ಗ್ರಾಪಂ ಹಂತದಲ್ಲಿ ಕಾಳಜಿ ಕೇಂದ್ರ ­

ಶಾಲೆ-ಹಾಸ್ಟೆಲ್‌ನಲ್ಲಿ ಕೇರ್‌ ಸೆಂಟರ್‌­ ! ವಲಯವಾರು ಅಧಿಕಾರಿ ನೇಮಕ

Team Udayavani, May 18, 2021, 4:13 PM IST

17kpl-7a

ಕೊಪ್ಪಳ: ಜಿಲ್ಲಾಡಳಿತ ಗ್ರಾಪಂ ಹಂತದಲ್ಲಿ ಶಾಲೆ ಅಥವಾ ವಸತಿ ನಿಲಯದಲ್ಲಿ ಕೋವಿಡ್‌ ಕೇರ್‌ ಸೆಂಟರ್‌(ಕಾಳಜಿ ಕೇಂದ್ರ) ಆರಂಭಕ್ಕೆ ಸಿದ್ಧತೆ ಮಾಡಿದ್ದು, ಇದಕ್ಕೆ ವಲಯವಾರು ಅಧಿಕಾರಿಗಳನ್ನು ನೇಮಕ ಮಾಡಿದೆ.

ಹೋಂ ಐಸೋಲೇಷನ್‌ಗೆ ಒಳಗಾದವರನ್ನು ಈ ಕೇಂದ್ರದಲ್ಲಿ ಆರೈಕೆ ಮಾಡಲು ಯೋಜನೆ ಹಾಕಿಕೊಂಡಿದೆ. ಹೌದು. ಜಿಲ್ಲೆಯಲ್ಲಿ ನಿತ್ಯ 600-700 ಜನರಿಗೆ ಕೊರೊನಾ ಸೋಂಕು ದೃಢಪಡುತ್ತಿರುವುದು ಜಿಲ್ಲೆಯ ಜನರ ನೆಮ್ಮದಿ ಕೆಡಿಸಿದೆ. ಜಿಲ್ಲಾಡಳಿತಕ್ಕೂ ದೊಡ್ಡ ಸಮಸ್ಯೆಯಾಗಿದೆ. ಒಂದೆಡೆ ಜಿಲ್ಲೆಯಲ್ಲಿ ಸೋಂಕು ದೃಢಪಟ್ಟವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಲು ತೆರಳಿದರೆ ಬೆಡ್‌ ಸಿಗುತ್ತಿಲ್ಲ. ಯಾವುದೇ ಆಸ್ಪತ್ರೆಗೆ ತೆರಳಿದರೂ ಆಕ್ಸಿಜನ್‌ ಇಲ್ಲ. ವೆಂಟಿಲೇಟರ್‌ ಸಮಸ್ಯೆ, ಬೆಡ್‌ಗಳಿಲ್ಲ ಎನ್ನುವುದು ಸಾಮಾನ್ಯವಾಗಿದೆ.

ಇನ್ನೂ ಬಹುಪಾಲು ಜನರು ಆಸ್ಪತ್ರೆಯಲ್ಲಿನ ಅವ್ಯವಸ್ಥೆ ನೋಡಿ ಆಸ್ಪತ್ರೆಗಿಂತ ಮನೆಯಲ್ಲಿ ಇರುವುದು ಒಳಿತು ಎಂದು ಹೋಂ ಐಸೋಲೇಷನ್‌ಗೆ ಒಳಗಾಗುತ್ತಿದ್ದಾರೆ. ಕೆಲವೆಡೆ ಚಿಕ್ಕ ಚಿಕ್ಕ ಮನೆಗಳಲ್ಲಿ ನಾಲ್ಕೈದು ಜನರಿರುವ ಕುಟುಂಬ ಸದಸ್ಯನಿಗೆ ಸೋಂಕು ದೃಢಪಟ್ಟರೆ, ಅವರು ಹೋಮ್‌ ಐಸೋಲೇಷನ್‌ಗೆ ಒಳಗಾದಾಗ ಮನೆಯ ಇತರೆ ಸದಸ್ಯರಿಗೂ ಸೋಂಕು ತಗುಲುತ್ತಿದೆ. ಇದರಿಂದ ಹೋಮ್‌ ಐಸೋಲೇಷನ್‌ ಸರಿಯಾಗಿ ನಿರ್ವಹಣೆಯಾಗುತ್ತಿಲ್ಲ ಎನ್ನುವುದನ್ನು ಅರಿತು ಸರ್ಕಾರ ಕೋವಿಡ್‌ ಕೇರ್‌ ಸೆಂಟರ್‌ ಹೆಚ್ಚಿಸಬೇಕೆಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕಾಳಜಿ ಕೇಂದ್ರ ಅಥವಾ ಕೋವಿಡ್‌ ಕೇರ್‌ ಸೆಂಟರ್‌ ಆರಂಭಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

50ಕ್ಕೂ ಹೆಚ್ಚು ಕೇಂದ್ರ ಆರಂಭಕ್ಕೆ ಯೋಜನೆ: ಜಿಲ್ಲೆಯಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಅಥವಾ 2-3 ಗ್ರಾಪಂ ಸೇರಿ ಒಂದು ಕೋವಿಡ್‌ ಕೇರ್‌ ಸೆಂಟರ್‌/ ಕಾಳಜಿ ಕೇಂದ್ರ ಆರಂಭಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಜಿಲ್ಲಾದ್ಯಂತ 50ಕ್ಕೂ ಹೆಚ್ಚು ಕೇಂದ್ರ ಆರಂಭವಾಗುವ ಸಾಧ್ಯತೆಯಿದೆ. 40-50 ಜನರ ಸಾಮರ್ಥ್ಯದ ಕೇಂದ್ರ ಆರಂಭಕ್ಕೆ ಸಿದ್ಧತೆ ನಡೆದಿದೆ.

ಶಾಲೆ, ಹಾಸ್ಟೆಲ್‌ ವ್ಯವಸ್ಥೆ ಪರಿಶೀಲನೆ: ಆರೈಕೆ ಕೇಂದ್ರ ಆರಂಭಿಸುವ ಕುರಿತಂತೆ ಜಿಲ್ಲಾದ್ಯಂತ ಆಯಾ ಗ್ರಾಪಂ ವ್ಯಾಪ್ತಿಯ ಸರ್ಕಾರಿ ಶಾಲೆ ಹಾಗೂ ವಸತಿ ನಿಲಯಗಳನ್ನು ಪರಿಶೀಲನೆ ಮಾಡಲಾಗಿದೆ. ಅಲ್ಲಿ ಕುಡಿಯುವ ನೀರು, ಕಟ್ಟಡದ ಸ್ಥಿತಿಗತಿ, ಶೌಚಾಲಯ, ಗಾಳಿ, ಬೆಳಕಿನ ವ್ಯವಸ್ಥೆ, ಸಂಚಾರಕ್ಕೆ ಸುಲಭ ವ್ಯವಸ್ಥೆ ಸೇರಿದಂತೆ ವಿದ್ಯುತ್‌ ಸೌಲಭ್ಯ ಹಾಗೂ ಅಗತ್ಯ ಮೂಲ ಸೌಕರ್ಯಗಳ ಕುರಿತು ಪರಿಶೀಲಿಸಲಾಗಿದೆ. ಬೇಕು ಬೇಡಿಕೆಗಳ ಕುರಿತು ಪಟ್ಟಿಯನ್ನೂ ಮಾಡಲಾಗಿದೆ. ವಲಯವಾರು ಅಧಿಕಾರಿಗಳನ್ನೂ ನೇಮಕ ಮಾಡಲಾಗಿದೆ. ಈಗಾಗಲೇ ಅವರು ಶಾಲೆ, ಹಾಸ್ಟೆಲ್‌ ಪರಿಶೀಲನೆ ನಡೆಸಿದ್ದು, ಆಯಾ ತಾಲೂಕಿನ ತಹಶೀಲ್ದಾರ್‌ ನೇತೃತ್ವದಲ್ಲಿ ಸಭೆ ನಡೆದಿವೆ.

ಒಟ್ಟಿನಲ್ಲಿ ಜಿಲ್ಲಾಡಳಿತ ಸೋಂಕು ನಿಯಂತ್ರಣಕ್ಕೆ ಆಯಾ ಗ್ರಾಪಂ ವ್ಯಾಪ್ತಿಯಲ್ಲಿಯೇ ಆರೈಕೆ ಕೇಂದ್ರ ಆರಂಭಕ್ಕೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.