟಾಪ್ ನ್ಯೂಸ್

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.