ಜಿಲ್ಲಾಧಿಕಾರಿ ಹೇಳಿದ್ರ್ರೂ ಕೆರೆ ಸ್ವಚ್ಛ ಮಾಡಿಲ್ಲ


Team Udayavani, May 10, 2019, 4:12 PM IST

kol-4

ಮುಳಬಾಗಿಲು: ತಾಲೂಕಿನ ಎಲ್ಲಾ ಕೆರೆಗಳಲ್ಲಿನ ಗಿಡಗಂಟಿಗಳನ್ನು ಮಾ.30ರೊಳಗೆ ಕಟಾವು ಮಾಡಿಸಿ, ಸ್ವಚ್ಛಗೊಳಿಸಬೇಕು ಎಂದು ಜ.10ರಂದು ಡೀಸಿ ಜೆ.ಮಂಜುನಾಥ್‌ ಸಾಮಾಜಿಕ ಅರಣ್ಯ ಮತ್ತು ಗ್ರಾಪಂ ಅಧಿಕಾರಿಗಳಿಗೆ ಆದೇಶ ನೀಡಿದ್ದರೂ ಯಾವುದೇ ಕ್ರಮತೆಗೆದುಕೊಂಡಿಲ್ಲ.

ನಗರದ ಮಿನಿವಿಧಾನಸೌಧದಲ್ಲಿ ಜ.10ರಂದು ಜಿಲ್ಲಾಡಳಿತ, ತಾಲೂಕು ಆಡಳಿತ, ಅರಣ್ಯ ಪೊಲೀಸ್‌, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಸಭೆಯನ್ನು ಸಂಸದ ಕೆ.ಎಚ್.ಮುನಿಯಪ್ಪ ಮತ್ತು ಶಾಸಕ ಎಚ್.ನಾಗೇಶ್‌ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಸಾರ್ವಜನಿಕರ ಸಭೆ ನಡೆಸಿ ವಿವಿಧ ವಿಚಾರಗಳ ಕುರಿತು ಚರ್ಚಿಸಲಾಗಿತ್ತು. ಅಲ್ಲದೇ, ಶೀಘ್ರ ಕೆ.ಸಿ.ವ್ಯಾಲಿ ಮತ್ತು ಮುಂದಿನ ವರ್ಷದಲ್ಲಿ ಎತ್ತಿನಹೊಳೆ ನೀರು ತಾಲೂಕಿನ ಕೆರೆಗಳಿಗೆ ಬರುವುದರಿಂದ ನೀರು ಸಂರಕ್ಷಿಸಲು ಈಗಾಗಲೇ ಹಲವು ವರ್ಷಗಳಿಂದ ಎಲ್ಲಾ ಕೆರೆಗಳಲ್ಲಿ ಬೆಳೆದಿರುವ ಜಾಲಿ, ಇತರೆ ಮರ ಗಿಡಗಳನ್ನು ಗ್ರಾಪಂ ಮೂಲಕ ಮಾ.30ರೊಳಗೆ ಕಟಾವು ಮಾಡಿಸಿ ಕೆರೆ ಸ್ವಚ್ಛಗೊಳಿಸಲು ಸಾಮಾಜಿಕ ಅರಣ್ಯ ಇಲಾಖೆ ವಲಯಾರಣ್ಯಾಧಿಕಾರಿ ಹರೀಶ್‌ಗೆ ಕಟ್ಟಪ್ಪಣೆ ಮಾಡಿದ್ದರು. ಆದರೆ, ಜಿಲ್ಲಾಧಿಕಾರಿಗಳು ನಿಗದಿತ ದಿನಾಂಕ ಮುಗಿದು ತಿಂಗಳು ಕಳೆದಿದ್ದರೂ ಕೆರೆ ಸ್ವಚ್ಛ ಮಾಡಿಲ್ಲ.

ನೀರು ಹರಿಸುವ ಕೆರೆಗಳು: ಇತ್ತೀಚಿನ ದಿನಗಳಲ್ಲಿ ಕೆ.ಸಿ.ವ್ಯಾಲಿ ನೀರು ಕೋಲಾರ ಕೆರೆಗಳಿಗೆ ಹರಿಸಿರುವುದರಿಂದ ಅವುಗಳು ತುಂಬಿ ಕ್ರಮೇಣ ಪಾಲಾರ್‌ ನದಿಯ ಮೂಲಕ ಹೊಳಲಿ ಕೆರೆಗೆ ಹರಿದು, ಅಲ್ಲಿಂದ ಕ್ಲಸ್ಟರ್‌ 1ರ ಮೂಲಕ ಜಮ್ಮನಹಳ್ಳಿ ಕೆರೆ, ವರದಗಾನಹಳ್ಳಿ ಬಿದಿರು ಕೆರೆ, ವಿಜಲಾಪುರ ದೊಡ್ಡ ಕೆರೆ, ಗಂಜಿಗುಂಟೆ ದೊಡ್ಡ ಕೆರೆ, ಆವಣಿ ದೊಡ್ಡ ಕೆರೆ, ಊ.ಮಿಟ್ಟೂರು ದೊಡ್ಡ ಕೆರೆ, ಮರಕಲಘಟ್ಟ ದೊಡ್ಡ ಕೆರೆ, ಕ್ಲಸ್ಟರ್‌ 1ಎ ರಲ್ಲಿ ಕದರೀಪುರ ಎರಕುಲಗುಂಟ ಕೆರೆ ಮತ್ತು ವಿರೂಪಾಕ್ಷ ಗುಟ್ಟಹಳ್ಳಿ ಕೆರೆಗೆ ನೀರು ಹರಿಯಲಿದೆ.

31 ಕೆರೆ: ಅದೇ ರೀತಿ ಕ್ಲಸ್ಟರ್‌ 2ರ ಮೂಲಕ ಕೆಂಗುಂಟೆ ಕೆರೆ, ಸೋಮೇಶ್ವರಪಾಳ್ಯ ಕೆರೆ, ಇಂಡ್ಲು ಕೆರೆ, ಸೊನ್ನವಾಡಿ ದೊಡ್ಡಕೆರೆ, ಕವತನಹಳ್ಳಿ ದೊಡ್ಡ ಕೆರೆ, ಗುಮ್ಲಾಪುರ ಪಟೇಲ್ ಕೆರೆ, ಮೇಲಾಗಾಣಿ ದೊಡ್ಡ ಕೆರೆ, ಕನ್ನಸಂದ್ರ ದೊಡ್ಡ ಕೆರೆ, ತಾಯಲೂರು ಅಮಾನಿಕೆರೆ, ಮದ್ದೇರಿ ದೊಡ್ಡ ಕೆರೆ, ಕ್ಲಸ್ಟರ್‌ 3ರ ಮೂಲಕ ಕದರೀಪುರ ಗೋಪಣ್ಣ ಕೆರೆ, ಲಿಂಗಾಪುರ ದೊಡ್ಡ ಕೆರೆ, ದೊಡ್ಡಯ್ಯನ ಕೆರೆ, ಉಪ್ಪು ಕೆರೆ, ಸಿದ್ದಘಟ್ಟ ಹೊಸಕೆರೆ, ಮೇಡಿಗಪಲ್ಲಿ ಕೆರೆ, ಸಿದ್ದಘಟ್ಟ ವಡ್ಡು ಕೆರೆ, ಮಾರಂಡಹಳ್ಳಿ ಕೆರೆ, ಕಪ್ಪಲಮಡಗು ವಡ್ಡು ಕೆರೆ, ಮರಹೇರು ದೊಡ್ಡ ಕೆರೆ, ನಂಗಲಿ ದೊಡ್ಡ ಕೆರೆ, ಬ್ಯಾಟನೂರು ಮಲ್ಲಪ್ಪನಕೆರೆ ಸೇರಿ 31 ಕೆರೆಗಳಿಗೆ ನೀರು ಹರಿಯಲಿದೆ.

ಕೊಳಚೆ ನೀರು: ಈ ಕೆರೆಗಳು ಒಳಗೊಂಡಂತೆ ಮಂಚಿಗಾನಹಳ್ಳಿ, ಹೆಬ್ಬಣಿ, ಚಿನ್ನಹಳ್ಳಿ ದೊಡ್ಡ ಕೆರೆಯಲ್ಲಿ ಜಾಲಿ ಮತ್ತಿತರ ಗಿಡ ಮರಗಳು ಬೆಳೆದಿವೆ. ಅದರ ನಡುವೆ ನಗರದ ಶಾಮೀರ್‌ವೊಹಲ್ಲಾ, ಸೋಮೇಶ್ವರಪಾಳ್ಯ, ಹೊಸಪಾಳ್ಯ, ಗುಣಿಗುಂಟೆ ಪಾಳ್ಯ, ಬಜಾರುರಸ್ತೆ, ಕುರುಬರಪೇಟೆ, ಅಂಬೇಡ್ಕರ್‌ ನಗರ, ನೇತಾಜಿ ನಗರ, ಹೈದರಿ ನಗರ ಒಳಗೊಂಡಂತೆ ಬಹುತೇಕ ಪ್ರದೇಶದ ಮಲ ಮೂತ್ರಗಳ ಕೊಳಚೆ ನೀರು ಹರಿದು ಪ್ರತಿ ನಿತ್ಯ ಸೋಮೇಶ್ವರಪಾಳ್ಯ ಮತ್ತು ಇಂಡ್ಲುಕೆರೆಗೆ ಸೇರುತ್ತಿದೆ. ಇದೇ ರೀತಿ ಮುಂದುವರಿದರೆ ಕೆ.ಸಿ. ವ್ಯಾಲಿ ಯೋಜನೆಯ ನೀರು ಹರಿದಾಗ ಎಲ್ಲಾ ಕೆರೆಗಳಿಗೂ ಮುಳಬಾಗಿಲು ನಗರದ ಕೊಳಚೆ ನೀರು ಸೇರಿ ಇದೇ ಕೊಳಚೆ ನೀರನ್ನೇ ಗ್ರಾಮಾಂತರ ಜನರು ಉಪಯೋಗಿಸಬೇಕಾದ ಸನ್ನಿವೇಶ ಎದುರಾಗುತ್ತದೆ.

ಒಟ್ಟಿನಲ್ಲಿ ಮಾ.30ರ ಒಳಗಾಗಿ ತಾಲೂಕಿನ ಎಲ್ಲಾ ಕೆರೆಗಳಲ್ಲಿ ಬೆಳೆದಿರುವ ಗಿಡ ಮರಗಳನ್ನು ಗ್ರಾಪಂಗಳ ಸಹಕಾರ ಪಡೆದು ಕಟಾವು ಮಾಡಿಸಿ ಸ್ವಚ್ಛಗೊಳಿಸಬೇಕೆಂಬ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಆದೇಶಕ್ಕೆ ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ನಿಗದಿತ ದಿನಗಳ ಒಳಗಾಗಿ ಕಾರ್ಯ ಪೂರ್ಣಗೊಳಿಸದೇ ಇರುವುದು ಸಾರ್ವಜನಿಕರಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ತಾಲೂಕಿನ ಕೆರೆಗಳಿಗೆ ಕೆ.ಸಿ. ವ್ಯಾಲಿ ನೀರು ಹರಿಸುವ ಮೊದಲು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಸೋಮೇಶ್ವರಪಾಳ್ಯ ಕರೆ ಮತ್ತು ಇಂಡ್ಲು ಕೆರೆಗೆ ಹರಿಯುತ್ತಿರುವ ಕೊಳಚೆ ನೀರನ್ನು ತಡೆಯಬೇಕು. ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಕೆರೆಗಳಲ್ಲಿ ಬೆಳೆದಿರುವ ಜಾಲಿ ಮತ್ತು ಇತರೆ ಗಿಡ ಮರಗಳನ್ನು ತೆರವು ಮಾಡಬೇಕು. ಇಲ್ಲದಿದ್ದಲ್ಲಿ ಗ್ರಾಮೀಣ ಜನರು ಕೊಳಚೆ ನೀರನ್ನು ಬಳಸಿಕೊಳ್ಳಬೇಕಾದ ಸನ್ನಿವೇಶ ಎದುರಾಗುವುದರಿಂದ ಕೂಡಲೇ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ರೈತ ಸಂಘದಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು.
●ನಾರಾಯಣಗೌಡ, ರಾಜ್ಯ ಉಪಾಧ್ಯಕ್ಷ, ರೈತ ಸಂಘ

ತಾಲೂಕಿನ 150 ಕೆರೆಗಳಲ್ಲಿ ಮಾತ್ರ ಬೆಳೆದಿರುವ ಜಾಲಿ ಮತ್ತಿತರ ಗಿಡ ಮರ ತೆರವು ಮಾಡುವ ಕುರಿತು ಎರಡು ತಿಂಗಳ ಹಿಂದೆಯೇ ಸಾಮಾಜಿಕ ಅರಣ್ಯ ಇಲಾಖೆ ಡಿಎಫ್ಒಗೆ ವರದಿ ನೀಡಲಾಗಿದೆ. ಅವರಿಂದ ಸೂಚನೆ ಬಂದ ನಂತರ ಕ್ರಮ ಕೈಗೊಳ್ಳಲಾಗುವುದೆಂದು ಉತ್ತರ ನೀಡಿದರು.
●ಹರೀಶ್‌, ವಲಯಾರಣ್ಯಾಧಿಕಾರಿ, ಸಾಮಾಜಿಕ ಅರಣ್ಯ ಇಲಾಖೆ

ಎಂ.ನಾಗರಾಜಯ್ಯ

ಟಾಪ್ ನ್ಯೂಸ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.