![2](https://www.udayavani.com/wp-content/uploads/2024/06/2-21-415x249.jpg)
Koppal: ಮಹಿಳೆಯ ಸರ ಕಸಿದು ಪರಾರಿಯಾದ ಕಳ್ಳರು
Team Udayavani, Jun 19, 2024, 11:01 AM IST
![1](https://www.udayavani.com/wp-content/uploads/2024/06/1-13-620x372.jpg)
ಕೊಪ್ಪಳ: ಒಂಟಿ ಮಹಿಳೆಯೊಬ್ಬರ ಸರ ಕಳ್ಳತನವಾಗಿರುವ ಘಟನೆ ಕೊಪ್ಪಳ ನಗರದ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ.
ಕಳೆದ ಕೆಲ ದಿನಗಳಿಂದ ಕೊಪ್ಪಳ ನಗರದಲ್ಲಿ ಹೆಚ್ಚಾದ ಸರಗಳ್ಳರ ಹಾವಳಿ ಹೆಚ್ಚಾಗಿದೆ. ಒಂಟಿಯಾಗಿ ಇರುವ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನ ಮಾಡಲಾಗುತ್ತಿದೆ
ಕೊಪ್ಪಳ ನಗರದ ಟೀಚರ್ಸ್ ಕಾಲೋನಿಯಲ್ಲಿ ಮತ್ತೊಂದು ಸರಗಳ್ಳತನವಾಗಿದೆ. ಮಂಜುಳಾ ಹಿರೇಮಠ ಎನ್ನುವ ಮಹಿಳೆ ಕತ್ತಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕಳ್ಳರು ಪರಾರಿ ಆಗಿದ್ದಾರೆ.
ಮಂಜುಳ ಮನೆಮುಂದೆ ನಿಂತಿದ್ದ ವೇಳೆ ಬೈಕ್ ನಲ್ಲಿದ್ದ ಕಳ್ಳರು ಅವರ ಕತ್ತಿನಲ್ಲಿದ್ದ ಐವತ್ತು ಗ್ರಾಮ್ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಂಡು ಹೋಗಿದ್ದಾರೆ.
ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
![2](https://www.udayavani.com/wp-content/uploads/2024/06/2-21-415x249.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.