ವಿದೇಶಿ ಪ್ರವಾಸಿಗರಿಂದ ಕೊರೊನಾ ಭೀತಿ


Team Udayavani, Feb 5, 2020, 3:50 PM IST

kopala-tdy-1

ಸಾಂಧರ್ಬಿಕ ಚಿತ್ರ

ಗಂಗಾವತಿ: ಚೀನಾ ದೇಶದಲ್ಲಿ ಮರಣ ಮೃದಂಗ ಆಟವಾಡುತ್ತಿರುವ ಕೊರೊನಾ ವೈರಸ್‌ ಬಗ್ಗೆ ತಾಲೂಕಿನ ಪ್ರವಾಸಿ ತಾಣಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಚೀನಾ ಸೇರಿದಂತೆ ವಿವಿಧ ದೇಶಗಳ ಪ್ರವಾಸಿಗರು ಸಮೀಪದ ಹಂಪಿ, ವಿರುಪಾಪುರಗಡ್ಡಿ ಭೇಟಿ ನೀಡುವುದರಿಂದ ಸಹಜವಾಗಿಯೇ ಸ್ಥಳೀಯರಲ್ಲಿ ಕೊರೊನಾ ಭೀತಿ ಆವರಿಸಿದೆ.

ತಾಲೂಕಿನ ವಿರೂಪಾಪುರಗಡ್ಡಿ, ಕಿಷ್ಕಿಂದಾ ಪ್ರದೇಶಕ್ಕೆ ಚೀನಾ ದೇಶ ಸೇರಿದಂತೆ ವಿದೇಶಗಳಿಂದ ಪ್ರತಿ ದಿನ ನೂರಾರು ವಿದೇಶಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇವರಲ್ಲಿ ಯಾರಿಗೆ ಕೊರೊನಾ ಸೋಂಕು ಇದೆ ಎಂದು ತಿಳಿಯುತ್ತಿಲ್ಲ. ಸ್ಥಳೀಯ ರೆಸಾರ್ಟ್‌ಗಳಲ್ಲಿ ವಿದೇಶಿ ಪ್ರವಾಸಿಗರು ವಾರಗಟ್ಟಲೇ ವಾಸ ಮಾಡುವುದರಿಂದ ವಿದೇಶಿಗರಿಂದ ಕೆರೊನಾ ಜ್ವರ ಹರಡುವ ಭೀತಿಯಲ್ಲಿ ಸ್ಥಳೀಯರಲ್ಲಿದ್ದು, ರೋಗದ ಕುರಿತು ಜನಜಾಗೃತಿ ಮೂಡಿಸಬೇಕಿದೆ. ಪ್ರತಿ ವರ್ಷ ನವೆಂಬರ್‌-ಏಪ್ರೀಲ್‌ ತಿಂಗಳ ವರೆಗೆ ಚೀನಾ, ಜಪಾನ್‌ ಇಂಡೋನೇಷಿಯಾ, ಯುರೋಪ್‌, ಬ್ರಿಟನ್‌, ಇಸ್ರೇಲ್‌ ಸೇರಿ ವಿಶ್ವದ ವಿವಿಧ ದೇಶಗಳಿಂದ ಹಂಪಿ- ವಿರೂಪಾಪುರಗಡ್ಡಿ, ಕಿಷ್ಕಿಂದಾ ಪ್ರದೇಶ ವೀಕ್ಷಣೆಗೆ ಸಾವಿರಾರು ವಿದೇಶಿಗರು ಆಗಮಿಸುತ್ತಾರೆ.

ಈ ಭಾರಿ ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೊನಾ ನೆಗಡಿ ಜ್ವರ ಹರಡಿದ್ದು, ಅಲ್ಲಿಂದ ಆಗಮಿಸಿರುವ ಪ್ರವಾಸಿಗರಿಂದ ಸ್ಥಳೀಯರಿಗೆ ಈ ಜ್ವರ ಹರಡುವ ಆತಂಕ ಇರುವುದರಿಂದ ಕೂಡಲೇ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಹಂಪಿ-ವಿರೂಪಾಪುರಗಡ್ಡಿ, ಕಿಷ್ಕಿಂದಾ ಅಂಜನಾದ್ರಿ, ಆನೆಗೊಂದಿ, ಹನುಮನಹಳ್ಳಿ ಸೇರಿ ಸುತ್ತಲಿನ ಗ್ರಾಮಗಳಲ್ಲಿ ಕೊರೊನಾ ರೋಗದ ಕುರಿತು ಜಾಗೃತಿ

ಹಾಗೂ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಿದೆ. ಹಂಪಿ-ವಿರೂಪಾಪುರಗಡ್ಡಿ, ಸಾಣಾಪುರ, ಜಂಗ್ಲಿ, ರಂಗಾಪುರ,ಆನೆಗೊಂದಿ ರೆಸಾರ್ಟ್ ಗಳಲ್ಲಿ ಉಳಿದುಕೊಂಡಿರುವ ವಿದೇಶಿಗರ ಆರೋಗ್ಯ ತಪಾಸಣೆ ಮತ್ತು ರೆಸಾರ್ಟ್‌ ಹೊಟೇಲ್‌ಗ‌ಳ ಮಾಲೀಕರು ಕಾರ್ಮಿಕರಿಗೆ ರೋಗದ ಕುರಿತು ಮಾಹಿತಿ ನೀಡುವುದು ಅವಶ್ಯವಿದೆ. ದೇಶ ವಿದೇಶಗಳಲ್ಲಿ ಕೊರೊನಾ ನೆಗಡಿ ಜ್ವರಕ್ಕೆ ನೂರಾರು ಜನ ಬಲಿಯಾಗಿದ್ದರೂ ಇದುವರೆಗೂ ಸರಕಾರ ಅಥವಾ ಜಿಲ್ಲಾ ಆರೋಗ್ಯ ಇಲಾಖೆ ಯಾವುದೇ ಮುಂಜಾಗರೂಕತೆ ತೆಗೆದುಕೊಂಡಿಲ್ಲ. ಸತತ ಹಲವು ದಿನಗಳಿಂದ ನೆಗಡಿ ಜ್ವರದಿಂದ ಬಳಲುತ್ತಿರುವವ ರಕ್ತದ  ಮಾದರಿ ಪರೀಕ್ಷೆಯನ್ನು ತೆಗೆದುಕೊಂಡಿಲ್ಲ. ಕೂಡಲೇ ತಾಲೂಕು ಮತ್ತು ಜಿಲ್ಲಾಡಳಿತ ಜಾಗೃತೆ ತೆಗೆದುಕೊಳ್ಳದಿದ್ದರೆ ಇಲ್ಲಿಯೂ ಕೊರೊನಾ ಜ್ವರ ಹರಡುವ ಸಂಭವ ಇರುವ ಕುರಿತು ಸ್ಥಳೀಯರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಹಂಪಿ ವಿರೂಪಾಪುರಗಡ್ಡಿ ಪ್ರದೇಶಕ್ಕೆ ವಿದೇಶಿ ಪ್ರವಾಸಿಗರು ಹೆಚ್ಚಾಗಿ ಆಗಮಿಸುತ್ತಿರುವುದರಿಂದ ಸಹಜವಾಗಿ ಕೊರೊನಾ ರೋಗ ಹರಡುವ ಭಯಸ್ಥಳೀಯರಲ್ಲಿದೆ. ಕೊರೊನಾ ರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಇದುವರೆಗೂ ಆನೆಗೊಂದಿ-ಸಾಣಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಕೊರೊನಾ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಆನೆಗೊಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಮಾಹಿತಿ ನೀಡಲು ವ್ಯವಸ್ಥೆ ಮಾಡಲಾಗಿದೆ. ವಿದೇಶಿ ಪ್ರವಾಸಿಗರು ಉಳಿದುಕೊಳ್ಳುವ ರೆಸಾರ್ಟ್‌ ಮತ್ತು ಹೊಟೇಲ್‌ಗ‌ಳಲ್ಲಿ ಕೊರೊನಾ ಲಕ್ಷಣಗಳ್ಳುಳ್ಳ ಪ್ರವಾಸಿಗರ ಕುರಿತು ಮಾಹಿತಿ ಸಂಗ್ರಹ ಮಾಡಲಾಗುವುದು. – ಡಾ| ಲಿಂಗರಾಜು, ಜಿಲ್ಲಾ ಆರೋಗ್ಯ ಅಧಿಕಾರಿ.

 

-ಕೆ.ನಿಂಗಜ್ಜ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.