ಲಾಕ್‌ಡೌನ್‌ ಹಿನ್ನೆಲೆ: ಅಗತ್ಯ ವಸ್ತು ಖರೀದಿಸಿದ ಜನ


Team Udayavani, May 10, 2021, 6:36 PM IST

The people who bought the necessary material

ಕೋಲಾರ: ಜನತಾ ಕರ್ಫ್ಯೂ ಮುಂದುವರಿಯುತ್ತಿದ್ದಂತೆ ಸರ್ಕಾರ ಸೋಮವಾರದಿಂದ ಸಂಪೂರ್ಣಲಾಕ್‌ಡೌನ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜನತೆಭಾನುವಾರ ಅಗತ್ಯವಸ್ತುಗಳ ಖರೀದಿಗೆ ಮುಗಿಬಿದ್ದರು.

ಸೋಮವಾರದಿಂದ 14 ದಿನ ಲಾಕ್‌ಡೌನ್‌ ಇರು ತ್ತದೆ ಎಂಬ ಕಾರಣಕ್ಕೆ ಸಾರ್ವಜನಿಕರುಭಾನು ವಾರವೇ ಮನೆಗೆ ಅಗತ್ಯವಾದ ದಿನಸಿ,ತರಕಾರಿ ಮತ್ತಿ ತರ ವಸ್ತುಗಳನ್ನು ಖರೀದಿಸಲುನಗರದ ಅಂಗಡಿಗಳ ಮುಂದೆ ಜಮಾಯಿಸಿದರು.

ಮಾಲ್‌ಗ‌ಳಲ್ಲಿ ಜನಜಂಗುಳಿ: ನಗರದ ಪ್ರಮುಖದಿನಸಿ ಮಾಲ್‌, ಸೂಪರ್‌ ಮಾರ್ಕೆಟ್‌ಗಳ ಮುಂದೆಜನರ ಉದ್ದುದ್ದ ಸಾಲು ಕಂಡು ಬಂದವು. ಸಾಮಾಜಿಕ ಅಂತರ ಕಾಪಾಡಬೇಕಾದ ಅನಿವಾರ್ಯತೆಹಿನ್ನೆಲೆಯಲ್ಲಿ ಮಾಲ್‌ಗ‌ಳಿಗೆ ಕೆಲವೇ ಮಂದಿಯನ್ನುಒಳಗೆ ಕಳುಹಿಸಿ ಅವರು ಖರೀದಿಸಿ ಹೊರ ಬಂದನಂತರ ಇನ್ನಷ್ಟು ಮಂದಿಯನ್ನು ಒಳಕಳುಹಿಸುವಪ್ರಕ್ರಿಯೆ ನಡೆದಿತ್ತು.

ಟ್ರಾಫಿಕ್‌ ಜಾಂ: ತರಕಾರಿ ಮಾರುಕಟ್ಟೆಯನ್ನು ನಗರದ ಜೂನಿಯರ್‌ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದ್ದು, ಅಲ್ಲಿಯೂ ಜನಜಂಗುಳಿ ಕಂಡುಬಂತು. ಜನ ಒಂದೇ ಬಾರಿಗೆ ದಿನಸಿ, ಅಗತ್ಯ ವಸ್ತುಗಳ ಖರೀದಿಗೆ ರಸ್ತೆಗಿಳಿದಿದ್ದರಿಂದಾಗಿ ನಗರದದೊಡ್ಡ ಪೇಟೆ, ಎಂ.ಜಿ.ರಸ್ತೆ, ಕಾಳಮ್ಮ ಗುಡಿ ರಸ್ತೆಗಳಲ್ಲಿಟ್ರಾಫಿಕ್‌ ಜಾಮ್‌ ಪರಿಸ್ಥಿತಿ ನಿರ್ಮಾಣವಾಯಿತು.

ಭಾನುವಾರದ ಬಾಡೂಟಕ್ಕೆ ಸಾಲು: ಸೋಮವಾರದಿಂದ ಲಾಕ್‌ಡೌನ್‌ ಘೋಷಣೆ ಹಿನ್ನೆಲೆ ಅದರಹಿಂದಿನ ದಿನವಾದ ಭಾನುವಾರ ಮಾಂಸ ಖರೀದಿಗೆಜನ ಮುಗಿಬಿದ್ದಿದ್ದು ಕಂಡು ಬಂತು. ನಗರದ ಎಲ್ಲಾ ಮಾಂಸದ ಅಂಗಡಿಗಳ ಮುಂದೆ ಉದ್ದೂದ್ದ ಸಾಲುಗಳು ಕಂಡು ಬಂದಿದ್ದು, ಸಾಮಾಜಿಕ ಅಂತರಕಾಪಾಡಿ ಖರೀದಿಸುತ್ತಿದ್ದುದು ವಿಶೇಷವಾಗಿತ್ತು.ನಗರದ ಮಾಂಸ ಮಾರುಕಟ್ಟೆಯಲ್ಲಿ ಹೆಚ್ಚಿನ ಜನಸಂದಣಿ ಕಂಡು ಬಂದಿದ್ದರಿಂದ ನಗರಸಭೆ ಅಧಿಕಾರಿಗಳು, ಪೊಲೀಸರು ಅಲ್ಲಿಗೆ ತೆರಳಿ ಜನತೆಗೆ ಬುದ್ದಿವಾದ ಹೇಳಿ ಕಳುಹಿಸುತ್ತಿದ್ದುದು ಕಂಡು ಬಂತು.

ನಗರಾದ್ಯಂತ ಬಂದೋಬಸ್ತ್:ಸೋಮವಾರದ ಲಾಕ್‌ಡೌನ್‌ಗೆಸಿದ್ಧತೆ ಎಂಬಂತೆ ಭಾನುವಾರವೇಪೊಲೀ ಸರು ರಸ್ತೆಗಿಳಿದಿದ್ದರು. ನಗರದ ಪ್ರಮುಖ ರಸ್ತೆ ಗಳಲ್ಲಿ ಲಾಠಿಹಿಡಿದ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವಾಹನ ಗಳನ್ನು ನಿಲ್ಲಿಸಿ ವಾಪಸ್‌ ಕಳುಹಿಸಿದರು. ಈನಡುವೆ ಹೊರ ಜಿಲ್ಲೆಗಳಿಂದ ಬರು ತ್ತಿದ್ದ ವಾಹನಗಳ ತಪಾಸಣೆ ಮುಂದು ವರಿಸಲಾಗಿದ್ದು, ಸೋಮವಾರಮತ್ತಷ್ಟು ಬಿಗಿ ಬಂದೋಬಸ್ತ್ ಮಾಡುವ ಸಾಧ್ಯತೆಕಂಡು ಬಂತು.

ಮದುವೆ ಫಿಕ್ಸ್‌, ಬಟ್ಟೆ ಸಿಗುತ್ತಿಲ್ಲ: ಈ ನಡುವೆಈಗಾ ಗಲೇ ಮದುವೆ ಫಿಕ್ಸ್‌ ಆಗಿದ್ದು, ವರ, ಮಧುಮಗಳಿಗೆ, ಪೋಷಕರಿಗೆ ಬಟ್ಟೆ ಖರೀದಿಗೆ ಅವಕಾಶಸಿಗದೇ ಅನೇಕರು ಪರಿತಪಿಸುತ್ತಿದ್ದುದು ಕಂಡುಬಂತು. ಕೆಲವು ಪರಿಚಯಸ್ಥ ಬಟ್ಟೆ ಅಂಗಡಿಗಳವರುಗ್ರಾಹಕರನ್ನು ಒಳ ಕರೆದುಕೊಂಡು ಅಂಗಡಿ ಮುಚ್ಚಿವಹಿವಾಟು ನಡೆಸುತ್ತಿದ್ದುದು ಸಹಾ ಕಂಡು ಬಂತು.ಇದೇ ಪರಿಸ್ಥಿತಿ ಚಿನ್ನದ ಅಂಗಡಿಗಳದ್ದು ಆಗಿದ್ದು,ಮದುವೆಗೆ ಅಗತ್ಯವಾದ ಆಭರಣ ಖರೀದಿಗೂ ಕರ್ಫ್ಯೂ, ಲಾಕ್‌ಡೌನ್‌ ಅಡ್ಡಿಯಾಗಿತ್ತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.