![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 28, 2020, 11:32 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಗಂಗಾವತಿ: ಕೊವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ತಾಲ್ಲೂಕಿನ ಜಂಗ್ಲಿ ರಂಗಾಪೂರದಲ್ಲಿರುವ ಜಂಗಲ್ ಟ್ರೀ ರೆಸಾರ್ಟ್ ಮಾಲೀಕರು ಅಕ್ರಮವಾಗಿ ರೆಸಾರ್ಟ್ ಆರಂಭಿಸಿ ಸಿಂಧನೂರು ಮೂಲದ ಮೂರು ಜನರಿಗೆ ರೂಂಗಳನ್ನು ಬಾಡಿಗೆ ನೀಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ತಹಸೀಲ್ದಾರ್ ಎಲ್. ಡಿ. ಚಂದ್ರಕಾಂತ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ.
ಕೋವಿಡ್ ವೈರಸ್ ಹರಡದಂತೆ ಜಿಲ್ಲಾಡಳಿತ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕರ್ಫ್ಯೂ ವಿಧಿಸಿ ಹೊಟೆಲ್ ರೆಸಾರ್ಟ್ ಬಂದ್ ಮಾಡಲು ಡಂಗೂರ ಹಾಕಿದರೂ ಜಂಗ್ಲಿ ರಂಗಾಪೂರ ಗ್ರಾಮದ ಜಂಗಲ್ ಟ್ರಿ ರೆಸಾರ್ಟ್ ಮೇ.25 ರಂದು ಅಕ್ರಮವಾಗಿ ರೆಸಾರ್ಟ್ ಆರಂಭ ಮಾಡಿ ಸಿಂಧನೂರು ಮೂಲದ ಮೂರು ಜನರಿಗೆ ರೂಂ ಬಾಡಿಗೆ ನೀಡಿದ್ದರು.
ಕೋವಿಡ್ ಹರಡುವ ಭೀತಿಯಿಂದ ಗ್ರಾಮಸ್ಥರು ಪ್ರತಿಭಟನೆ ಮಾಡಿದಾಗ ರೂಂನಲ್ಲಿದ್ದವರನ್ನು ಖಾಲಿ ಮಾಡಿಸಲಾಗಿದೆ ಎಂದು ರೆಸಾರ್ಟ್ ಮಾಲೀಕ ಶಿವಸಾಗರ ನಾಯಕ ಒಪ್ಪಿಕೊಂಡಿದ್ದು ಇವರ ವಿರುದ್ಧ ಐಪಿಸಿ 269 ಮತ್ತು270 ಅನ್ವಯ ದೂರು ದಾಖಲಿಸುವಂತೆ ತಹಸೀಲ್ದಾರ್ ನೀಡಿದ ದೂರಿನ ಅನ್ವಯ ಕೇಸ್ ದಾಖಲಾಗಿದೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.