ಹದಿನೇಳು ವರ್ಷ ಕಳೆದರೂ ಫಲಾನುಭವಿಗೆ ದಕ್ಕದ ಮನೆ


Team Udayavani, Mar 10, 2020, 4:41 PM IST

kopala-tdy-1

ಗಂಗಾವತಿ: ಗುಡಿಸಲು ರಹಿತ ರಾಜ್ಯ ನಿರ್ಮಾಣಕ್ಕೆ ಸರಕಾರಗಳು ಬಜೆಟ್‌ನಲ್ಲಿ ಅನುದಾನ ಘೋಷಿಸುತ್ತವೆ. ಆಶ್ರಯ ಮನೆ ನಿರ್ಮಿಸಲು ಪ್ರತಿವರ್ಷ ಕೋಟ್ಯಂತರ ರೂ. ಖರ್ಚೂ ಮಾಡುತ್ತವೆ. ಆದರೆ ಅಧಿಕಾರಿಗಳು ಸ್ಪಂದಿಸದಿದ್ದರೆ ಸರಕಾರದ ಯೋಜನೆ ಅನುಷ್ಠಾನ ಕಷ್ಟವೆನಿಸುತ್ತದೆ. ಆ ಯೋಜನೆಯ ಫಲ ಆಯಾ ಫಲಾನುಭವಿಗಳಿಗೆ ತಲುಪುವುದೇ ಇಲ್ಲ.

ಹೌದು. ಗಂಗಾವತಿಯ ನೇಕಾರ ಓಣಿಯ ಸೊಂಡುರು ಸ್ವಾಮಿಯವರು ಮನೆಗಾಗಿ ಕಳೆದ 17 ವರ್ಷಗಳಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಹಿಂದೆ ಸುತ್ತಾಡಿದರೂ ಸರ್ಕಾರದ ಯೋಜನೆಯ ಫಲ ಇನ್ನೂ ದೊರಕಿಯೇ ಇಲ್ಲ. 2003ರಲ್ಲಿ ಅಂದಿನ ಎಸ್‌.ಎಂ. ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನಿವೇಶನ ರಹಿತರನ್ನು ಗುರುತಿಸಿ ನಿವೇಶನ ಮತ್ತು ಮನೆ ನಿರ್ಮಾಣಕ್ಕೆ ಸರಕಾರ ಆಶ್ರಯ ಯೋಜನೆ ಕಲ್ಪಿಸಿತ್ತು. ಇದರಲ್ಲಿ ಗಂಗಾವತಿ ನೇಕಾರ ಓಣಿಯ ಸೊಂಡುರು ಸ್ವಾಮಿ ಕೂಡ ಫಲಾನುಭವಿಯಾಗಿದ್ದರು. ಕಂಪ್ಲಿ ರಸ್ತೆಯಲ್ಲಿ ಆಟೋನಗರ ನಿರ್ಮಿಸಿ ಆಟೋ ಚಾಲಕರು ಮತ್ತು ಬಡವರಿಗೆ ನಿವೇಶನವನ್ನೂ ಕಲ್ಪಿಸಲಾಯಿತು. ನಂತರ ಅಂಬೇಡ್ಕರ್‌ ನಿಗಮದ ಮೂಲಕ 4.5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿಕೊಳ್ಳುವ ಯೋಜನೆಯಲ್ಲಿ ನಿವೇಶನ ಪಡೆದ ಕೆಲ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು. ಅದರಲ್ಲಿ ಸೊಂಡುರು ಸ್ವಾಮಿಯವರೂ ಆಯ್ಕೆಯಾದರು. ಆಟೋನಗರದಲ್ಲಿ ಮೂಲಸೌಕರ್ಯ ಇಲ್ಲದ ಕಾರಣಕ್ಕೆ ಮನೆ ನಿರ್ಮಿಸಿಕೊಡಲು ನಗರಸಭೆ ಅಧಿಕಾರಿಗಳು ಹಿಂದೇಟು ಹಾಕಿದರು.

ಅದಾದ ನಂತರ 17 ವರ್ಷ ಕಳೆದರೂ ಯಾರೂ ಗಮನ ಹರಿಸಲಿಲ್ಲ. ಸೊಂಡುರು ಸ್ವಾಮಿ ಅವರು ಶಾಸಕರು, ಸಂಸದರು, ಸಚಿವರು, ವಿಪಕ್ಷ ನಾಯಕರು, ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದೂ ಆಯ್ತು. ಕೊನೆಗೆ ದೆಹಲಿಗೆ ತೆರಳಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೂ ಆಯ್ತು. ಆದರೆ ನಗರಸಭೆ ಅಧಿಕಾರಿಗಳು ಮಾತ್ರ ಮನೆ ನಿರ್ಮಿಸಿಕೊಡಲು ಮನಸ್ಸು ಮಾಡಿಲ್ಲ. ಇದರ ಮಧ್ಯೆಯೇ ಸೊಂಡುರು ಸ್ವಾಮಿಯವರ ಪತ್ನಿ ಹೃದಯಾಘಾತದಿಂದ ಮೃತಪಟ್ಟರು. ಮಕ್ಕಳ ಮದುವೆ ಮಾಡಿ ಒಬ್ಬಂಟಿಯಾದ ಸೊಂಡುರು ಸ್ವಾಮಿ ಅನ್ಯರ ಮನೆಯಲ್ಲಿ ಸಾಮಾನುಗಳನ್ನಿಟ್ಟು ಕೂಲಿ-ನಾಲಿ ಮಾಡುತ್ತ ಗುಡಿ-ಗುಂಡಾರ, ಸಂಬಂಧಿಕರ ಮನೆಯಲ್ಲಿ ವಾಸ ಮಾಡುತ್ತ ಜೀವನ ಸಾಗಿಸುತ್ತಿದ್ದಾರೆ.

2003ರಲ್ಲಿ ಸರಕಾರ ನಿವೇಶನ ಮತ್ತು ಮನೆ ಮಂಜೂರು ಮಾಡಿದ್ದರೂ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಇನ್ನೂ ಮನೆ ನಿರ್ಮಾಣವಾಗಿಲ್ಲ. ಪತ್ನಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಹೆಣ್ಣು ಮಕ್ಕಳಿಗೆ ಮದುವೆ ಮಾಡಿ ಕಳುಹಿಸಿದ್ದು, ಈಗ ಒಬ್ಬಂಟಿಯಾಗಿದ್ದೇನೆ. ಆಟೋ ನಗರದಲ್ಲಿ ಮೂಲಸೌಕರ್ಯಕ್ಕಾಗಿ 25 ಲಕ್ಷ ರೂ. ಮಂಜೂರು ಮಾಡಿಸಿದರೂ ಆಶ್ರಯ ಕಾಲೋನಿಯಲ್ಲಿ ಯಾವುದೇ ಸೌಕರ್ಯಗಳಿಲ್ಲ. ಮನೆ ನಿರ್ಮಿಸುವವರೆಗೂ ಹೋರಾಟ ನಡೆಸುತ್ತೇನೆ. ನನ್ನಂತೆ ಸಾವಿರಾರು ಫಲಾನುಭವಿಗಳು ಅಧಿಕಾರಿಗಳ ಧೋರಣೆಗೆ ಹಿಡಿಶಾಪ ಹಾಕುತ್ತಿದ್ದಾರೆ.-ಸೊಂಡುರುಸ್ವಾಮಿ, ಫಲಾನುಭವಿ.

ಕಂಪ್ಲಿ ರಸ್ತೆಯಲ್ಲಿರುವ ಆಟೋ ನಗರದಲ್ಲಿ ಸೊಂಡುರು ಸ್ವಾಮಿ ಅವರಿಗೆ 2003ರಲ್ಲಿ ನಿವೇಶನ ಮಂಜೂರಿಯಾಗಿದೆ. 2017-18ರಲ್ಲಿ ಅಂಬೇಡ್ಕರ್‌ ನಿಗಮದಿಂದ ಮನೆಯೂ ಮಂಜೂರಿಯಾಗಿದೆ. ಮೂಲಸೌಕರ್ಯ ಇಲ್ಲದ ಕಾರಣದಿಂದ ಇನ್ನೂ ಮನೆ ನಿರ್ಮಿಸಿಲ್ಲ. ಆಟೋ ನಗರದಲ್ಲಿ ಶೀಘ್ರ ಮೂಲಸೌಕರ್ಯ ಕಲ್ಪಿಸಲಾಗುತ್ತದೆ. ಅಲ್ಲಿ ನಿವೇಶನ ಪಡೆದ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಅನುಕೂಲ ಮಾಡಿಕೊಡಲಾಗುತ್ತದೆ.-ಶೇಖರಪ್ಪ ಈಳಿಗೇರ್‌, ಪೌರಾಯುಕ್ತ

 

-ಕೆ.ನಿಂಗಜ್ಜ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.