ವರ್ಷಾಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಿ

ಕೆಕೆಆರ್‌ಡಿಬಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

Team Udayavani, Apr 28, 2022, 12:44 PM IST

10

ಕೊಪ್ಪಳ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೈಕ್ರೋ ಮತ್ತು ಮ್ಯಾಕ್ರೋ ಯೋಜನೆಯಲ್ಲಿ ಕ್ರಿಯಾ ಯೋಜನೆಯಡಿ ಅನುಮೋದನೆಗೊಂಡ ಎಲ್ಲ ಕಾಮಗಾರಿಗಳು ಡಿಸೆಂಬರ್‌ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಆರ್‌. ವೆಂಕಟೇಶ ಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅನುಮೋದನೆಗೊಂಡ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾಮಗಾರಿಗೆ ಆಡಳಿತಾತ್ಮಕ ಹಾಗೂ ಕ್ರಿಯಾ ಯೋಜನೆ ಅನುಮೋದನೆ ನಂತರ ಎರಡು ವರ್ಷಗಳಲ್ಲಿ ಕಾಮಗಾರಿ ಆರಂಭವಾಗದಿದ್ದರೆ, ಆ ಕಾಮಗಾರಿ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ. ಅದರಂತೆ ಜಿಲ್ಲೆಯಲ್ಲಿ ಅನುಮೋದನೆ ನಂತರವೂ ಇನ್ನೂ ಆರಂಭವಾಗದ, ಅನಗತ್ಯ ವಿಳಂಬವಾದ ಕಾಮಗಾರಿಗಳನ್ನು ಮಂಡಳಿಯಿಂದ ರದ್ದುಪಡಿಸಲು ಕ್ರಮ ವಹಿಸಲಾಗುವುದು. ಕಾಮಗಾರಿ ಆರಂಭವಾಗಿ ಎರಡು ವರ್ಷ ಕಳೆದರೂ ಪೂರ್ಣಗೊಳ್ಳದಿದ್ದರೆ ಅಂತಹ ಕಾಮಗಾರಿಯನ್ನು ಮಂಡಳಿಯಿಂದ ಬ್ಲಾಕ್‌ ಮಾಡಲಾಗುವುದು ಅಥವಾ ದಂಡ ವಿಧಿಸಲಾಗುವುದು. ದಂಡ ವಿಧಿಸಿದರೆ ಕಾಮಗಾರಿಗೆ ನಿಗದಿಪಡಿಸಿದ ಅನುದಾನದಲ್ಲಿ ನಿರ್ದಿಷ್ಟ ಮೊತ್ತ ಕಡಿತಗೊಳಿಸಲಾಗುವುದು. ಕಾಮಗಾರಿಯನ್ನು ಬ್ಲಾಕ್‌ ಮಾಡಿದರೆ ಕಾಮಗಾರಿ ಪೂರ್ಣಗೊಳಿಸಲು ನಂತರದಲ್ಲಿ ಬೇಕಾದ ಅನುದಾನವನ್ನು ಸಂಬಂಧಿಸಿದ ಇಲಾಖೆಯಿಂದಲೇ ಭರಿಸಬೇಕು. ಇವೆರಡೂ ಸಂಭವಿಸಬಾರದು ಎಂದಾದರೆ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ. ಸಾರ್ವಜನಿಕರ ಹಣವನ್ನು ವ್ಯರ್ಥ ಮಾಡಬೇಡಿ ಎಂದರು.

2021-22ನೇ ಸಾಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ. ಅಂತಿಮ ಕ್ರಿಯಾ ಯೋಜನೆ ಅನುಮೋದನೆಗೊಂಡ ನಂತರ 15 ದಿನಗಳ ಕಾಲವಕಾಶ ನೀಡಲಾಗುತ್ತದೆ. ಈ ಅವ ಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಿರುವ ಎಲ್ಲ ಅಂಶಗಳು ಪೂರಕವಾಗಿರುವ ಬಗ್ಗೆ ಅಥವಾ ಕಾಮಗಾರಿಗೆ ಅಡಚಣೆ ಉಂಟು ಮಾಡಬಲ್ಲ ಅಂಶಗಳ ಬಗ್ಗೆ ಪರಿಶೀಲಿಸಿ, ಸ್ಥಳೀಯ ಜನಪ್ರತಿನಿಧಿ ಗಳೊಂದಿಗೆ ಚರ್ಚಿಸಿ, ಬದಲಿ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಬಹುದು. 15 ದಿನಗಳ ನಂತರ ಬರುವ ಬದಲಿ ಕಾಮಗಾರಿ ಕುರಿತ ಯಾವುದೇ ಪ್ರಸ್ತಾವನೆಗಳನ್ನು ಪರಿಗಣಿಸಲ್ಲ. ಈ ವರ್ಷದಿಂದಲೇ ಈ ನಿಯಮ ಜಾರಿಗೆ ಬರುತ್ತಿದ್ದು, ಕೆಲಸದ ಆದೇಶ(ವರ್ಕ್‌ ಆರ್ಡರ್‌)ದ ದಿನಾಂಕದಿಂದ ಕಾಮಗಾರಿ ಪೂರ್ಣಗೊಳಿಸಲು ನಿಗದಿಪಡಿಸಿದ ದಿನಾಂಕದೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕು. ಅನುಷ್ಠಾನ ಏಜೆನ್ಸಿಗಳಿಗೆ ಹೆಚ್ಚು ಕಾಮಗಾರಿಗಳಿದ್ದರೆ, ತಮ್ಮಿಂದ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲದಿದ್ದರೆ ಡಿಸಿ ಅಥವಾ ಜಿಪಂ ಸಿಇಒಗೆ ಮನವಿ ಸಲ್ಲಿಸಬಹುದು. ಆದರೆ ಯಾವುದೇ ಕಾರಣಕ್ಕೂ ಅನಗತ್ಯ ವಿಳಂಬ, ಕಳಪೆ ಕಾಮಗಾರಿ ಮಾಡುವಂತಿಲ್ಲ ಎಂದು ಅವರು ಅನುಷ್ಠಾನ ಏಜೆನ್ಸಿಗಳಿಗೆ ಸೂಚಿಸಿದರು.

ಮಂಡಳಿಯಿಂದ ಬಿಡುಗಡೆಯಾದ ಅನುದಾನವನ್ನು ನಿಗದಿತ ಅವಧಿ ಯಲ್ಲಿ ಸಮರ್ಪಕವಾಗಿ ಬಳಸಿ ಮಂಡಳಿಯ ನಿರ್ದೇಶನಗಳನ್ನು ಗಂಭೀರವಾಗಿ ಪರಿಗಣಿಸಿ. ಕಾಮಗಾರಿಯ ವಿವರಗಳನ್ನು ಮಂಡಳಿಯ ವೆಬ್‌ ಸೈಟ್‌ನಲ್ಲಿ ಕಡ್ಡಾಯವಾಗಿ ಪ್ರಕಟಿಸಿ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌, ಜಿಪಂ ಸಿಇಒ ಬಿ ಫೌಜಿಯಾ ತರನ್ನುಮ್‌, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ನಿರ್ದೇಶಕ ಸೂರ್ಯಕಾಂತ ನಾವಿ, ಹಣಕಾಸು ನಿಯಂತ್ರಕ ರಾಮಣ್ಣ ಅಥಣಿ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಅನುಷ್ಠಾನ ಏಜೆನ್ಸಿಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.