ಕಾಮಗಾರಿ ನಡೆಸದೇ ಬಿಲ್‌: ತನಿಖೆಗೆ ಆಗ್ರಹ


Team Udayavani, Feb 26, 2020, 4:10 PM IST

kopala-tdy-2

ಕೊಪ್ಪಳ: ಕಳೆದ 2019-20ನೇ ಸಾಲಿನ ಜಿಪಂ ಅಭಿವೃದ್ಧಿ (ಶಾಸನಬದ್ಧ) ಅನುದಾನದ103.87 ಲಕ್ಷ ರೂ.ಗಳ ಕಾಮಗಾರಿಗಳು ನಡೆಸದೇ ಬಿಲ್‌ ಎತ್ತುವಳಿ ಮಾಡಿದ್ದಾರೆ. ಕೂಡಲೇ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಪಂನ ಕಾಂಗ್ರೆಸ್‌ ಸದಸ್ಯರು ಸಿಇಒ ರಘುನಂದನ್‌ ಮೂರ್ತಿ ಅವರಿಗೆ ದೂರು ಸಲ್ಲಿಸಿದ್ದಾರೆ.

2019-20ನೇ ಸಾಲಿನಲ್ಲಿ ಬೋಗಸ್‌ಬಿಲ್‌ ಆಗಿವೆ ಎನ್ನುವ ದೂರುಗಳು ಕೇಳಿ ಬಂದಿವೆ. ಜಿಪಂ ಸದಸ್ಯರು ಚರ್ಚೆ ಮಾಡುವ ವೇಳೆ ಹಾಲಿ ಅಧ್ಯಕ್ಷರು ರಾಜೀನಾಮೆ ಕೊಡುತ್ತಿದ್ದಾರೆ ಎಂದು ಸುದ್ದಿ ಹರಡುತ್ತಿದೆ. ತಮ್ಮ ರಾಜೀನಾಮೆ ಅವಧಿ ಯ ವೇಳೆ ಎಲ್ಲ ಬೋಗಸ್‌ ಬಿಲ್‌ ಮಾಡಿ ಮೊದಲೇ ಹಣ ಮಾಡುವ ಹುನ್ನಾರ ನಡೆದಿದೆ.

ಗಂಗಾವತಿ ತಾಲೂಕಿನ ಸಿದ್ದಾಪುರ ಕ್ಷೇತ್ರದ ಗುಂಡೂರು ಕ್ಯಾಂಪಿನಲ್ಲಿ 3 ಲಕ್ಷ ರೂ. ರಸ್ತೆ ನಿರ್ಮಾಣ, ಲಕ್ಷ್ಮೀ ಕ್ಯಾಂಪಿನಲ್ಲಿ ರಸ್ತೆ ಅಭಿವೃದ್ಧಿಯ 2.50 ಲಕ್ಷ ರೂ. ಕಾಮಗುಂಡಪ್ಪ ಕ್ಯಾಂಪಿನಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕಾಗಿ 3 ಲಕ್ಷ, ಸಿಂಗನಾಳ ಗ್ರಾಮದ ಮಳೆಗಡ್ಡೆ ರಸ್ತೆ ಮರಂ ಹಾಕಲಿಕ್ಕೆ 2 ಲಕ್ಷ ರೂ., ಉಳೆನೂರು 2ನೇ ವಾರ್ಡ್‌ನಲ್ಲಿ ಸಿಸಿ, ಚರಂಡಿ ನಿರ್ಮಾಣಕ್ಕಾಗಿ 3 ಲಕ್ಷ ರೂ, ಸಿದ್ದಾಪುರ ಹರಿಜನ 2ನೇ ವಾರ್ಡ್ ನಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕಾಗಿ 3 ಲಕ್ಷ ರೂ., ಸಿದ್ದಾಪುರ 1ನೇ ವಾರ್ಡ್‌ನಲ್ಲಿ ಸಿ.ಸಿ ರಸ್ತೆ ನಿರ್ಮಾಣಕ್ಕೆ 2.50 ಲಕ್ಷ ರೂ., ಈಳಿಗನೂರು ಗ್ರಾಮದ ರಸ್ತೆ ಅಭಿವೃದ್ಧಿ ಪಡಿಸಲು 2.50ಲಕ್ಷ ರೂ., ಸಿದಾಪುರ ಗ್ರಾಮದ 5ನೇ ವಾರ್ಡ್ ನಲ್ಲಿ ರಸ್ತೆ ಅಭಿವೃದ್ಧಿ ಪಡಿಸಲು 2 ಲಕ್ಷ ರೂ ಸೇರಿ ವಿವಿಧೆಡೆ ಕಾಮಗಾರಿಗಳನ್ನು ಮಾಡದೇ 103.87 ಲಕ್ಷಗಳ ಅನುದಾನ ಬಿಲ್ಲು ಎತ್ತುವ ಪ್ರಯತ್ನ ನಡೆಸಿದ್ದಾರೆ. ಈ ಬಗ್ಗೆ ವ್ಯಾಪಕ ದೂರು ಕೇಳಿ ಬರುತ್ತಿವೆ. ಕೂಡಲೇ ಇದಕ್ಕೆ ಸಂಬಂಧಿ ಸಿದಂತೆ ವಿಶೇಷ ತಂಡ ರಚಿಸಿ ಕಾಮಗಾರಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಬೋಗಸ್‌ ಬಿಲ್‌ ಬಗ್ಗೆಯೂ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್‌ ಸದಸ್ಯರು ಮನವಿ ಸಲ್ಲಿಸಿದರು.

ಈ ವೇಳೆ ಸದಸ್ಯರಾದ ಹನುಮಂತಗೌಡ ಚಂಡೂರು, ಗೂಳಪ್ಪ ಹಲಿಗೇರಿ, ಚೆನ್ನುಪಾಟಿ ವಿಜಯಲಕ್ಷ್ಮೀ ಪ್ರಭಾಕರ, ಕೆ. ರಾಜಶೇಖರ ಹಿಟ್ನಾಳ, ಲಕ್ಷಮ್ಮ ನೀರಲೂಟಿ, ರತ್ನವ್ವ ಭರಮಪ್ಪ ನಗರ, ಅಗಸಿಮುಂದಿನ ಭಿಮಣ್ಣ ಶರಣಪ್ಪ, ಹನಮಗೌಡ ಮಾದೇವಗೌಡ, ಗಾಯತ್ರಿ ವೆಂಕಟೇಶ ವಿ., ಬೀನಾ ಗೌಸ್‌, ಅನಿತಾ ಜಿ. ಮಾರುತಿ, ಅಮರೇಶಪ್ಪ ಗೋನಾಳ, ಶಾಂತಾ ರಮೇಶ ನಾಯಕ, ಹೊಳೆಯಮ್ಮ ಪೊಲೀಸ್‌ ಪಾಟೀಲ್‌, ಗಿರಿಜಾ ರೇವಣಪ್ಪ ಸಂಗಟಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.