Drinking water: ಜಾತ್ರೆಗೆ ಬಂದ ರಾಸುಗಳಿಗೆ ಕುಡಿಯಲು ನೀರಿಲ!


Team Udayavani, Mar 9, 2024, 5:00 PM IST

11

ಮುಳಬಾಗಿಲು: ಪ್ರತಿವರ್ಷ ನಡೆಯುವ ಆವಣಿ ಜಾತ್ರೆಗೆ ಹೆಚ್ಚಿನ ಜಾನುವಾರುಗಳು ಹರಿದು ಬರುತ್ತಿ ದ್ದರೂ, ಅವುಗಳಿಗೆ ಕುಡಿಯುವ ನೀರನ್ನು ಒದಗಿಸಲು ಗ್ರಾಪಂ ಅಧಿಕಾರಿಗಳು ಮೀನಮೇಷ ಎಣಿಸುತ್ತಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಪುರಾಣ ಪ್ರಸಿದ್ಧ ಆವಣಿ ಶ್ರೀರಾಮಲಿಂಗೇಶ್ವರ ಕ್ಷೇತ್ರವು ಅತ್ಯಂತ ಪುರಾಣ ಪ್ರಸಿದ್ಧ ಸ್ಥಳವಾಗಿದ್ದು, ಗ್ರಾಮದಲ್ಲಿ ಶ್ರೀರಾಮಲಿಂಗೇಶ್ವರ ಸ್ವಾಮಿ ದೇವಾಲಯ, ಬೆಟ್ಟದ ಮೇಲೆ ಸೀತಾಮಾತೆ ದೇಗುಲ, ಬೆಟ್ಟದ ತಪ್ಪಲಿನಲ್ಲಿ ದ್ವಾದಶ ಲಿಂಗಗಳ ದೇಗುಲ, ಅಂತರಗಂಗೆ ಸೇರಿದಂತೆ ರಾಮಾಯಣಕ್ಕೆ ಪೂರಕವಾದ ಕುರುಹುಗಳನ್ನು ಕ್ಷೇತ್ರದಲ್ಲಿ ಕಾಣಬಹುದಾಗಿದೆ.

ಶುಲ್ಕ ಮುಕ್ತ ಜಾತ್ರೆ: ಕಂದಾಯ ಇಲಾಖೆಯಿಂದ ಜಾತ್ರೆಯಲ್ಲಿ ಎತ್ತು, ಗಾಡಿಗಳ ಶುಲ್ಕವನ್ನು ಆವಣಿ ಬಾಬು ಮತ್ತು ಅಂಗಡಿಗಳ ಶುಲ್ಕವನ್ನು ಕೆಜಿಎಂ ಬಳಗದ ಮುಖಂಡ ಡಾ.ನವೀನ್‌ ತಾವೇ ಭರಿಸುವ ಮೂಲಕ ಜಾತ್ರೆ ಯಲ್ಲಿರುವ ಶುಲ್ಕ ವಸೂಲಾತಿ ಮಾಡದಂತೆ ನಿರ್ಧರಿಸಿರುವುದರಿಂದ ಶುಲ್ಕ ಮುಕ್ತ ಜಾತ್ರೆಯಾಗಿ ಪರಿಣಮಿಸಿದೆ.

ಇಲ್ಲಿ 8-10 ಕಾಲ ಬಾರಿ ದನಗಳ ಜಾತ್ರೆಯು ಸೇರಲಿದ್ದು, ಜಾತ್ರೆಯಲ್ಲಿ ಹಾವೇರಿ, ಆಂಧ್ರ, ಮಂತ್ರಾಲಯ, ಕರ್ನೂಲ್‌, ಒಂಗೋಲ್‌, ಬೇರಿಕೆ, ತಮಿಳುನಾಡು ರಾಜ್ಯಗಳಿಂದ ರಾಸುಗಳನ್ನು ಮಾರಲು ರೈತರು ಗುರುವಾರ ಮತ್ತು ಶುಕ್ರವಾರವೇ ಎತ್ತುಗಳನ್ನು ಮಾರಲು ಎತ್ತಿ ನ ಗಾಡಿಗಳಲ್ಲಿ ಹುಲ್ಲನ್ನು ತುಂಬಿಕೊಂಡು ಬಂದು ಈಗಾಗಲೇ ಬಿಡಾರ ಹೂಡಿದ್ದಾರೆ. ಆದರೆ, ಇದುವರೆಗೂ ಮಾರಾಟಗಾರರು ಬರದೇ ಇರುವುದರಿಂದ ಹೆಚ್ಚಾಗಿ ವ್ಯಾಪಾರ ವಹಿವಾಟುಗಳು ಪ್ರಾರಂಭಗೊಂಡಿಲ್ಲ.

ಜಾನುವಾರಗಳ ಜಮಾವಣೆ: ಜಾನುವಾರುಗಳ ಜಾತ್ರೆ ಯಲ್ಲಿ ಕಾಲುಬಾಯಿ ಜ್ವರ ಕಡಿವಾಣಕ್ಕಾಗಿ ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕಿ ಅನುರಾಧ ಮಾರ್ಗದರ್ಶನದಂತೆ ವೈದ್ಯರು ಹಲವಾರು ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ, ಕೋಲಾರ ತಾಲೂಕು ಒಡಗೂರು, ಬೂದಿ ಕೋಟೆ, ಮಾಲೂರಿನ ಸೊಣ್ಣಹಳ್ಳಿ, ಹೊಸಕೋಟೆ ತಾಲೂಕು ತಾವರೆಕೆರೆ, ಹೆಬ್ಬಣಿ, ಸೇರಿದಂತೆ ರಾಜ್ಯ ಮತ್ತು ಅಕ್ಕ ಪಕ್ಕದ ರಾಜ್ಯಗಳಿಂದ ರೈತರು ಮೇವಿ ನೊಂದಿಗೆ ಸಾವಿರಾರು ಜೊತೆಗಳ ಎತ್ತುಗಳು ಜಾತ್ರೆಗೆ ಆಗಮಿಸಿದ್ದು, ಬಿಸಿಲಿನ ಬೇಗೆಯಿಂದ ಪಾರಾಗಲು ಪೆಂಡಾಲ್‌ ಮತ್ತು ಚೆಪ್ಪರ ಹಾಕಿಕೊಂಡಿದ್ದಾರೆ.

ಕುಡಿಯಲು ನೀರಿಲ್ಲ: ಗುರುವಾರ ಮುಂಜಾನೆಯೇ 16 ಜತೆ ಎತ್ತುಗಳೊಂದಿಗೆ ಆವಣಿ ಜಾತ್ರೆಗೆ ಬಂದಿದ್ದು, ಇಲ್ಲಿ ಎತ್ತುಗಳು ಕುಡಿಯಲು ನೀರಿನ ವ್ಯವಸ್ಥೆಯಿಲ್ಲ. ತಾಲೂಕು ಆಡಳಿತ ಶೀಘ್ರವಾಗಿ ಜಾನುವಾರುಗಳಿಗೆ ಮತ್ತು ಜನರಿಗೆ ಕುಡಿಯಲು ನೀರಿನ ವ್ಯವಸ್ಥೆ ಕಲ್ಪಿಸ ಬೇಕೆಂದು ತಮಿಳುನಾಡಿನ ಬೇರಿಕೆ ಮುನಿರೆಡ್ಡಿ ಮತ್ತು ತೊರಲಕ್ಕಿ ಅಶ್ವತ್ಥಪ್ಪ ಮನವಿ ಮಾಡಿದರು.

ಜಾತ್ರೆಯಲ್ಲಿ ಜಾನುವಾರುಗಳಿಗೆ ನೀರಿನ ಸೌಕರ್ಯ ಕಲ್ಪಿಸಲೆಂದು ಪೂರ್ವಭಾವಿ ಸಭೆಯಲ್ಲಿ ಒಪ್ಪಿಕೊಂಡಿರುವಂತೆ ನಾವು ಮುಂಜಾನೆಯೇ ಟ್ಯಾಂಕರ್‌ ತಂದು ಜಾತ್ರೆಯ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಪಿಡಿಒ ಬಂದು ಯಾವ ಕೊಳವೆ ಬಾವಿಯಿಂದ ನೀರನ್ನು ತುಂಬಿಸಲು ತಿಳಿಸಿದರೆ ಅಲ್ಲಿಂದ ತೊಟ್ಟಿಗಳಿಗೆ ಸರಬರಾಜು ಮಾಡುತ್ತೇವೆಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದರು.

ಆವಣಿ ಜಾತ್ರೆ ವಿಶೇಷ ಬಸ್‌ಗಳಿಗೆ ವೇಗದೂತ ದರ : ಫೆ.10ರಂದು ನಡೆಯಲಿರುವ ಜಿಲ್ಲೆಯಲ್ಲಿಯೇ ಅತೀ ದೊಡ್ಡದಾದ ಬ್ರಹ್ಮರಥೋತ್ಸವಕ್ಕೆ ಕರ್ನಾಟಕ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಜನರು ಪಾಲ್ಗೊಳ್ಳುವುದರಿಂದ ಸುಗಮ ಸಂಚಾರಕ್ಕಾಗಿ ಮುಳಬಾಗಿಲು, ಕೋಲಾರ, ಕೆಜಿಎಫ್, ಶ್ರೀನಿವಾಸಪುರ, ಮಾಲೂರು ಡಿಪೋಗಳಿಂದ ಒಂದು ವಾರ ಕಾಲ ವಿಶೇಷವಾಗಿ ಪ್ರತಿ ನಿತ್ಯ ಎಲ್ಲಾ ಮಾರ್ಗಗಳಲ್ಲಿ 75 ಬಸ್‌ಗಳನ್ನು ಆವಣಿಗೆ ಜಾತ್ರೆಗೆ ಈಗಾಗಲೇ ಹಾಕಲಾಗಿದ್ದು, ರಥೋತ್ಸವದಂದು 150 ಬಸ್‌ಗಳು ಸೇರಿದಂತೆ ಎಷ್ಟೇ ಅಗತ್ಯವಾದರೂ ಅಷ್ಟು ಬಸ್‌ಗಳನ್ನು ಹಾಕಲಾಗುವುದು. ಜಾತ್ರೆ ವಿಶೇಷ ಬಸ್‌ಗಳಲ್ಲಿ ವೇಗದೂತ ಪ್ರಯಾಣ ದರವನ್ನು ನಿಗದಿ ಮಾಡಿದೆ ಎಂದು ಕೆಎಸ್‌ಆರ್‌ಟಿಸಿ ಇಲಾಖೆಯ ವಿಭಾಗೀಯ ಸಂಚಾರ ನಿಯಂತ್ರಣಾಧಿಕಾರಿಗಳು ತಿಳಿಸಿದರು.

ನಾಳೆ ಬ್ರಹ್ಮರಥೋತ್ಸವ : ಶಿವರಾತ್ರಿ ಹಬ್ಬದ ಮಾರನೇ ದಿವಸ ಫೆ.10ರಂದು ಸರ್ಕಾರದಿಂದ ಶ್ರೀರಾಮಲಿಂಗೇಶ್ವರಸ್ವಾಮಿ ಬ್ರಹ್ಮ ರಥೋತ್ಸವವು ಅತ್ಯಂತ ವಿಜೃಂಭಣೆಯಾಗಿ ನಡೆಯಲಿದ್ದು, ರಥೋತ್ಸವದ ವೇಳೆ ಬ್ರಹ್ಮರಥದ ಮುಂಭಾಗದಲ್ಲಿ ಮಾತೆ ಕೀಲುಹೊಳಲಿ ಗ್ರಾಮದೇವತೆ ಸಲ್ಲಾಪುರಮ್ಮ ದೇವರ ಮೆರವಣಿಗೆ ಸಾಗಲಿದೆ. ರಥೋತ್ಸವಕ್ಕೆ ಲಕ್ಷಾಂತರ ಜನರು ಪಾಲ್ಗೊಳ್ಳುವರು.

ಎಂ. ನಾಗರಾಜಯ್ಯ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.