![ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ](https://www.udayavani.com/wp-content/uploads/2025/02/Congress1-415x254.jpg)
![ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ](https://www.udayavani.com/wp-content/uploads/2025/02/Congress1-415x254.jpg)
Team Udayavani, Oct 23, 2024, 12:44 AM IST
ಕೋಲಾರ: ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ 5 ತಿಂಗಳ ಹೆಣ್ಣು ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದ ಪೋಷಕರು, ಹೆಚ್ಚಿನ ಹಣ ಖರ್ಚಾಗುತ್ತದೆ ಎಂದು ಹೆದರಿ ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಹೋಗಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆಂಧ್ರಪ್ರದೇಶ ಮೂಲದ ನೆಲ್ಲೂರಿನ ನಾಗರಾಜು-ರಂಗಮ್ಮ ದಂಪತಿ, ಪಟ್ಟಣದಲ್ಲಿ ಚಿಟ್ಟಬಾಬು ಅವರ ಬಳಿ ಸಿಮೆಂಟ್ ರಿಂಗ್ ತಯಾರಿಸುವ ಕೆಲಸ ಮಾಡುತ್ತಿದ್ದರು. ಮಗು ರಾಗಗೆ ಶ್ವಾಸಕೋಶದ ತೊಂದರೆ ಹಿನ್ನೆಲೆಯಲ್ಲಿ ಜೂ. 29ರಂದು ಕೋಲಾರದ ಆರ್.ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ತೋರಿಸಿದರೂ ಚೇತರಿಕೆ ಕಂಡಿರಲಿಲ್ಲ.
ವೈದ್ಯರ ಸಲಹೆ ಮೇರೆಗೆ ಮಗುವನ್ನು ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಗೆ ಜೂ. 30ರಂದು ದಾಖಲಿಸಿದ್ದು, ಹೆಣ್ಣು ಮಗು ಎಂಬ ಅಸಹನೆ ಹಾಗೂ ಹೆಚ್ಚಿನ ಹಣ ಖರ್ಚಾಗುತ್ತದೆ ಎಂದು ಹೆದರಿ ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ತಿಳಿಸಿದ್ದಾರೆ.
ಇಂದಿರಾಗಾಂಧಿ ಆಸ್ಪತ್ರೆ ಸಿಬ್ಬಂದಿ ಮಗುವಿನ ದಾಖಲೆ ಪರಿಶೀಲಿಸಿ, ಕೋಲಾರ ಜಿಲ್ಲೆಯ ಕೆಜಿಎಫ್ನಲ್ಲಿಯ ವಿಶೇಷ ದತ್ತು ಸಂಸ್ಥೆಯನ್ನು ಸಂಪರ್ಕಿಸಿ ಮಗುವಿನ ಪೋಷಣೆಗಾಗಿ ಅಲ್ಲಿ ಬಿಟ್ಟಿದ್ದಾರೆ.
Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
Bollywood: ರೀ-ರಿಲೀಸ್ ಗಳಿಕೆಯಲ್ಲಿ ʼತುಂಬಾಡ್ʼ ಮೀರಿಸಿದ ʼಸನಮ್ ತೇರಿ ಕಸಮ್ʼ
11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ
You seem to have an Ad Blocker on.
To continue reading, please turn it off or whitelist Udayavani.