![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 6, 2020, 5:16 PM IST
ಗಂಗಾವತಿ: ಕೋವಿಡ್ ಹರಡದಂತೆ ಜಿಲ್ಲಾಡಳಿತ ಹಲವಾರು ಮುನ್ನೆಚ್ಚರಿಕೆ ಕ್ರಮ ಕೈಗೊಂಡರೂ ಕೋವಿಡ್ ಸೋಂಕಿತರ ಸಂಖ್ಯೆ ನಿತ್ಯ ಹೆಚ್ಚುತ್ತಿದೆ. ರವಿವಾರ ಒಂದೇ ದಿನ ಗಂಗಾವತಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ 15 ಜನರಿಗೆ ಸೋಂಕು ದೃಢಪಟ್ಟಿದೆ. ಅನ್ಯ ಊರುಗಳಿಂದ ಬಂದವರಿಂದಲೇ ಕೋವಿಡ್ ಹೆಚ್ಚು ಹರಡುತ್ತಿದೆ.
ಗಂಗಾವತಿ ನಗರದ ಕಿಲ್ಲಾ ಏರಿಯಾದಲ್ಲಿ 2 ವರ್ಷದ ಬಾಲಕಿಗೆ, ನೀಲಕಂಠೇಶ್ವರ ಕ್ಯಾಂಪಿನಲ್ಲಿ 6 ತಿಂಗಳ ಹಸುಗೂಸಿನ 25 ವರ್ಷದ ತಾಯಿ, ಮುರಾಹರಿ ನಗರದಲ್ಲಿ 23 ವರ್ಷದ ಮಹಿಳೆ, ವಾಲ್ಮೀಕಿ ವೃತ್ತದ ಹತ್ತಿರ 39 ವರ್ಷದ ವ್ಯಕ್ತಿ, ಅಗ್ನಿಶಾಮಕದಳ 28 ವರ್ಷದ ವಾಹನ ಚಾಲಕ, ಅಂಗಡಿ ಸಂಗಣ್ಣ ಕ್ಯಾಂಪಿನಲ್ಲಿ 34 ವರ್ಷ ವ್ಯಕ್ತಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ. ಇವರೆಲ್ಲ ಅನ್ಯ ಊರಿಗೆ ತೆರಳಿದ್ದು ನೆಗಡಿ ಜ್ವರದ ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ಆಗಮಿಸಿದ್ದ ವೇಳೆ ಗಂಟಲು ದ್ರವ ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಈಗ ಪಾಸಿಟಿವ್ ಬಂದಿದ್ದು, ಸೋಂಕಿತರನ್ನು ನಗರದ ಕೊವೀಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಐದು ಪ್ರದೇಶಗಳನ್ನು ಸೀಲ್ಡೌನ್ ಮಾಡಿ ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ.
ಗ್ರಾಮೀಣ ಭಾಗದಲ್ಲೂ ಕೋವಿಡ್: ತಾಲೂಕಿನ ಆಗೋಲಿಯ 26 ವರ್ಷದ ಯುವಕ, ಶ್ರೀರಾಮನಗರದ 29 ವರ್ಷದ ವ್ಯಕ್ತಿ, ಆಚಾರನರಸಾಪೂರದಲ್ಲಿ 30 ವರ್ಷದ ವ್ಯಕ್ತಿ, ಹೊಸಳ್ಳಿ ಗ್ರಾಮದ 19 ವರ್ಷದ ಯುವಕ, ಶ್ರೀರಾಮನಗರದ 5ನೇ ವಾರ್ಡಿನ 17 ವರ್ಷದ ಬಾಲಕಿನೆ ಕೋವಿಡ್ ಪಾಸಿಟಿವ್ ಬಂದಿದೆ.
ತಹಸೀಲ್ದಾರ್ ಎಲ್.ಡಿ. ಚಂದ್ರಕಾಂತ, ಆರೋಗ್ಯ ಅಧಿಕಾರಿ ಡಾ| ಶರಣಪ್ಪ ಚಿಕೋಟಿ, ನಗರಸಭೆ ಪೌರಾಯುಕ್ತ ಶೇಖರಪ್ಪ ಇಳಿಗೇರ್, ಕಂದಾಯ ನಿರೀಕ್ಷಕರಾದ ಮಹೇಶ ದಲಾಲ್, ಮಂಜುನಾಥ ಹಿರೇಮಠ ಹಾಗೂ ಆಶಾಕಾರ್ಯಕರ್ತೆಯರು ಕೋವಿಡ್ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಮಾಹಿತಿ ಪಡೆದರು. ಸೋಂಕು ತಗುಲಿದ ವ್ಯಕ್ತಿಗಳ ಮನೆಯ ಸುತ್ತಲಿನ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.