ಗಂಗಾವತಿ: ವಿವಾದಕ್ಕೆ ತಿರುಗಿದ ಬಿಪಿನ್ ರಾವತ್ ವೃತ್ತ; 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿ


Team Udayavani, Dec 16, 2021, 10:27 PM IST

ಗಂಗಾವತಿ: ವಿವಾದಕ್ಕೆ ತಿರುಗಿದ ಬಿಪಿನ್ ರಾವತ್ ವೃತ್ತ; 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿ

ಗಂಗಾವತಿ: ನಗರದ ಇಸ್ಲಾಂಪುರ ರಸ್ತೆಯಲ್ಲಿರುವ ವೃತ್ತವೊಂದಕ್ಕೆ ಇತ್ತೀಚೆಗೆ ನಿಧನರಾದ ಭಾರತೀಯ ಸೇನೆಯ ಮುಖ್ಯಸ್ಥರಾದ ಬಿಪಿನ್ ರಾವತ್ ಹೆಸರನ್ನು ನಾಮಕರಣ ಮಾಡಿ ವೃತ್ತ ಉದ್ಘಾಟನೆ ಮಾಡಲಾಗಿದೆ.

ಇದೀಗ ವೃತ್ತಕ್ಕೆ ನಾಮಕರಣ ಮಾಡಿದ ಬಗ್ಗೆ ವಿವಾದ ಉಂಟಾಗಿದ್ದು ಇಸ್ಲಾಂಪುರದ ಸ್ಥಳೀಯರು ನಾಮಫಲಕವನ್ನು ತೆರವುಗೊಳಿಸುವಂತೆ ಒತ್ತಾಯಿಸಿದ್ದಾರೆ.ಇದರಿಂದ ಇಸ್ಲಾಂಪುರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದು ಸ್ಥಳಕ್ಕೆ ಪೊಲೀಸ್ ಇಲಾಖೆಯ ಅಧಿಕಾರಿಗಳು ತಾಲೂಕಾ ಆಡಳಿತದ ಅಧಿಕಾರಿಗಳು ನಗರಸಭೆ ಅಧಿಕಾರಿಗಳು ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ .

ದೇಶಕ್ಕಾಗಿ ತಮ್ಮ ಜೀವನವನ್ನು ಹುತಾತ್ಮ ಗೊಳಿಸಿಕೊಂಡ ಬಿಪಿನ್ ರಾವತ್ ಅವರ ಹೆಸರಿನಲ್ಲಿ ಇಸ್ಲಾಂಪುರದ ರಸ್ತೆಯ ವೃತ್ತದಲ್ಲಿ ನಾಮಫಲಕ ಅಳವಡಿಸಿ ವೃತ್ತ ಎಂದು ಉದ್ಘಾಟಿಸಲಾಗಿದೆ.ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಬಿಪಿನ್ ರಾವತ್ ದೇಶಭಕ್ತರಾಗಿದ್ದು ಅವರನ್ನು ಸರ್ವಜನರು ಸ್ಮರಿಸಬೇಕು ಆದ್ದರಿಂದ ಯುವಜನರಿಗೆ ಸ್ಫೂರ್ತಿ ಆಗಲೆಂದು ವೃತ್ತ ನಾಮಕರಣ ಮಾಡಲಾಗಿದೆ ಆದ್ದರಿಂದ ಇದನ್ನು ತೆರವುಗೊಳಿಸುವ ಪ್ರಶ್ನೆನೇ ಇಲ್ಲ ಈ ಹಿಂದೆ ಆಡಳಿತ ನಡೆಸಿದವರು ನಗರದಲ್ಲಿ ಇಪ್ಪತ್ತೈದಕ್ಕೂ ಹೆಚ್ಚು ವೃತ್ತಗಳ ನಿರ್ಮಾಣ ಮಾಡಿದ್ದಾರೆ ಇದೀಗ ಯಾಕೆಬಖ್ಯಾತೆ ತೆಗೆದಿದ್ದಾರೆ . ಈ ದೇಶದಲ್ಲಿರುವ ಪ್ರತಿಯೊಬ್ಬರೂ ಸೇನೆಯನ್ನ ಜನರನ್ನ ಪ್ರೀತಿ ಮಾಡಬೇಕು ರಾಜಕೀಯ ಕಾರಣಕ್ಕಾಗಿ ಯಾರನ್ನೂ ಟೀಕಿಸಬಾರದು.ಚುನಾಯಿತ ಜನಪ್ರತಿನಿಧಿ ಅಲ್ಲದವರ ಜೊತೆ ವಕ್ಫ್ ಇಲಾಖೆಯ ವಾಣಿಜ್ಯ ಮಳಿಗೆಗಳನ್ನು ಉದ್ಘಾಟನೆ ಮಾಡಿಸುವ ಮುಖಂಡರು ದೇಶಭಕ್ತ ಬಿಪಿನ್ ರಾವತ್ ವೃತ್ತ ನಾಮಫಲಕ ಉದ್ಘಾಟನೆಗೆ  ಯಾಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.ಪೊಲೀಸರು ಇಂಥ ಸಂಘರ್ಷ ಮತ್ತು ಗೊಂದಲ ಉಂಟು ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಶಾಂತಿ ಕಾಪಾಡುವಂತೆ   ಶಾಸಕ ಪರಣ್ಣ ಮುನವಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ .

ವೃತ್ತ ನಾಮಫಲಕ ತೆರವಿಗೆ ಆಗ್ರಹ : ಈ ಹಿಂದೆ ಸ್ಥಳೀಯರು 2015ರಲ್ಲಿ ನಗರಸಭೆಯಲ್ಲಿ ಇಸ್ಲಾಂಪುರ್ ರಸ್ತೆಯಲ್ಲಿರುವ ವೃತ್ತಕ್ಕೆ ಇಸ್ಲಾಂಪುರ ವೃತ್ತ ಎಂದು ನಾಮಕರಣ ಮಾಡಲು  ಮನವಿ ಸಲ್ಲಿಸಿದ್ದರೂ ಆಗ ನಗರಸಭೆ ಪರವಾನಗಿ ನೀಡಿದೆ ಈಗ ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಬಿಪಿನ್ ರಾವತ್ ಅವರ ಹೆಸರನ್ನು ಇಲ್ಲಿ ನಾಮಕರಣ ಮಾಡಿ ಗೊಂದಲ ಮೂಡಿಸುತ್ತಿದ್ದಾರೆ ಇದು ಸರಿಯಲ್ಲ ಬಿಪಿನ್ ರಾವತ್ ಹೆಸರಿನಲ್ಲಿ ಬೃಹತ್ ವೃತ್ತ ನಿರ್ಮಾಣ ಮಾಡಲು ಎಲ್ಲರೂ ಸಹಕಾರ ನೀಡುತ್ತೇವೆ ಈಗ ಹಾಕಿರುವ ನಾವು ನಾಮಫಲಕವನ್ನು ತೆರವುಗೊಳಿಸುವಂತೆ ನಗರಸಭೆ ಸದಸ್ಯ ಶ್ಯಾಮೀದ್ ಮನಿಯಾರ್ ಒತ್ತಾಯಿಸಿದ್ದಾರೆ .

ನಿಷೇಧಾಜ್ಞೆ ಜಾರಿ : ಬಿಪಿನ್ ರಾವತ್ ವೃತ್ತ ನಿರ್ಮಾಣ ನಾಮಫಲಕ ಅಳವಡಿಕೆ ಮಾಡಿರುವ ಕುರಿತು ಇಸ್ಲಾಂಪುರದಲ್ಲಿ ವಿವಾದ ಉಂಟಾಗಿದ್ದು ಶಾಂತಿಯನ್ನು ಕಾಪಾಡಲು ತಾಲೂಕು ಆಡಳಿತ ಇಸ್ಲಾಂಪುರಕ್ಕೆ ಸೀಮಿತಗೊಳಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ 4 ಜನರಿಗೂ ಹೆಚ್ಚು ಜನ ಸೇರಿ  ಗುಂಪುಗೂಡಿ ತಿರುಗಾಡಬಾರದು ಯಾವುದೇ ಕಾರ್ಯಕ್ರಮಗಳನ್ನ ಪ್ರತಿಭಟನೆಯನ್ನು ಮಾಡದಂತೆ ಸೂಚನೆ ನೀಡಲಾಗಿದೆ .ಇಲ್ಲಿಯ ಪ್ರತಿಯೊಂದು ಘಟನೆಗಳನ್ನು ಜಿಲ್ಲಾಧಿಕಾರಿಗಳ ಜತೆ ಚರ್ಚೆ ಮಾಡಲಾಗಿದೆ ಎಂದು ತಹಸೀಲ್ದಾರ್ ಯು .ನಾಗರಾಜ ಉದಯವಾಣಿಗೆ ತಿಳಿಸಿದ್ದಾರೆ .

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.