Congress ಭಿನ್ನಮತ ಸ್ಫೋಟ: ಅನ್ಸಾರಿಯನ್ನು ಹೊರ ಹಾಕುವಂತೆ ಶ್ರೀನಾಥ ಆಗ್ರಹ

ತಂಗಡಗಿಯವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಒತ್ತಾಯ

Team Udayavani, Apr 8, 2024, 8:44 PM IST

1-wqeqweqwe

ಗಂಗಾವತಿ: ಕೈ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಅವರನ್ನು ಸೋಲಿಸಲು ಅಂತರಿಕವಾಗಿ ಬಿಜೆಪಿ ಜತೆ ಒಪ್ಪಂದ ಮಾಡಿಕೊಂಡು,ಕಾಂಗ್ರೆಸ್ ಹಿರಿಯ ಮುಖಂಡರ ವಿರುದ್ಧ ಬಾಯಿಗೆ ಬಂದ ಹಾಗೆ ಟೀಕೆ ಮಾಡಿ ಪಕ್ಷ ಹಾಗೂ ಕೈ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಇಮೇಜ್ ಹಾಳು ಮಾಡುತ್ತಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಯನ್ನು ಕೂಡಲೇ ಕಾಂಗ್ರೆಸ್ ನಿಂದ ಉಚ್ಛಾಟಿಸುವಂತೆ ಮಾಜಿ ಎಂಎಲ್ಸಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್.ಶ್ರೀನಾಥ ಕೆಪಿಸಿಸಿ ರಾಜ್ಯಾಧ್ಯಕ್ಷರನ್ನು ಒತ್ತಾಯಿಸಿದ್ದಾರೆ.

ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಅನ್ಸಾರಿ ನಿವಾಸದಲ್ಲಿ ಇತ್ತೀಚಿಗೆ ಜರುಗಿದ ಕಾಂಗ್ರೆಸ್ ಸಭೆ ಅದು ಅನ್ಸಾರಿ ಸ್ವಾರ್ಥಕ್ಕಾಗಿ ಮಾಡಿದ ಸಭೆಯಾಗಿತ್ತು.ವೇದಿಕೆಯಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್ ತಂಗಡಗಿಯವರು ಅನ್ಸಾರಿ ಮಾತಿಗೆ ವಿರೋಧ ವ್ಯಕ್ತಪಡಿಸದೇ ಇರುವುದಯ ಸರಿಯಲ್ಲ.ಮಾಜಿ ಸಂಸದ ಎಚ್.ಜಿ.ರಾಮುಲು,ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ ಸೇರಿ ಹಲವರನ್ನು ಅನ್ಸಾರಿ ಬಹಳ ಕೆಟ್ಟ ಶಬ್ದಗಳ ಮೂಲಕ ಟೀಕೆ ಮಾಡಿದ್ದಾರೆ.ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಮತಯಾಚನೆ ಮಾಡದೇ ಸ್ವ ಪಕ್ಷದವರನ್ನು ಬೈಯಲು ಅನ್ಸಾರಿ ಕಾಂಗ್ರೆಸ್ ವೇದಿಕೆಯನ್ನು ಬಳಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಸರಕಾರ ರಾಜ್ಯದಲ್ಲಿದ್ದು ಸರಕಾರದ ಯೋಜನೆಗಳನ್ನು ಮುಂದಿಟ್ಟುಕೊಂಡು ಮತದಾರರ ಹತ್ತಿರ ಮತ ಕೇಳದೆ ಹಳೆಯ ಪುರಾಣ ಹೇಳುವ ಮೂಲಕ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ. ನನಗೆ ಅನ್ಸಾರಿ ಜತೆ ಯಾವುದೇ ದ್ವೇಷ ಇಲ್ಲ. ನಮ್ಮ ಮನೆಯಲ್ಲಿ ಬೆಳೆದ ವ್ಯಕ್ತಿ ಈಗ ವಯಸ್ಸನ್ನು ಲೆಕ್ಕಿಸದೇ ನಮ್ಮ ತಂದೆ ಎಚ್.ಜಿ.ರಾಮುಲು ಅವರನ್ನು ಟೀಕೆ ಮಾಡುವುದು ಸರಿಯಲ್ಲ.ಮೊದಲು ಲೋಕಸಭಾ ಚುನಾವಣೆಯಲ್ಲಿ ಕೈ ಅಭ್ಯರ್ಥಿಯನ್ನು ಗೆಲ್ಲಿಸಿ ಮೇ 07 ನಂತರ ಪರಸ್ಪರ ಟೀಕೆ ಮಾಡೋಣ. ಕೈ ನಾಯಕರನ್ನು ಟೀಕೆ ಮಾಡಿ ಸಮಯ ಕಳೆದು ಕೈ ಅಭ್ಯರ್ಥಿಯನ್ನು ಸೋಲಿಸುವ ಅನ್ಸಾರಿ ಷಡ್ಯಂತ್ರ ಕಾಂಗ್ರೆಸ್ ಕಾರ್ಯಕರ್ತರಿಗೆ ಅರ್ಥವಾಗಿದೆ ಎಂದು ಕಿಡಿ ಕಾರಿದರು.

ತಂಗಡಗಿ ವಿಫಲ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು,ಮಲ್ಲಿಕಾರ್ಜುನ ನಾಗಪ್ಪ ಹಾಗೂ ಇಕ್ಬಾಲ್ ಅನ್ಸಾರಿ ಮೂರು ಜನ ಟಿಕೆಟ್ ಆಕಾಂಕ್ಷಿಗಳಾಗಿದ್ದೇವು ಅದೃಷ್ಟ ಅನ್ಸಾರಿಗೆ ಟಿಕೆಟ್ ದೊರಕಿತು. ಟಿಕೆಟ್ ಪಡೆದ ಅನ್ಸಾರಿ ಪ್ರಚಾರ ಹಾಗೂ ಪಕ್ಷದ ಕಾರ್ಯಕ್ರಮಗಳಿಗೆ ನಮ್ಮನ್ನು ಕರೆದಿಲ್ಲ. ನನ್ನನ್ನು ಹೊಸಪೇಟೆ ಕ್ಷೇತ್ರಕ್ಕೆ ಉಸ್ತುವಾರಿ ಹಾಕಿದ್ದರಿಂದ ಅಲ್ಲಿಗೆ ತೆರಳಿ ಗವಿಯಪ್ಪನವರ ಪರವಾಗಿ ಪ್ರಚಾರ ಮಾಡಿದೆ. ನಮ್ಮನ್ನು ಅನ್ಸಾರಿ ಆ ಜನ್ಮ ವೈರಿಗಳೆಂದು ಬೈಯುತ್ತಿದ್ದಾರೆ.ನಾನು ಎಂದಿಗೂ ಅನ್ಸಾರಿಯನ್ನು ಶತ್ರು ಎಂದು ಟೀಕೆ ಮಾಡುವುದಿಲ್ಲ. ಈಗಲೂ ಜತೆಯಾಗಿ ಕೆಲಸ ಮಾಡಲು ನಾವು ಸಿದ್ಧವಾಗಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಿವರಾಜ್ ತಂಗಡಗಿ ವಿಫಲರಾಗಿದ್ದು ರಾಯರೆಡ್ಡಿ ಅಥವಾ ಕೆ.ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ನೀಡುವಂತೆ ಲೋಕಸಭಾ ಚುನಾವಣೆ ನಂತರ ಒತ್ತಾಯಿಸಲಾಗುತ್ತದೆ ಎಂದರು.

ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತವಾಗಿದೆ. ಪಕ್ಷ ಸಂಘಟನೆಯ ಮೂಲಕ ಚುನಾವಣೆಯಲ್ಲಿ ಭರ್ಜರಿ ಗೆಲುವು ಪಡೆಯಲಾಗುತ್ತದೆ ಎಂದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ, ಸರ್ವೇಶ ವಸ್ತ್ರದ್,ಅರಸಿನಕೇರಿ ಹನುಮಂತಪ್ಪ,ಶಾಮೀದ್ ಮನಿಯಾರ್,ರಾಜಶೇಖರ ಮುಸ್ಟೂರು,ಚೆಗೂರು ಹನುಮಂತಪ್ಪ, ಬಿ.ಕೃಷ್ಣಪ್ಪ‌ಕೋಡಿ ನಾಗೇಶ,ಸಿದ್ದಯ್ಯ ಗುರುವಿನ್, ಸೋಮನಾಥ ಪಟ್ಟಣಶೆಟ್ಟಿ,ಸಂದೀಪ, ಅಯೂಬ್,ರಮೇಶ ಗೌಳಿ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.