ಅವೈಜ್ಞಾನಿಕ ರಸ್ತೆ ಸರಿಪಡಿಸದಿದ್ರೆ ಗೇಟ್ ಧ್ವಂಸ

ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಎಚ್ಚರಿಕೆ

Team Udayavani, Jul 6, 2019, 3:41 PM IST

tk-tdy-4..

ಬಂಗಾರಪೇಟೆ ಪಟ್ಟಣದ ಈದ್ಗಾ ಮೈದಾನ ದರ್ಗಾದಲ್ಲಿ ಕಾಂಕ್ರೀಟ್ ಕಾಮಗಾರಿಗೆ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಭೂಮಿ ಪೂಜೆ ನೆರವೇರಿಸಿದರು.

ಬಂಗಾರಪೇಟೆ: ಪಟ್ಟಣದ ಸಿ.ರಹೀಂ ಗಾರ್ಡನ್‌ ಹಾಗೂ ಬೂದಿಕೋಟೆ ವೃತ್ತದಲ್ಲಿ ರೈಲ್ವೆ ಇಲಾಖೆ ರಾತ್ರೋರಾತ್ರಿ ಅವೈಜ್ಞಾನಿಕವಾಗಿ ರೈಲ್ವೆ ಮಾರ್ಗದ ಪಕ್ಕದಲ್ಲಿ ರಸ್ತೆ ನಿರ್ಮಾಣ ಮಾಡಿರುವುದರಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗಿದೆ ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಈದ್ಗಾ ಮೈದಾನದಲ್ಲಿ ಅಲ್ಪಸಂಖ್ಯಾತರ ಇಲಾಖೆಯಿಂದ ಮಂಜೂರಾಗಿದ್ದ 85 ಲಕ್ಷ ರೂ.ನಲ್ಲಿ ಕೈಗೊಳ್ಳಲಾಗಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ತಾಲೂಕಿನ ಬೂದಿಕೋಟೆ ರಸ್ತೆಯ ಮೂಲಕ ಮಾಲೂರು, ಇತರೆ ಗ್ರಾಮಗಳಿಗೆ ಓಡಾಡುವ ಸಾವಿರಾರು ವಾಹನಗಳಿಗೆ ತೊಂದರೆಯಾಗಿದೆ ಎಂದರು.

ಟ್ರಾಫಿಕ್‌ ಜಾಮ್‌: ಪಟ್ಟಣದ ಬೂದಿಕೋಟೆ ವೃತ್ತದಿಂದ ಹುಣಸನಹಳ್ಳಿ ರೈಲ್ವೆ ಗೇಟ್ವರೆಗೂ ಹೆಚ್ಚಾಗಿ ಮುಸ್ಲಿಮರು ವಾಸವಾಗಿದ್ದು, ಕೋಲಾರ ರೈಲ್ವೆ ಮಾರ್ಗದ ಗೇಟನ್ನು ಮುಚ್ಚಿದ್ದರಿಂದ ಈಗ ಗಂಗಮ್ಮಪಾಳ್ಯ ಸುತ್ತುಕೊಂಡು ಬರಬೇಕಿದೆ. ಪ್ರತಿ ದಿನ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿರುವ ಕಾರಣ ವಾಹನ ಸವಾರರು ನೆಮ್ಮದಿಯಿಂದ ಸಂಚರಿಸದಂತಾಗಿದೆ ಎಂದರು.

ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಹುಣಸನಹಳ್ಳಿ ರೈಲ್ವೆ ಮೇಲ್ಸೇತುವೆಯನ್ನು ಆ.15 ರೊಳಗಾಗಿ ಸಾರ್ವಜನಿಕರ ಉಪಯೋಗಕ್ಕೆ ಬಿಡಲಾಗುವುದು. ಈ ಮೇಲ್ಸೇತುವೆಗೆ ರಾಜ್ಯ ಸರ್ಕಾರವು ಸಾಕಷ್ಟು ಅನುದಾನ ಬಿಡುಗಡೆ ಮಾಡಿದೆ. ಕೇಂದ್ರದ ಅನುದಾನ ವಿಳಂಬವಾಗಿದ್ದಕ್ಕೆ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ ಎಂದು ದೂರಿದರು.

ಕೋಲಾರ ಮಾರ್ಗದ ರೈಲ್ವೆ ಇಲಾಖೆ ನಿರ್ಮಿಸಿರುವ ರಸ್ತೆ ಸರಿಪಡಿಸದಿದ್ದರೇ, ನಾವೇ ಖುದ್ದಾಗಿ ಗೇಟ್ನ್ನು ಕಿತ್ತುಹಾಕಿ ಸವಾರರಿಗೆ ಮುಕ್ತ ಮಾಡಲಾಗುವುದೆಂದು ಎಚ್ಚರಿಸಿದರು. ಬಂಗಾರಪೇಟೆಯಿಂದ ಬೂದಿಕೋಟೆ ರಸ್ತೆಯನ್ನು 40 ಮೀಟರ್‌ ಅಗಲೀಕರಣಗೊಳಿಸಿ ಹೊಸದಾಗಿ ನಿರ್ಮಾಣ ಮಾಡಲು 40 ಕೋಟಿ ರೂ. ಬಿಡುಗಡೆಯಾಗಲಿದ್ದು, ಈ ರಸ್ತೆಯು ತಮಿಳುನಾಡು ಹಾಗೂ ಮಾಲೂರು ತಾಲೂಕುಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಈ ಭಾಗದ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು.

ಪಟ್ಟಣದ ಈದ್ಗಾ ಮೈದಾನವು ವಿಶಾಲವಾಗಿದ್ದು, ಪ್ರಸ್ತುತ 85 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಈ ದರ್ಗಾ ಆವರಣದಲ್ಲಿ ಮೂಲೆ ಮೂಲೆಗೂ ಕಾಂಕ್ರೀಟ್ ಹಾಕಿ ಅಭಿವೃದ್ಧಿಗೊಳಿಸಲಾಗುವುದು. ಅನುದಾನ ಸಾಕಾಗದೇ ಇದ್ದಲ್ಲಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಿಂದ ನೀಡಲಾಗುವುದು. ಮುಂದಿನ ಬಕ್ರೀದ್‌ ಹಬ್ಬದ ವೇಳೆಗೆ ಇಲ್ಲಿಯೇ ಎಲ್ಲರೂ ಪ್ರಾರ್ಥನೆ ಮಾಡಬೇಕಾಗಿದೆ ಎಂದು ಹೇಳಿದರು. ಮುಂದಿನ 8 ದಿನದಲ್ಲಿ ಕಾಮಗಾರಿ ಮುಗಿಯಲಿದ್ದು, ಕನಿಷ್ಠ 20 ದಿನ ನೀರು ಹಾಕಿ ಗುಣಮಟ್ಟ ಕಾಪಾಡುವಂತೆ ಗುತ್ತಿಗೆದಾರ ಚಂಬೆ ಮಂಜುನಾಥ್‌ಗೆ ಸೂಚನೆ ನೀಡಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಕೆಯುಡಿಎ ಮಾಜಿ ಅಧ್ಯಕ್ಷ ಶಂಶುದ್ಧೀನ್‌ ಬಾಬು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಎ.ಪಾರ್ಥಸಾರಥಿ, ದರ್ಗಾ ಆಡಳಿತಾಧಿಕಾರಿ ಡಾ.ಸೈಯದ್‌ ತಾಜಾದ್ದೀನ್‌, ಪುರಸಭೆ ಸದಸ್ಯರಾದ ಅರುಣಾಚಲಂ ಮಣಿ, ಷಫಿ, ಸಾದಿಕ್‌ಪಾಷ, ಸುಹೇಲ್, ಗೋವಿಂದಾ, ವೆಂಕಟೇಶ್‌, ರಾಕೇಶ್‌ಗೌಡ, ಕಪಾಲಿ ಶಂಕರ್‌, ರೇಣುಕಾ, ರತ್ನಮ್ಮ ತಿಮ್ಮಯ್ಯ, ವಸಂತರೆಡ್ಡಿ, ಮುಖಂಡರಾದ ಮರಗಲ್ ಜಾವಿದ್‌, ರಂಗರಾಮಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.