ಗವಿಮಠದಲ್ಲಿ ಸೋಂಕಿತರಿಗೆ ಉತ್ತಮ ಉಪಚಾರ


Team Udayavani, May 20, 2021, 6:12 PM IST

dsc_2992

ದ‌ತ್ತು ಕಮ್ಮಾರ

ಕೊಪ್ಪಳ: ಕೊರೊನಾ ಸೋಂಕಿತರ ಆರೈಕೆಯಲ್ಲಿ ಮುಂಚೂಣಿಯಲ್ಲಿರುವ ಗವಿಮಠವು ಊಟೋ  ಪಚಾರದಲ್ಲೂ ಒಂದು ಹೆಜ್ಜೆ ಮುಂದೆ ಇದೆ. ಅವರಿಗೆ ನಿತ್ಯ ಎರಡು ಹೊತ್ತು ಕಷಾಯ, ಚಹ, ಬಿಸ್ಕೇಟ್‌, ಸಕ್ಕರೆ ಕಾಯಿಲೆ ಸೋಂಕಿತರಿಗೆ ರಾಗಿ ಗಂಜಿಯನ್ನೂ ಕೊಡುತ್ತಿದ್ದಾರೆ.

ಯಾವ ಸ್ಟಾರ್‌ ಹೋಟೆಲ್‌ನಲ್ಲೂ ಇಲ್ಲದ ಸೌಲಭ್ಯ ಇಲ್ಲಿ ಇರುವುದು ಮಾದರಿಯಾಗಿದೆ. ಇಡೀ ಜಗತ್ತು ಕೋವಿಡ್‌ ಮಹಾಮಾರಿಗೆ ತತ್ತರಿಸಿ ಹೋಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಮಾಡಬೇಕಾದ ಕಾರ್ಯವನ್ನು ಸಂಘ-ಸಂಘ ಸಂಸ್ಥೆಗಳು, ಮಠ-ಮಾನ್ಯಗಳು ಮಾಡುತ್ತಿ ರುವುದು ಒಳ್ಳೆಯ ಬೆಳವಣಿಗೆ. ಅದರಲ್ಲೂ ಅಕ್ಷರ, ಅನ್ನ, ದಾಸೋಹಕ್ಕೆ ನಾಡಿಗೆ ಹೆಸರಾಗಿರುವ ಕೊಪ್ಪಳದ ಗವಿಸಿದ್ದೇಶ್ವರ ಮಠವು ಜಿಲ್ಲಾಡಳಿತದ ಸಹಕಾರದೊಂದಿಗೆ 100 ಬೆಡ್‌ಗಳ ಆಕ್ಸಿಜನ್‌ ಆಸ್ಪತ್ರೆ ಆರಂಭಿಸಿದೆ. ಮತ್ತೂಂದು ವಾರದಲ್ಲಿ 200 ಬೆಡ್‌ನ‌ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಿದೆ.

ಕೇರ್‌ ಸೆಂಟರ್‌ ಹಾಗೂ ಆಸ್ಪತ್ರೆ  ಯಲ್ಲಿ ಬಹುಪಾಲು ಸೋಂಕಿತರು ದಾಖಲಾಗಿ ಆರೈಕೆ ಯಲ್ಲಿದ್ದು, ಅವರ ಯೋಗಕ್ಷೇಮದ ಬಗ್ಗೆ ಗವಿಸಿದ್ದೇಶ್ವರ ಸ್ವಾಮೀಜಿ ನಿಗಾ ವಹಿಸಿದ್ದಾರೆ. ನಿತ್ಯ 2 ಬಾರಿ ಕಷಾಯ: ಕೋವಿಡ್‌ ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಪ್ರಸ್ತುತ ವೈದ್ಯಕೀಯ ಚಿಕಿತ್ಸಾ ವಿಧಾನ ನಡೆದಿದೆ. ಅದರೊಟ್ಟಿಗೆ ಗವಿಮಠದ ಪರಂಪರೆಯಿಂದ ಬೆಳೆದು ಬಂದಿರುವ ಆರ್ಯುವೇದ ಪದ್ಧತಿಯನ್ನೂ ಸೋಂಕಿತರಿಗೆ ಅನುಕರಣೆ ಮಾಡುತ್ತಿರುವುದು ಗಮನಾರ್ಹ ಸಂಗತಿ.

ಯೋಗ, ಧ್ಯಾನ, ಅಧ್ಯಾತ್ಮದ ಮೂಲಕ ಮನಸ್ಸಿನ ಒತ್ತಡ ನಿವಾರಿಸುವ ಜೊತೆಗೆ ಆರೋಗ್ಯ ಚೈತನ್ಯಕ್ಕಾಗಿ ನಿತ್ಯ ಬೆಳಗ್ಗೆ ಹಾಗೂ ರಾತ್ರಿ ಎರಡು ಬಾರಿ ಕಷಾಯ ನೀಡಲಾಗುತ್ತಿದೆ. ಇದರೊಟ್ಟಿಗೆ ಚಹಾ, ಬಿಸ್ಕೇಟ್‌ಗಳನ್ನೂ ಕೊಡಲಾಗುತ್ತಿದೆ. ಕಷಾಯವೂ ಸೋಂಕಿತರಿಗೆ ಒಂದು ರೀತಿಯ ಔಷ ಧಿಯಾಗಿದೆ. ಇನ್ನೂ ಸಕ್ಕರೆ ಕಾಯಿಲೆಯಿಂದ ಬಳಲುವ ಸೋಂಕಿತರಿಗೆ ರಾಗಿ ಗಂಜಿಯನ್ನೂ ಮಾಡಿ ಕೊಡಲಾಗುತ್ತಿದೆ. ಉತ್ತಮ ಸೌಲಭ್ಯ: ನಿಜಕ್ಕೂ ಗವಿಮಠದ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸೋಂಕಿತರಿಗೆ ನೀಡುವ ಆತಿಥ್ಯ, ಆರೈಕೆ ಸ್ಟಾರ್‌ ಹೋಟೆಲ್‌ನಲ್ಲಿಯೂ ಇಲ್ಲ. ಅಷ್ಟೊಂದು ಎಚ್ಚರಿಕೆಯಿಂದ ಮನೆಯ ಮಕ್ಕಳಂತೆ, ಭಕ್ತರಂತೆ ಆರೈಕೆ ಮಾಡಲಾಗುತ್ತಿದೆ.

ಹೋಟೆಲ್‌ಗ‌ಳಲ್ಲಿ ಹಣ ಕೊಟ್ಟಂತೆಲ್ಲ ಕಾಳಜಿ ವಹಿಸುವವರನ್ನು ನೋಡಿದ್ದೇವೆ. ಆದರೆ ಮಠದಲ್ಲಿ ಸೇವೆ ಎನ್ನುವ ಒಂದೇ ಒಂದು ಮನೋಭಾವದಿಂದ ಸಾಮಾಜಿಕ ಕಳಕಳಿಯಿಂದ ಇಲ್ಲಿ ಸೋಂಕಿತರ ಆರೈಕೆಯಲ್ಲಿ ತೊಡಗಿರುವುದು ನಿಜಕ್ಕೂ ಗಮನಾರ್ಹ ಸಂಗತಿ. ಇಂತಹ ಸೌಕರ್ಯ ರಾಜ್ಯ ಸೇರಿದಂತೆ ದೇಶದ ಯಾವ ಕೋವಿಡ್‌ ಆಸ್ಪತ್ರೆ, ಕೇರ್‌ ಸೆಂಟರ್‌ ಗಳಲ್ಲೂ ಕಾಣುವುದು ಅಪರೂಪ. ಇಲ್ಲಿನ ಸಕಲ ಸೌಲಭ್ಯಗಳನ್ನು ನೋಡಿದ ಸೋಂಕಿತರು ಮನೆ ಬಿಟ್ಟು ಗವಿಮಠದ ಕೋವಿಡ್‌ ಕೇರ್‌ ಸೆಂಟರ್‌ಗೆ ದೌಡಾಯಿಸಿ ಬರುತ್ತಿದ್ದಾರೆ. ಕೇರ್‌ ಸೆಂಟರ್‌ ಆರಂಭವಾದ ಒಂದೇ ದಿನದಲ್ಲಿ 50ಕ್ಕೂ ಹೆಚ್ಚು ಸೋಂಕಿತರು ಆಗಮಿಸಿದ್ದಾರೆ.

ಒಟ್ಟಿನಲ್ಲಿ ಕೊಪ್ಪಳದ ಶ್ರೀ ಗವಿಮಠ ಹಾಗೂ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮಿಗಳ ಸೇವಾ ಕಾರ್ಯದ ಬಗ್ಗೆ ಎಷ್ಟು ವರ್ಣಿಸಿದರೂ ಸಾಲದು. ಎಷ್ಟು ಗುಣಗಾನ ಮಾಡಿದರೂ ಸಾಲದು. ಸಂಕಷ್ಟದ ಕಾಲದಲ್ಲಿ ಗವಿಮಠ ಸೋಂಕಿತರಿಗೆ ಸಂಜೀವಿನಿಯಾಗಿರುವುದು ಅಕ್ಷರಶಃ ಸತ್ಯ.

ಟಾಪ್ ನ್ಯೂಸ್

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.