![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 15, 2022, 9:44 AM IST
ಗಂಗಾವತಿ: ನಗರದ ಹೊರವಲಯದ ಐಟಿಐ ಕಾಲೇಜು ಹಿಂಭಾಗದ ಗುಡ್ಡಪ್ರದೇಶದಲ್ಲಿ ಗುರುವಾರ ಬೆಳ್ಳಂಬೆಳ್ಳಿಗ್ಗೆ ವಾಕಿಂಗ್ ಗೆ ತೆರಳಿದವರಿಗೆ ಚಿರತೆಗಳು ಪ್ರತ್ಯಕ್ಷವಾಗಿದ್ದು, ಐಟಿಐ ಕಾಲೇಜು ರಸ್ತೆಯಲ್ಲಿ ವಾಕಿಂಗ್ ಗೆ ತೆರಳುವವರು ಆತಂಕಗೊಂಡಿದ್ದಾರೆ.
ಐಟಿಐ ಕಾಲೇಜು ಹಿಂಭಾಗದ ಗುಡ್ಡ, ಸಿದ್ದಿಕೇರಿ, ಸೂರ್ಯನಾಯಕನ ತಾಂಡ, ವಾಣೀಭದ್ರೇಶ್ವರ ಗುಡ್ಡ ಸೇರಿದಂತೆ ಇಲ್ಲಿ ಗುಡ್ಡ ಬೆಟ್ಟಗಳಲ್ಲಿ ಚಿರತೆಗಳು ಕಂಡುಬಂದಿದ್ದು, ಕೆಲ ಗ್ರಾಮಗಳಲ್ಲಿ ಜನಜಾನುವಾರುಗಳ ಮೇಲೆ ದಾಂಧಲೆ ನಡೆಸಿವೆ.
ಅರಣ್ಯ ಇಲಾಖೆ ಚಿರತೆ ಮತ್ತು ಕರಡಿಗಳನ್ನು ಸೆರೆ ಹಿಡಿಯಲು ಬೋನ್ ಗಳನ್ನು ಇರಿಸಿದ್ದು, ಕಳೆದ ವಾರ ಉಡುಮಕಲ್ ಗಡ್ಡಿ ಗ್ರಾಮದ ಹೊರಗೆ ಇರಿಸಿದ್ದ ಬೋನ್ ಗೆ ಚಿರತೆ ಬಿದ್ದಿತ್ತು. ಇದೀಗ ಸಂಗಾಪೂರ ಮತ್ತು ಅಂಜನಾದ್ರಿ, ಪಂಪಾಸರೋವರ ಭಾಗದಲ್ಲಿ ಚಿರತೆಗಳು ಹಗಲಿನಲ್ಲಿಯೇ ಪ್ರತ್ಯಕ್ಷವಾಗಿ ಜನರಿಗೆ ಆತಂಕ ಉಂಟು ಮಾಡಿವೆ.
ಅರಣ್ಯ ಇಲಾಖೆ ವೈಜ್ಞಾನಿಕ ತಂತ್ರಗಳನ್ನು ಬಳಸಿ ಕಾಡು ಪ್ರಾಣಿಗಳಿಂದ ಜನ-ಜಾನುವಾರುಗಳಿಗೆ ರಕ್ಷಣೆ ನೀಡಬೇಕೆಂದು ಗುರುವಾರ ಬೆಳ್ಳಿಗ್ಗೆ ಗುಡ್ಡದ ಬಂಡೆಯ ಮೇಲೆ ಮಲಗಿದ್ದ ಚಿರತೆಯನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದ ವಿರೇಶ ಆರತಿ ಎಂಬವರು ಒತ್ತಾಯಿಸಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.