ಮುಂಗಾರು ಪೂರ್ವದಲ್ಲಿ ಸಿಡಿಲಿನಿಂದ ರಕ್ಷಿಸಿಕೊಳ್ಳಲು ದಾಮಿನಿ ಆ್ಯಪ್ ಬಳಸಲು ಸಲಹೆ


Team Udayavani, Apr 12, 2022, 7:34 PM IST

ಮುಂಗಾರು ಪೂರ್ವದಲ್ಲಿ ಸಿಡಿಲಿನಿಂದ ರಕ್ಷಿಸಿಕೊಳ್ಳಲು ದಾಮಿನಿ ಆ್ಯಪ್ ಬಳಸಲು ಸಲಹೆ

ಗಂಗಾವತಿ: ಮುಂಗಾರು ಪೂರ್ವದಲ್ಲಿಗುಡುಗು-ಸಿಡಿಲು ಸಹಿತ ಮಳೆಯಾಗುತ್ತಿದ್ದು, ಇದರಿಂದ ರಾಜ್ಯದಲ್ಲಿ ಸಾವು-ನೋವುಗಳು ಕಂಡು ಬರುತ್ತಿವೆ. ಇದರ ಪ್ರಭಾವ ಕೊಪ್ಪಳ ಜಿಲ್ಲೆಯಲ್ಲೂ ಕಾಣಿತ್ತಿದ್ದು, ಇದರಿಂದ ರೈತರು ಮತ್ತು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ ಮಿಂಚು ಬರುವ ಮುನ್ಸೂಚನೆಯನ್ನು ತಿಳಿದುಕೊಳ್ಳಲು ದಾಮಿನಿ ಆ್ಯಪ್ ಅನ್ನುಬಳಸಿಕೊಳ್ಳುವಂತೆ ಕೃಷಿ ವಿಜ್ಞಾನಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಎಮ್. ವಿ. ರವಿ ಪ್ರಕಟಣೆಯಲ್ಲಿ ಸಲಹೆ ನೀಡಿದ್ದಾರೆ.

ಈ ಮಿಂಚಿನ ಎಚ್ಚರಿಕೆಯ ಆ್ಯಪ್‌ನ್ನು ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆಯು ಬಿಡುಗಡೆಗೊಳಿಸಿದ್ದು, ಇದುಕನಿಷ್ಠ 30-45 ನಿಮಿಷಗಳ ಮೊದಲುಜನರನ್ನು ಮಿಂಚಿನಎಚ್ಚರಿಕೆಯ ಸಂದೇಶವನ್ನು ಕೊಡುತ್ತದೆ. ಹವಾಮಾನ ವೈಪರೀತ್ಯಗಳಾದ ಪ್ರವಾಹ, ಬರ, ಮಿಂಚು, ಭಾರೀ ಮಳೆ, ಶೀತ ಅಲೆಗಳು,ಶಾಖದ ಅಲೆಗಳು ಮತ್ತು ಮಿಂಚಿನ ಹೊಡೆತಗಳು ಭಾರತದಲ್ಲಿ ಗರಿಷ್ಠ ಸಾವು ನೋವುಗಳಿಗೆ ಕಾರಣವಾಗಿವೆ.

ಹೀಗಾಗಿ ಈ ಆ್ಯಪ್‌ನ್ನು ಪ್ರತಿಯೊಬ್ಬರೈತರು ಮತ್ತು ಸಾರ್ವಜನಿಕರು ತಮ್ಮ ಗೂಗಲ್ ಪ್ಲೇಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಂಡು,ಅದರಲ್ಲಿ ಬಳಕೆದಾರರ ಹೆಸರು, ದೂರವಾಣಿ ಸಂಖ್ಯೆ, ವಿಳಾಸ, ಪಿನ್‌ಕೋಡ್ ಮತ್ತು ಉದ್ಯೋಗವನ್ನು ನೊಂದಾಯಿಸಬೇಕು.ಬಳಿಕ ಹೋಮ್ ಪೇಜ್‌ನಲ್ಲಿ ಒಂದು ನಕ್ಷೆ ಕಾಣುತ್ತದೆ, ಅದರ ಮೇಲ್ಬಾಗದಲ್ಲಿ ನಮಗೆ ಬೇಕಾದ ಸ್ಥಳದ ಹೆಸರು ನಮೂದಿಸಿ ಸರ್ಚ ಮಾಡಬೇಕು.ಅದರಲ್ಲಿ ಮೂರು ಬಣ್ಣದ ಸಂಕೇತಗಳಿವೆ.

ಇದರಲ್ಲಿಹಳದಿ ಬಣ್ಣದ ಸಂಕೇತವು 5 ನಿಮಿಷಗಳಲ್ಲಿ ಸಂಭವಿಸುವ ಮಿಂಚನ್ನು ಸೂಚಿಸುತ್ತದೆ; ನೀಲಿ ಸಂಕೇತವು 5 ರಿಂದ 10 ನಿಮಿಷಗಳಲ್ಲಿ ಸಂಭವಿಸುವ ಮಿಂಚಿನ ಮಾಹಿತಿಯನ್ನು ನೀಡುತ್ತದೆ ಮತ್ತು ನೇರಳೆ ಸಂಕೇತವು 10 ರಿಂದ 15 ನಿಮಿಷಗಳಲ್ಲಿ ಸಂಭವಿಸುವ ಮಿಂಚಿನ ಮಾಹಿತಿಯನ್ನು ನೀಡುತ್ತದೆ.ಜೊತೆಗೆ ರೈತರು ಅಥವಾ ಸಾರ್ವಜನಿಕರು ಎಲ್ಲಿ ಮತು ್ತಯಾವಾಗ ತಂಗಬೇಕು ಎಂಬ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತದೆ.

ಈ ಮೂಲಕ ಒಬ್ಬ ವ್ಯಕ್ತಿಯು ಘಟನೆಯ 20 ಕಿ. ಮೀ ವ್ಯಾಪ್ತಿಯಲ್ಲಿರುವಾಗ 30 ರಿಂದ 45 ನಿಮಿಷಗಳ ಮೊದಲು ಎಚ್ಚರಿಕೆ ಸಂದೇಶವನ್ನು ಕೊಡುತ್ತದೆ.ಇದರಿಂದ ರೈತರು ಮತ್ತು ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳಿ ತಮ್ಮರಕ್ಷಣೆ ಮಾಡಿಕೊಳ್ಳಲು, ಈದಾಮಿನಿ ಆ್ಯಪ್‌ವು ಸಹಾಯವಾಗಲಿದೆ  ಹೆಚ್ಚಿನ ಮಾಹಿತಿಗಾಗಿ  ವಿಷಯ ತಜ್ಞರಾದ ಡಾ| ಫಕೀರಪ್ಪಅರಭಾಂವಿ (8123922495) ಮತ್ತು ಹವಾಮಾನ ವೀಕ್ಷಕಿಯಾದ ಮಮತಾ ಮದ್ಲಿ (9060526493) ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್‌ ಸಿಬ್ಬಂದಿ

ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್‌ ಸಿಬ್ಬಂದಿ

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

crimebb

Kasaragod ಅಪರಾಧ ಸುದ್ದಿಗಳು

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.