![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Aug 22, 2019, 2:02 PM IST
ಕೊಪ್ಪಳ: ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆ ಮುರಿದು ಹಾನಿಯಾದ ಕೊಪ್ಪಳ ಜಿಲ್ಲೆ ಮುನಿರಾಬಾದ್ ಸೇರಿ ವಿವಿಧ ಪ್ರದೇಶಗಳಿಗೆ ಸಚಿವ ಸಿ ಸಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಡ್ಯಾಂ ನೀರು ತಾಲೂಕಿನ ಮುನಿರಾಬಾದ್ ಗ್ರಾಮಕ್ಕೆ ನುಗ್ಗಿ 140ಕ್ಕೂ ಹೆಚ್ಚು ಮನೆಗಳು ನೀರಿನಲ್ಲಿದ್ದವು. ಗ್ರಾಮದ ಜನರ ಜೊತೆ ಮಾತನಾಡಿದ ಸಚಿವರು ಈಗಾಗಲೆ ಸಿಎಂ ಅವರು ನೀರಿನಿಂದ ಹಾನಿಯಾದ ಮನೆಗಳ ಕುಟುಂಬಕ್ಕೆ 10 ಸಾವಿರ ರೂ ಬಿಡುಗಡೆ ಮಾಡಿದೆ. ಜನರು ಡ್ಯಾಂ ನೀರು ನುಗ್ಗಿದ್ದರಿಂದ ಕುಡಿಯುವ ನೀರಿನ ಪೈಪ್ ಲೈನ್ ಹಾಳಾಗಿದೆ. ನಮಗೆ ಕುಡಿಯಲು ನೀರಿಲ್ಲ ಎಂದು ಜನರು ಸಚಿವರ ಗಮನಕ್ಕೆ ತಂದರು.
ಇನ್ನೂ ಮನೆಗಳು ಹೆಚ್ಚಿನ ಪ್ರಮಾಣದ ಹಾನಿಯಾಗಿದೆ. ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಮಾಡಿದರು. ಅಲ್ಲದೇ, ನಮಗೆ ಹಕ್ಕುಪತ್ರ ನೀಡುವಂತೆ ಮನವಿ ಮಾಡಿದರು. ಮೊದಲು ಇಲ್ಲಿನ ಜನರ ಮನೆಗಳ ಹಾನಿಗೆ ಸರ್ಕಾರ ಪರಿಹಾರ ನೀಡಿದೆ. ಇನ್ನೂ ಮೂರು ದಿನದಲ್ಲಿ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಮುನಿರಾಬಾದ್ ನಲ್ಲಿ ಹಾನಿಯಾದ ಕುರಿತು ಕ್ರಿಯಾಯೋಜನೆ ಸಿದ್ದಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಡ್ಯಾಂ ನೀರಿನಿಂದ ಪಂಪಾವನ ಹಾನಿಯಾದ ಸ್ಥಳ ಪರಿಶೀಲನೆ ನಡೆಸಿದರು.
ಈ ವೇಳೆ ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ, ಹಾಲಪ್ಪ, ಬಸವರಾಜ ದಡೆಸೂಗೂರು, ರಾಘವೇಂದ್ರ ಹಿಟ್ನಾಳ ಸೇರಿ ಇತರರು ಇದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.