ನೀರು ಮಿತವಾಗಿ ಬಳಸದಿದ್ರೆ 100 ರೂ. ಕೊಡಬೇಕಾಗುತ್ತೆ


Team Udayavani, Sep 8, 2019, 12:06 PM IST

kolar-tdy-2

ಬಂಗಾರಪೇಟೆ: ತಾಲೂಕು ಸೇರಿ ಜಿಲ್ಲೆಯಲ್ಲಿ 15 ವರ್ಷಗಳಿಂದ ಬರಗಾಲ ಆವರಿಸಿದೆ. ನೀರನ್ನು ಮಿತವಾಗಿ ಬಳಸಬೇಕು. ಇಲ್ಲದಿದ್ದರೆ ಲೀಟರ್‌ ನೀರಿಗೆ 100 ರೂ. ಕೊಡಬೇಕಾಗುತ್ತದೆ ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಶ್ರೀಧರ್‌ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ಆದರ್ಶ ಶಾಲೆಯಲ್ಲಿ ಜಿಲ್ಲಾಡಳಿತ, ಪುರಸಭೆ ಹಾಗೂ ಪೋಕಸ್‌ ಸಂಸ್ಥೆ ಜಲಶಕ್ತಿ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಚಿತ್ರ ಬಿಡಿಸುವ ಸ್ಪರ್ಧೆ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿದರು.

ನೀರೇ ಸಿಗ್ತಿಲ್ಲ: ಬರಗಾಲ ಇರುವುದರಿಂದ ಕುಡಿಯುವ ನೀರನ್ನು ವ್ಯರ್ಥ ಮಾಡದೇ ಅಗತ್ಯಕ್ಕೆ ಅನುಗುಣವಾಗಿ ಬಳಸಬೇಕು. ಸತತ 15 ವರ್ಷಗಳಿಂದ ಮಳೆ ಇಲ್ಲದೆ ಇಲ್ಲದೆ ಕೆರೆ, ಕುಂಟೆಗಳು ಒಣಗಿವೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸರ್ಕಾರ ಕೊಳವೆಬಾವಿ ಕೊರೆಯಿಸಿ, ಅಂತರ್ಜಲ ಮಟ್ಟದಿಂದ ನೀರನ್ನು ತೆಗೆದು ಬಳಸುತ್ತಿದ್ದು, ಇದೂ ಖಾಲಿಯಾಗಿ 2 ಸಾವಿರ ಅಡಿ ಕೊಳವೆಬಾವಿ ಕೊರೆಯಿಸಿದರೂ ನೀರೇ ಸಿಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ನೀರು ಇಂಗಿಸಿ: ಪ್ರತಿ ವರ್ಷ ಬರುವ ಅಲ್ಪಸ್ವಲ್ಪ ಮಳೆ ನೀರನ್ನು ಮಳೆಕೊಯ್ಲು ಯೋಜನೆಯ ಮೂಲಕ ಭೂಮಿಯಲ್ಲಿ ಇಂಗಿಸುವ ಕೆಲಸ ಮಾಡಬೇಕೆಂದು ಹೇಳಿದರು. ರಾಜ್ಯ ಸರ್ಕಾರವು ಬರಗಾಲ ಪೀಡಿತ ಪ್ರದೇಶಗಳಲ್ಲಿ ಜಲಶಕ್ತಿ ಉತ್ತೇಜಿಸಲು ವಿವಿಧ ಇಲಾಖೆಗಳ ಮೂಲಕ ಜಲಶಕ್ತಿ ಅಭಿಯಾನವನ್ನು ನಡೆಸಿ ಜನರಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ರೂಪಿಸಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಪರಿಸರ ಹಾಗೂ ಬರಗಾಲದ ಬಗ್ಗೆ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಹೇಳಿದರು. ಗುಂಪು ಚರ್ಚೆಗಳು, ಜಾಥಾ ಕಾರ್ಯಕ್ರಮಗಳು, ವಾರ್ಡ್‌ ಸಭೆಗಳು, ಚರ್ಚಾ ಸ್ಪರ್ಧೆಗಳು, ಪ್ರಬಂಧ ಸ್ಪರ್ಧೆಗಳು ಸೇರಿದಂತೆ ಇತರೆ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಅರಿವು ಮೂಡಿಸಲಾಗು ತ್ತಿದೆ ಎಂದರು. ಪಟ್ಟಣದ ಆದರ್ಶ ಶಾಲೆಯಲ್ಲಿ ನಡೆದ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಪುರಸಭೆ ಸಮುದಾಯ ಸಂಘಟನೆ ಅಧಿಕಾರಿ ವೆಂಕಟೇಶ್‌, ಎ.ಹರೀಶ್‌, ಗೋವಿಂದರಾಜು, ಸೋಮಣ್ಣ, ಬಾಬು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.