ವಿಶ್ವದ ಸರ್ವಾಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳೇ ನಿರಂತರವಾಗಿ ಹೋರಾಟ ನಡೆಸಿದ್ದಾರೆ


Team Udayavani, Jul 25, 2022, 7:03 PM IST

tdy-17

ಗಂಗಾವತಿ: ವಿಶ್ವದಲ್ಲಿ ಇತಿಹಾಸವನ್ನು ಗಮನಿಸಿದರೆ ಸರ್ವಾಧಿಕಾರಿಗಳ ಧೋರಣೆಗಳ ವಿರುದ್ಧ  ಮುಂಚೂಣಿಯಲ್ಲಿ ನಿಂತು ವಿದ್ಯಾರ್ಥಿಗಳ ಸಂಘಟನೆಗಳೇ ಹೋರಾಟ ನಡೆಸಿ ನಿರಂಕುಶ ಪ್ರಭುತ್ವಗಳನ್ನು ಕೊನೆಗಾಣಿಸಿವೆ. ಭಾರತದಲ್ಲಿ ಪ್ರಸ್ತುತ ಜನ ವಿರೋಧಿ ಪ್ಯಾಸಿಸ್ಟ್ ಸರಕಾರದ ವಿರುದ್ಧ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮತ್ತು ಯುವ ಸಮೂಹ  ಹೋರಾಟ ನಡೆಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ರಾಜ್ಯಾಧ್ಯಕ್ಷ ಹತಾವುಲ್ಲಾ ಪುಂಜಲ್ ಕಟ್ಟೆ ಹೇಳಿದರು.

ಅವರು ಕರ್ನೂಲ್ ಬಾಬಾ ದರ್ಗಾ ಆವರಣದಲ್ಲಿ ಆಯೋಜಿಸಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಸದಸ್ಯತ್ವ ಅಭಿಯಾನ  ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.

ನಮ್ಮ ದೇಶದ ಇತಿಹಾಸವನ್ನು ಗಮನಿಸಿದರೆ ಪ್ರಭುತ್ವದ ದಮನಕಾರಿ ನೀತಿಗಳ ವಿರುದ್ಧವೂ ವಿದ್ಯಾರ್ಥಿ ಮತ್ತು ಯುವ ಸಮೂಹ ಹೋರಾಟ ನಡೆಸಿ ಯಶಸ್ವಿಯಾಗಿದೆ. 2014 ರಿಂದ  ಸಂವಿಧಾನ ಆಶಯಗಳಿಗೆ ಮಾರಕವಾಗುವಂತಹ ಆಡಳಿತ ಜಾರಿಯಲ್ಲಿದ್ದು ಪ್ರಜಾಪ್ರಭುತ್ವ ಸಂವಿಧಾನ ಬದ್ಧವಾಗಿ ಜನಪರ  ಹೋರಾಟ ನಡೆಸುವವರನ್ನು ಜೈಲಿನಲ್ಲಿರಿಸಲಾಗಿದೆ. ಸಂವಿಧಾನದ ಆಶಯಗಳನ್ನು ಉಳಿಸಲು ದೇಶದ ಸಮಗ್ರತೆ ಉಳಿವಿಗಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದೇಶದಾದ್ಯಂತ ವಿದ್ಯಾರ್ಥಿ ಸಂಘಟನೆಯ ಮೂಲಕ ಕಾರ್ಯ ಮಾಡಲಾಗುತ್ತಿದೆ ಎಂದರು.

ಸಂಘಟನೆಯ ರಾಜ್ಯ ಮುಖಂಡ ಸರ್ಫರಾಜ್ ಮಾತನಾಡಿ, ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಪಕ್ಷಗಳು ಶೈಕ್ಷಣಿಕವಾಗಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇತ್ತೀಚೆಗೆ ಪಿಎಸ್‌ಐ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಠಾಚಾರ ನಡೆದಿದೆ. ಬರೀ ಅಧಿಕಾರಿಗಳು ಬಂಧನವಾಗಿದ್ದು ಇದರಲ್ಲಿ ಪಾಲ್ಗೊಂಡಿರುವ ಜನಪ್ರತಿನಿಧಿಗಳನ್ನು ಬಂಧಿಸಬೇಕು. ಉತ್ತರ ಕರ್ನಾಟಕ ಸೇರಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಇದುವರೆಗೂ ಆಡಳಿತ ನಡೆಸಿದ ಸರಕಾರಗಳು ಅನ್ಯಾಯ ಮಾಡಿವೆ. ಹೆಸರಿಗೆ ಮಾತ್ರ ಕಲಂ 371(ಜೆ) ಕೊಟ್ಟಿದ್ದು ಪರಿಣಾಮಕಾರಿ ಅನುಷ್ಠಾನವಾಗುತ್ತಿಲ್ಲ. ಎಲ್ಲಾ ಸಮಸ್ಯೆಗಳ ಕುರಿತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳನ್ನು ಸಂಘಟಿಸುವ ಕಾರ್ಯ ಮಾಡುತ್ತಿದೆ ಎಂದರು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ರಾಜ್ಯ ಮುಖಂಡರಾದ ಅನೀಸ್ ಕುಂಬ್ರಾ, ಸರ್ಫರಾಜ್, ಚಾಂದ ಸಲ್ಮಾನ್, ನಾಸೀರಾ, ಅತೀಕುರ್ ರಹೆಮಾನ್ ಸೇರಿ ಅನೇಕರಿದ್ದರು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ 2022-23 ರ ಸದಸ್ಯತ್ವ ಅಭಿಯಾನದ ನಿಮಿತ್ತ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ರ‍್ಯಾಲಿ ನಡೆಸುವ ಸಂದರ್ಭದಲ್ಲಿ  ಕೇಂದ್ರ-ರಾಜ್ಯ ಸರಕಾರಗಳ ವಿರುದ್ಧ ವಿವಿಧ ಭ್ರಷ್ಠಾಚಾರ ನಡೆದಿರುವುದು ಹಾಗೂ ಪಿಎಸ್‌ಐ ಹಗರಣ ಮತ್ತು ಸಂವಿಧಾನ ಪ್ರಜಾಪ್ರಭುತ್ವ ಉಳಿಸಿ ಎಂದು ಬರೆಯಲಾಗಿದ್ದ ಪ್ಲೇ ಕಾರ್ಡ್ ಪ್ರದರ್ಶನಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿದಾಗ ಸಂಘಟಕರು ಮತ್ತು ಪಿಐ ಟಿ.ವೆಂಕಟಸ್ವಾಮಿ ಮಧ್ಯೆ ವಾಗ್ವಾದ ಜರುಗಿತು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.