ಗಂಗಾವತಿ: 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ದತೆ

5 ಸಾವಿರ ಜನರಿಗೆ ಕೂರಲು ವ್ಯವಸ್ಥೆ ಎರಡೂ ದಿನವೂ ಉಪಹಾರ, ಊಟದ ವ್ಯವಸ್ಥೆ

Team Udayavani, Mar 2, 2023, 5:34 PM IST

ಗಂಗಾವತಿ: 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ದತೆ

ಗಂಗಾವತಿ: ಗಂಗಾವತಿ ತಾಲೂಕು 8 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದ್ದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾ.06 ಮತ್ತು 07 ರಂದು ಎರಡು ದಿನಗಳ ಕಾಲ ಸಾಹಿತ್ಯ ಸಮ್ಮೇಳನದ ಜಾತ್ರೆ ಜರುಗಲಿದ್ದು ಈಗಾಗಲೇ ವೇದಿಕೆ ನಿರ್ಮಾಣ ಸೇರಿ ಸಮ್ಮೇಳನಕ್ಕೆ ಆಗಮಿಸುವವರಿಗೆ ಊಟೋಪಚಾರದ ಕುರಿತು ಭರ್ಜರಿ ಸಿದ್ದತೆಗಳು ನಡೆಯುತ್ತಿದ್ದು ಗುರುವಾರ ಬೆಳ್ಳಿಗ್ಗೆ ಶಾಸಕ ಪರಣ್ಣ ಮುನವಳ್ಳಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಸಮ್ಮೇಳನ ವೇದಿಕೆ ನಿರ್ಮಾಣವಾಗುತ್ತಿರುವ ಜೂನಿಯರ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿ ಕಾರ್ಯಕ್ರಮದ ವೇದಿಕೆ ಎತ್ತರಿಸುವಂತೆ ವೇದಿಕೆ ನಿರ್ಮಾಣ ಮಾಡುವ ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು.

ಎರಡು ದಿನಗಳ ಸಮ್ಮೇಳನದಲ್ಲಿ ನಾಡು, ನುಡಿ, ಜಲ ಹಾಗೂ ಗಂಗಾವತಿ ತಾಲೂಕಿಗೆ ಅಭಿವೃದ್ಧಿ ಪೂರಕವಾಗುವಂತಹ ಗೋಷ್ಠಿಗಳು ನಡೆಯಲಿದ್ದು ಈಗಾಗಲೇ ಆಹ್ವಾನ ಪತ್ರಿಕೆ ಮುದ್ರಣ ಕಾರ್ಯ ಜರುಗಿದೆ. ಎರಡು ದಿನಗಳ ಸಮ್ಮೇಳನಕ್ಕೆ ಆಗಮಿಸುವವರಿಗೆ ಬೆಳ್ಳಿಗ್ಗೆ ಉಪಹಾರ ಮಧ್ಯಾನ್ಹ ರಾತ್ರಿ ಊಟದ ವ್ಯವಸ್ಥೆ ಮಾಡಲು ದಾಸೋಹ ಕಮೀಟಿ ಸಿದ್ದತೆ ನಡೆಸಿದ್ದು ಬೆಳ್ಳಿಗ್ಗೆ ಉಪ್ಪಿಟ್ಟು, ಮಧ್ಯಾನ್ಹ ಮತ್ತು ರಾತ್ರಿ ಕಡಕ್ ರೊಟ್ಟಿ, ತರಕಾರಿ, ಕಾಳಿನ ಪಲ್ಯಾ, ಅನ್ನ ಸಾಂಬಾರ, ಪುಡಿ ಚಟ್ನಿ ಸೇರಿ ಹಲವು ಆಹಾರಗಳ ಮೆನು ಸಿದ್ದಪಡಿಸಿಕೊಂಡಿದ್ದು ಎರಡು ದಿನಗಳು ಸೇರಿ ಸುಮಾರು 15 ಸಾವಿರ ಜನತೆ ಊಟ ಮಾಡುವ ವ್ಯವಸ್ಥೆಯನ್ನು ದಾಸೋಹ ಕಮೀಟಿ ಶಾಸಕ ಪರಣ್ಣ ಮುನವಳ್ಳಿ ಸಹಕಾರದಲ್ಲಿ ಸಿದ್ದತೆ ನಡೆಸಿದೆ.

ವೇದಿಕೆ ನಿರ್ಮಾಣದ ಜವಾಬ್ದಾರಿಯನ್ನು ಗಂಗಾವತಿಯ ಬಾಲಾಜಿ ಡೆಕೋರೇರ‍್ಸ್ಗಳಿಗೆ ವಹಿಸಲಾಗಿದ್ದು ಸುಮಾರು 5 ಸಾವಿರ ಜನರು ಕುಳಿತುಕೊಳ್ಳುವಷ್ಟು ಚೇರ್‌ಗಳು ಸೇರಿ ಕಾರ್ಯಕ್ರಮದ ವೇದಿಕೆ ಸಿದ್ದಪಡಿಸಲಾಗುತ್ತಿದೆ. ವೇದಿಕೆ ಎತ್ತರ ಹೆಚ್ಚಿಸುವಂತೆ ಕಸಾಪ ಪದಾಧಿಕಾರಿಗಳ ಮನವಿ ಪುಸ್ಕರಿಸಿ ವೇದಿಕೆ ಎತ್ತರ ಮಾಡುವಂತೆ ಶಾಸಕ ಪರಣ್ಣ ಮುನವಳ್ಳಿ ಡೆಕೋರೇರ‍್ಸ÷ ಮಾಲೀಕರಿಗೆ ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಸಾಪ ತಾಲೂಕು ಅಧ್ಯಕ್ಷ ಶ್ರೀನಿವಾಸ ಅಂಗಡಿ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್.ರಾಘವೇಂದ್ರ ಶೆಟ್ಟಿ, ಡಾ|ಶಿವಕುಮಾರ ಮಾಲೀಪಾಟೀಲ್, ರಮೇಶ ಕಲಕುರ್ಣಿ, ಮೈಲಾರಪ್ಪ ಬೂದಿಹಾಳ, ರುದ್ರೇಶ, ಶಿವಾನಂದ, ಶಿವಕಾಂತ, ಉಜ್ಜನಗೌಡ, ಅಕ್ಕಿ ಚಂದ್ರು, ಯಂಕಪ್ಪ ಕಟ್ಟಿಮನಿ, ರಾಘವೇಂದ್ರ ತೂನಾ, ಬಸವರಾಜ ಹಡಪದ್, ಸಿದ್ದಲಿಂಗಯ್ಯ ಸೇರಿ ಕಸಾಪ ಪದಾಧಿಕಾರಿಗಳಿದ್ದರು.

ಮಾ.06,07 ರಂದು ಗಂಗಾವತಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ. ಎರಡು ದಿನಗಳ ಕಾಲ ನೆಲ,ಜಲ ಭಾಷೆ ಕುರಿತು ಚಿಂತನ ಮಂಥನ ಜರುಗಲಿದೆ. ಜತೆಗೆ ಗಂಗಾವತಿಯ ಪ್ರಗತಿಗಾಗಿ ವಿದ್ವಾಂಸರು ಸಲಹೆ ಸೂಚನೆ ನೀಡಲಿದ್ದಾರೆ. ಕಿಷ್ಕಿಂದಾ ಅಂಜನಾದ್ರಿ, ಮೋರ್ಯರಬೆಟ್ಟ, ಕುಮ್ಮಟದುರ್ಗ, ಹೇಮಗುಡ್ಡ, ಸೇರಿ ಇಲ್ಲಿಯ ಪ್ರವಾಸಿ ತಾಣಗಳನ್ನು ಇನ್ನಷ್ಟು ಅಭಿವೃದ್ಧಿ ಮಾಡಿ ಪ್ರವಾಸಿಗರನ್ನು ದೇಶ ವಿದೇಶಗಳಿಂದ ಸೆಳೆಯುವ ಚರ್ಚೆಗಳು ಸಮ್ಮೇಳನದಲ್ಲಿ ನಡೆಯಲಿವೆ. ನೀರಾವರಿಗೆ, ಶೈಕ್ಷಣಿಕ ಪ್ರಗತಿಗೆ ಸಂಬಂಧಪಟ್ಟ ಕುರಿತು ಸಾಹಿತಿಗಳು ಬೆಳಕು ಚೆಲ್ಲುವ ಸಾಧ್ಯತೆ ಇದ್ದು ಎಲ್ಲರೂ ಕೂಡಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿ ಮಾಡಿ ಮುಂದಿನ ಪೀಳಿಗೆಗೆ ಭವಿಷ್ಯವನ್ನು ತೋರಿಸಬೇಕಿದೆ.

– ಪರಣ್ಣ ಮುನವಳ್ಳಿ ಶಾಸಕರು ಅಧ್ಯಕ್ಷರು ಸ್ವಾಗತ ಸಮಿತಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Jayalalittha-Golds

Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.