ಜಿಲ್ಲೆಯಲ್ಲಿ ಕೊರೊನಾ ಮಹಾ ಆರ್ಭಟ


Team Udayavani, Jan 23, 2022, 12:54 PM IST

್ಗಹಜಕಲಕಜಹಗ್ದಸ

ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ 3ನೇ ಅಲೆ ಆರ್ಭಟಿಸುತ್ತಿದ್ದು, ಶನಿವಾರ ಬರೊಬ್ಬರಿ 536 ಜನರಿಗೆ ಸೋಂಕು ದೃಢಪಡುವ ಮೂಲಕ ಜಿಲ್ಲೆಯ ಜನರಲ್ಲಿ ಆತಂಕ ತರಿಸಿದೆ. ಮೊದಲೆರಡು ಅಲೆಗಿಂತ 3ನೇ ಅಲೆಯಲ್ಲೇ ಇಷ್ಟೊಂದು ಸೋಂಕು ದೃಢಪಟ್ಟಿದ್ದು ಇದೇ ಮೊದಲಾಗಿದೆ.

ಜನತೆ ಕೋವಿಡ್‌ ನಿಯಮ ಪಾಲಿಸದಿದ್ದರೆ ಪರಿಸ್ಥಿತಿ ಮತ್ತಷ್ಟು ಬಿಗಿಡಾಯಿಸಲಿದೆ. ಕಳೆದ ಕೆಲ ದಿನಗಳಿಂದ ಎರಡಂಕಿಯಲ್ಲಿದ್ದ ಜಿಲ್ಲೆಯ ಕೊರೊನಾ ಸೋಂಕಿತರ ಪ್ರಮಾಣವು ವಾರದಿಂದ ಮೂರಂಕಿ ತಲುಪಿ ಆರ್ಭಟಿಸುತ್ತಿದೆ. ದಿನೇ ದಿನೆ ಸೋಂಕಿನ ಪ್ರಮಾಣವೂ ಹೆಚ್ಚಾಗುತ್ತಿರುವುದು ಜಿಲ್ಲಾಡಳಿತಕ್ಕೂ ಸ್ವಲ್ಪ ಕಸಿವಿಸಿಯನ್ನುಂಟು ಮಾಡಿದೆ.

ಇಷ್ಟಾದರೂ ಜನರು ಆಸ್ಪತ್ರೆಗೆ ದಾಖಲಾಗದೇ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಶನಿವಾರ ದೃಢಪಟ್ಟ ಸೋಂಕಿನ ಲೆಕ್ಕಾಚಾರದ ಪೈಕಿ ಗಂಗಾವತಿ ತಾಲೂಕಿನಲ್ಲಿ 211 ಜನರಿಗೆ ಸೋಂಕು ದೃಢಪಟ್ಟಿದ್ದರೆ, ಕೊಪ್ಪಳ ತಾಲೂಕಿನಲ್ಲಿ 122, ಕುಷ್ಟಗಿ ತಾಲೂಕಿನಲ್ಲಿ 108, ಯಲಬುರ್ಗಾ ತಾಲೂಕಿನಲ್ಲಿ 95 ಜನರು ಸೇರಿ 536 ಜನರಿಗೆ ಸೋಂಕು ದೃಢಪಟ್ಟಿದೆ. ಕಳೆದ ಮೊದಲ ಹಾಗೂ 2ನೇ ಅಲೆಯಲ್ಲಿ ಒಂದೇ ದಿನ ಇಷ್ಟೊಂದು ಜನರಿಗೆ ಸೋಂಕು ತಗುಲಿದ ಉದಾಹರಣೆಯಿಲ್ಲ. ಆದರೆ ಈ 3ನೇ ಅಲೆಯಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ಜನರಿಗೆ ಒಂದೇ ದಿನದಲ್ಲಿ ಜನರಿಗೆ ಸೋಂಕು ತಗುಲಿದೆ.

3ನೇ ಅಲೆಯಲ್ಲಿ ಮಕ್ಕಳಿಗೆ ಸೊಂಕು: ಜಿಲ್ಲೆಯಲ್ಲಿ ಮಕ್ಕಳಿಗೆ 3ನೇ ಅಲೆಯಲ್ಲಿ ಸೋಂಕು ದೃಢಪಡುವ ಪ್ರಮಾಣ ಹೆಚ್ಚಾಗಿದೆ. ಶನಿವಾರ ದೃಢಪಟ್ಟ 536 ಸೋಂಕಿತರಲ್ಲಿ 160 ಸೋಂಕಿತರು 18 ವರ್ಷದೊಳಗಿನ ಮಕ್ಕಳಿದ್ದಾರೆ. ಇನ್ನು ಜನವರಿ 1ರಿಂದ ಶನಿವಾರದವರೆಗೂ ಬರೊಬ್ಬರಿ 484 ಮಕ್ಕಳಿಗೆ ಸೋಂಕು ತಗುಲಿದೆ. ಉಳಿದವರು ವಯಸ್ಕರರಾಗಿದ್ದಾರೆ. ಮನೆ ಆರೈಕೆ: ಸೋಂಕು ದೃಢಪಡುವ ಪ್ರಮಾಣ ಹೆಚ್ಚಾಗಿದ್ದರೂ ಬಹುಪಾಲು ಜನರು ಮನೆಯಲ್ಲೇ ಚಿಕಿತ್ಸೆ ಪಡೆಯಲು ಇಚ್ಛೆಪಡುತ್ತಿದ್ದಾರೆ.

ಅಲ್ಲದೇ, ಸರ್ಕಾರ ಸಹ ತೀವ್ರತರನಾದ ಆರೋಗ್ಯ ಸಮಸ್ಯೆ ಎದುರಿಸುವ ವ್ಯಕ್ತಿಗಳು ಮಾತ್ರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಿರಿ ಎಂದು ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಹ ಸೋಂಕು ದೃಢಪಟ್ಟ ವ್ಯಕ್ತಿಗಳ ಆರೋಗ್ಯದ ಸ್ಥಿತಿಗತಿ ಅವಲೋಕಿಸಿ ಅದಕ್ಕೆ ತಕ್ಕಂತೆ ಮನೆಯಲ್ಲೇ ಔಷ ಧಿ ಕೊಟ್ಟು ಅವರನ್ನು ಹೋಂ ಐಸೋಲೇಷನ್‌ಗೆ ಒಳಗಾಗುವಂತೆ ಸೂಚಿಸುತ್ತಿದೆ. ತೀವ್ರ ತೊಂದರೆ ಎದುರಿಸುವ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವರೆಗೂ 1494 ಜನರು ಹೋಂ ಐಸೋಲೇಷನ್‌ಗೆ ಒಳಗಾಗಿದ್ದಾರೆ.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.